ETV Bharat / state

‘ರಾಜಕೀಯ ಪ್ರಚಾರಕ್ಕೆ ಅನುಮತಿ ನೀಡುವ ಜಿಲ್ಲಾಡಳಿತ ಅಂಬೇಡ್ಕರ್ ಜಯಂತಿಗೆ ಏಕೆ ನೀಡೋದಿಲ್ಲ’ - ಡಿಸಿ ಹಿರೇಮಠ ಸುದ್ದಿ,

ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಿಸೋಣ, ಆದರೆ ಮೆರವಣಿಗೆ ಬೇಡವೆಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದ್ದಾರೆ.

Ambedkar Jayanti celebrate, Ambedkar Jayanti celebrate to grand, Ambedkar Jayanti No marching, DC Hiremath, DC Hiremath news, ಅಂಬೇಡ್ಕರ್​ ಜಯಂತಿ ಆಚರಣೆ, ವಿಜೃಂಭಣೆಯಿಂದ ಅಂಬೇಡ್ಕರ್​ ಜಯಂತಿ ಆಚರಣೆ, ಅಂಬೇಡ್ಕರ್​ ಜಯಂತಿ ವೇಳೆ ಮೆರವಣಿಗೆ ಇಲ್ಲ, ಡಿಸಿ ಹಿರೇಮಠ, ಡಿಸಿ ಹಿರೇಮಠ ಸುದ್ದಿ,
ವಿಜೃಂಭಣೆ ಅಂಬೇಡ್ಕರ್ ಜಯಂತಿ ಆಚರಿಸಿ
author img

By

Published : Mar 23, 2021, 10:12 AM IST

ಬೆಳಗಾವಿ: ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಆಚರಣೆಗೆ ಅವಕಾಶವಿದ್ದು, ಮೆರವಣಿಗೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.

ಜಿಲ್ಲಾಧಿಕಾರಿ ಹಿರೇಮಠ ಹೇಳಿಕೆ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ಕಳೆದ ವರ್ಷ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಆಗಿಲ್ಲ. ಈ ವರ್ಷವು ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೋನಾ ವೇಗವಾಗಿ ಹಬ್ಬುತ್ತಿದೆ. ಹೀಗಾಗಿ ಬೆಳಗಾವಿ ಗಡಿ ಜಿಲ್ಲೆಯಲ್ಲಿ ಎಚ್ಚರ ವಹಿಸಬೇಕಾಗಿದೆ. ಹೀಗಾಗಿ ಈ ವರ್ಷವೂ ಸರಳ, ಸಾಂಕೇತಿಕವಾಗಿ, ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿಯನ್ನು ಅಂಬೇಡ್ಕರ್ ಉದ್ಯಾನದಲ್ಲಿ ಆಚರಣೆ ಮಾಡಲಾಗುವುದು ಎಂದರು.

ಇದಲ್ಲದೇ ಏ.17 ರಂದು ಬೆಳಗಾವಿ ಉಪಚುನಾವಣೆ ಇದ್ದು, ಏ.15ರಂದು ಅಂಬೇಡ್ಕರ್ ಜಯಂತಿ ಇದೆ. ಹಾಗಾಗಿ ಮುಂಜಾಗ್ರತೆ ಕ್ರಮವಾಗಿ ಮೆರವಣಿಗೆ ಬಿಟ್ಟು ವಿಜೃಂಭಣೆಯಿಂದಲ್ಲೇ ಜಯಂತಿ ಆಚರಣೆ ಮಾಡೋಣ ಎಂದು ಸಮಾಜದ ಮುಖಂಡರಿಗೆ ಮನವಿ ಮಾಡಿಕೊಂಡರು.

