ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ. ಓರ್ವನನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಮತ್ತೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಈ ವೇಳೆ ನಾಲ್ವರನ್ನು ತೀವ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಮೂವರನ್ನು ವಾಪಸ್ ಕಳುಹಿಸಿದ್ದಾರೆ. ನಿನ್ನೆಯಿಂದ ಗ್ರಾಮದಲ್ಲಿ ಸಿಸಿಬಿ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಇತ್ತ ವಶಕ್ಕೆ ಪಡೆದ ಓರ್ವನನ್ನು ಕಾಗವಾಡದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಂಕಿತ ಆರೋಪಿ ಶಿರಗುಪ್ಪಿ ಗ್ರಾಮದವ ಎನ್ನಲಾಗ್ತಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಚಿತ್ರದುರ್ಗ ನಗರ ಪ್ರವೇಶಿಸಲು ಮೈನ್ಸ್ ಲಾರಿಗಳಿಗೆ ನಿರ್ಬಂಧ: ