ETV Bharat / state

ಬಾಲಕನಿಗೆ ಮದ್ಯ ಕುಡಿಸಿ ಅಪಹರಣಕ್ಕೆ ಯತ್ನ: ಅಥಣಿಯಲ್ಲಿ ಸಿಕ್ಕಿಬಿದ್ದ ಖದೀಮರು

ಬೆಳಗಾವಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಾಲಕನೋರ್ವನಿಗೆ ಮದ್ಯ ಕುಡಿಸಿ 30 ಕಿಲೋಮೀಟರ್​ ದೂರದ ಅಥಣಿಗೆ ರಾಯಬಾಗದಿಂದ ಕರೆತಂದಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

author img

By

Published : Dec 4, 2019, 7:05 PM IST

atn
ಅಥಣಿಯಲ್ಲಿ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಆರೋಪಿಗಳು

ಅಥಣಿ: ಬಾಲಕನ ಅಪಹರಣಕ್ಕೆ ಯತ್ನಿಸಿದ ಆರೋಪಿಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ಅಥಣಿಯಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿಗಳು

ರಾಯಬಾಗ ತಾಲೂಕಿನ ಮುಗಳಕೋಡ ಗ್ರಾಮದ ಏಳು ವರ್ಷದ ಬಾಲಕನಿಗೆ ಮದ್ಯ ಕುಡಿಸಿ, ಆತನನ್ನು 30 ಕಿಲೋಮೀಟರ್ ದೂರದ ಅಥಣಿ ಪಟ್ಟಣಕ್ಕೆ ಕರೆತಂದಿದ್ದರು. ಈ ವೇಳೆ ಖದೀಮರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಯಾವ ಉದ್ದೇಶಕ್ಕಾಗಿ ಬಾಲಕನ ಅಪಹರಣಕ್ಕೆ ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಬಾಲಕನ ಅಸ್ವಸ್ಥತೆ ಹಾಗೂ ಆರೋಪಿಗಳ ಚಲನವಲನಗಳನ್ನು ಗಮನಿಸಿದ ಜನರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬೀದರ್​ ಜಿಲ್ಲೆಯ ಬಾಲ್ಕಿ ತಾಲೂಕಿನ ವಿಷ್ಣಪ್ಪ ಹತ್ತಿಹಾಳ ಹಾಗೂ ಕಲಬುರಗಿ ಮೂಲದ ವಿಶ್ವನಾಥ ಪಾಟೀಲ್​ ಎಂದು ಗುರುತಿಸಲಾಗಿದೆ. ಈ ಇಬ್ಬರನ್ನೂ ಸಾರ್ವಜನಿಕರೇ ಅಥಣಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಸ್ವಸ್ಥನಾಗಿದ್ದ ಬಾಲಕನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಥಣಿ: ಬಾಲಕನ ಅಪಹರಣಕ್ಕೆ ಯತ್ನಿಸಿದ ಆರೋಪಿಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ಅಥಣಿಯಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿಗಳು

ರಾಯಬಾಗ ತಾಲೂಕಿನ ಮುಗಳಕೋಡ ಗ್ರಾಮದ ಏಳು ವರ್ಷದ ಬಾಲಕನಿಗೆ ಮದ್ಯ ಕುಡಿಸಿ, ಆತನನ್ನು 30 ಕಿಲೋಮೀಟರ್ ದೂರದ ಅಥಣಿ ಪಟ್ಟಣಕ್ಕೆ ಕರೆತಂದಿದ್ದರು. ಈ ವೇಳೆ ಖದೀಮರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಯಾವ ಉದ್ದೇಶಕ್ಕಾಗಿ ಬಾಲಕನ ಅಪಹರಣಕ್ಕೆ ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಬಾಲಕನ ಅಸ್ವಸ್ಥತೆ ಹಾಗೂ ಆರೋಪಿಗಳ ಚಲನವಲನಗಳನ್ನು ಗಮನಿಸಿದ ಜನರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬೀದರ್​ ಜಿಲ್ಲೆಯ ಬಾಲ್ಕಿ ತಾಲೂಕಿನ ವಿಷ್ಣಪ್ಪ ಹತ್ತಿಹಾಳ ಹಾಗೂ ಕಲಬುರಗಿ ಮೂಲದ ವಿಶ್ವನಾಥ ಪಾಟೀಲ್​ ಎಂದು ಗುರುತಿಸಲಾಗಿದೆ. ಈ ಇಬ್ಬರನ್ನೂ ಸಾರ್ವಜನಿಕರೇ ಅಥಣಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಸ್ವಸ್ಥನಾಗಿದ್ದ ಬಾಲಕನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:ಅಪ್ರಾಪ್ತ ಬಾಲಕನ ಅಪಹರಣ ಯತ್ನ ಅಥಣಿ ಪಟ್ಟನದಲ್ಲಿ ಸಾರ್ವಜನಿಕ ರಿಗೆ ಸಿಕ್ಕಿಬಿದ್ದ ಆರೋಪಿಗಳು
Body:ಅಥಣಿ ವರದಿ:

*ಅಪ್ರಾಪ್ತ ಬಾಲಕನ ಅಪಹರಣ ಯತ್ನ ಸಾರ್ವಜನಿಕ ರಿಗೆ ಸಿಕ್ಕಿಬಿದ್ದ ಆರೋಪಿಗಳು*.

Anchor:
ಹಾಡಹಗಲೆ ಬಾಲನೊಬ್ಬನ ಅಪಹರಣಕ್ಕೆ ಯತ್ನಿಸಿ ದುಷ್ಕರ್ಮಿಗಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ರಾಯಭಾಗ ತಾಲೂಕಿನ ಮುಗಳಕೋಡ ಗ್ರಾಮದ ಏಳು ವರ್ಷದ ಅಪ್ರಾಪ್ತ ಬಾಲಕನಿಗೆ ಮದ್ಯ ಕುಡಿಸಿ,ಅಸ್ವಸ್ಥಗೊಂಡ ಆತನನ್ನು ಮುವತ್ತು ಕಿಲೋಮೀಟರ ದೂರದ ಅಥಣಿ ಪಟ್ಟಣಕ್ಕೆ ಕರೆತರಲಾಗಿದ್ದು ಯಾವ ಉದ್ದೇಶಕ್ಕಾಗಿ ಬಾಲಕನ ಅಪಹರಣಕ್ಕೆ ಯತ್ನಿಸಲಾಗಿದೆ ಅನ್ನುವದು ಪೋಲೀಸರ ತನಿಖೆಯಿಂದಷ್ಟೇ ತಿಳಿದು ಬರಬೆಕಾಗಿದೆ,

ಆರೋಪಿಗಳನ್ನು ಸಂಶಯಗೊಂಡು ಸಾರ್ವಜನಿಕರು ವಿಚಾರಿಸಿದಾಗ ಪರಾರಿಯಾಗಲು ಯತ್ನಿಸಿದ ಇಬ್ಬರನ್ನು ಸಾರ್ವಜನಿಕರೇ ಹಿಡಿದು ಪೋಲಿಸರಿಗೆ ಒಪ್ಪಿಸಿದ್ದು ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ವಿಷ್ಣಪ್ಪ ಹತ್ತಿಹಾಳ ಹಾಗೂ ಗುಲ್ಬರ್ಗ ಮೂಲದ ವಿಶ್ವನಾಥ ಪಾಟೀಲ ಇಬ್ಬರನ್ನೂ ಅಥಣಿ ಪೋಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದು ಅಸ್ವಸ್ಥನಾಗಿದ್ದ ಬಾಲಕನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


(ಬಾಲಕನ ಹೆಸರು ತಿಳಿದು ಬಂದಿಲ್ಲ)Conclusion:ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.