ದಲಿತ ಸಂಘಟನೆ ಪದಾಧಿಕಾರಿಗಳು ಮಾತನಾಡಿ, ಕಳೆದ ವರ್ಷ ಕೋವಿಡ್ ನಿಯಮಗಳ ಕಾರಣದಿಂದ ವಿಜೃಂಭಣೆಯಿಂದ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷವೂ ಕೊರೊನಾ ಕಾರಣ ಹೇಳಲಾಗುತ್ತಿದೆ. ಅಮಿತ್ ಶಾ ಸೇರಿದಂತೆ ರಾಜಕೀಯ ಸಮಾವೇಶದ ಜಾಥಾಗೆ ಅನುಮತಿ ನೀಡುವ ಜಿಲ್ಲಾಡಳಿತ ಅಂಬೇಡ್ಕರ್ ಜಯಂತಿಗೆ ಏತಕೆ ನೀಡೋದಿಲ್ಲ. ಅಂಬೇಡ್ಕರ್ ಮೆರವಣಿಗೆಗೆ ಅವಕಾಶ ನೀಡಲೇಬೇಕು ಎಂದು ಮನವಿ ಮಾಡಿಕೊಂಡರು.

ಬೆಳಗಾವಿ: ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಆಚರಣೆಗೆ ಅವಕಾಶವಿದ್ದು, ಮೆರವಣಿಗೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.

ಜಿಲ್ಲಾಧಿಕಾರಿ ಹಿರೇಮಠ ಹೇಳಿಕೆ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ಕಳೆದ ವರ್ಷ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಆಗಿಲ್ಲ. ಈ ವರ್ಷವು ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೋನಾ ವೇಗವಾಗಿ ಹಬ್ಬುತ್ತಿದೆ. ಹೀಗಾಗಿ ಬೆಳಗಾವಿ ಗಡಿ ಜಿಲ್ಲೆಯಲ್ಲಿ ಎಚ್ಚರ ವಹಿಸಬೇಕಾಗಿದೆ. ಹೀಗಾಗಿ ಈ ವರ್ಷವೂ ಸರಳ, ಸಾಂಕೇತಿಕವಾಗಿ, ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿಯನ್ನು ಅಂಬೇಡ್ಕರ್ ಉದ್ಯಾನದಲ್ಲಿ ಆಚರಣೆ ಮಾಡಲಾಗುವುದು ಎಂದರು.

ಇದಲ್ಲದೇ ಏ.17 ರಂದು ಬೆಳಗಾವಿ ಉಪಚುನಾವಣೆ ಇದ್ದು, ಏ.15ರಂದು ಅಂಬೇಡ್ಕರ್ ಜಯಂತಿ ಇದೆ. ಹಾಗಾಗಿ ಮುಂಜಾಗ್ರತೆ ಕ್ರಮವಾಗಿ ಮೆರವಣಿಗೆ ಬಿಟ್ಟು ವಿಜೃಂಭಣೆಯಿಂದಲ್ಲೇ ಜಯಂತಿ ಆಚರಣೆ ಮಾಡೋಣ ಎಂದು ಸಮಾಜದ ಮುಖಂಡರಿಗೆ ಮನವಿ ಮಾಡಿಕೊಂಡರು.

ದಲಿತ ಸಂಘಟನೆ ಪದಾಧಿಕಾರಿಗಳು ಮಾತನಾಡಿ, ಕಳೆದ ವರ್ಷ ಕೋವಿಡ್ ನಿಯಮಗಳ ಕಾರಣದಿಂದ ವಿಜೃಂಭಣೆಯಿಂದ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷವೂ ಕೊರೊನಾ ಕಾರಣ ಹೇಳಲಾಗುತ್ತಿದೆ. ಅಮಿತ್ ಶಾ ಸೇರಿದಂತೆ ರಾಜಕೀಯ ಸಮಾವೇಶದ ಜಾಥಾಗೆ ಅನುಮತಿ ನೀಡುವ ಜಿಲ್ಲಾಡಳಿತ ಅಂಬೇಡ್ಕರ್ ಜಯಂತಿಗೆ ಏತಕೆ ನೀಡೋದಿಲ್ಲ. ಅಂಬೇಡ್ಕರ್ ಮೆರವಣಿಗೆಗೆ ಅವಕಾಶ ನೀಡಲೇಬೇಕು ಎಂದು ಮನವಿ ಮಾಡಿಕೊಂಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.