ETV Bharat / state

ಕೃಷ್ಣಾನದಿ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ತಹಶೀಲ್ದಾರ್​ಗೆ ಮನವಿ - ಕೃಷ್ಣ ನದಿ ನೆರೆ ಸಂತ್ರಸ್ತರಸುದ್ದಿ

ತಾಲೂಕಿನ ವಿವಿಧ ಗ್ರಾಮಗಳ ನೆರೆ ಸಂತ್ರಸ್ತರು ಅಥಣಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು.

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ತಹಶೀಲ್ದಾರ್​ಗೆ ಮನವಿ
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ತಹಶೀಲ್ದಾರ್​ಗೆ ಮನವಿ
author img

By

Published : Jun 24, 2020, 2:37 PM IST

ಅಥಣಿ: ಕಳೆದ ಬಾರಿ ಕೃಷ್ಣಾ ನದಿಪಾತ್ರದ ಗ್ರಾಮಗಳ ನೆರೆ ಸಂತ್ರಸ್ತರ ಪರಿಹಾರ ಹಾಗೂ ಸರ್ವೇ ಕಾರ್ಯದಲ್ಲಿ ತಾರತಮ್ಯ ಖಂಡಿಸಿ, ತಂಗಡಿ ಗ್ರಾಮದ ಜನರು ಅಥಣಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ನೆರೆ ಪರಿಹಾರ ಹಾಗೂ ಸರ್ವೆ ಕಾರ್ಯದಲ್ಲಿ ತಾರತಮ್ಯ ಹಾಗೂ ನಿಜವಾದ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಈ ವೇಳೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಉಪಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ನಮಗೆ ಸರ್ಕಾರದಿಂದ ಪರಿಹಾರ ಕೊಡಿಸಿ ಎಂದು ಮನವಿ ಸಲ್ಲಿಸಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ತಹಶೀಲ್ದಾರ್​ಗೆ ಮನವಿ

ಇದೇ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತ ಮಹದೇವಪ್ಪ, 2019 ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪ್ರವಾಹಕ್ಕೆ ನಮ್ಮ ಮನೆಗಳು ಮುಳುಗಿ ಬಿದ್ದು ಹಾಳಾಗಿ ನಾವೆಲ್ಲಾ ಬೀದಿ ಪಾಲಾಗಿದ್ದೇವೆ. ಸರ್ಕಾರ ನಿಜವಾದ ಮನೆ ಬಿದ್ದವರಿಗೆ ಪರಿಹಾರ ಕೊಟ್ಟಿಲ್ಲ, ಬದಲಾಗಿ ಮನೆ ಬೀಳದವರಿಗೆ ಪರಿಹಾರ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಅಥಣಿ: ಕಳೆದ ಬಾರಿ ಕೃಷ್ಣಾ ನದಿಪಾತ್ರದ ಗ್ರಾಮಗಳ ನೆರೆ ಸಂತ್ರಸ್ತರ ಪರಿಹಾರ ಹಾಗೂ ಸರ್ವೇ ಕಾರ್ಯದಲ್ಲಿ ತಾರತಮ್ಯ ಖಂಡಿಸಿ, ತಂಗಡಿ ಗ್ರಾಮದ ಜನರು ಅಥಣಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ನೆರೆ ಪರಿಹಾರ ಹಾಗೂ ಸರ್ವೆ ಕಾರ್ಯದಲ್ಲಿ ತಾರತಮ್ಯ ಹಾಗೂ ನಿಜವಾದ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಈ ವೇಳೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಉಪಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ನಮಗೆ ಸರ್ಕಾರದಿಂದ ಪರಿಹಾರ ಕೊಡಿಸಿ ಎಂದು ಮನವಿ ಸಲ್ಲಿಸಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ತಹಶೀಲ್ದಾರ್​ಗೆ ಮನವಿ

ಇದೇ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತ ಮಹದೇವಪ್ಪ, 2019 ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪ್ರವಾಹಕ್ಕೆ ನಮ್ಮ ಮನೆಗಳು ಮುಳುಗಿ ಬಿದ್ದು ಹಾಳಾಗಿ ನಾವೆಲ್ಲಾ ಬೀದಿ ಪಾಲಾಗಿದ್ದೇವೆ. ಸರ್ಕಾರ ನಿಜವಾದ ಮನೆ ಬಿದ್ದವರಿಗೆ ಪರಿಹಾರ ಕೊಟ್ಟಿಲ್ಲ, ಬದಲಾಗಿ ಮನೆ ಬೀಳದವರಿಗೆ ಪರಿಹಾರ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.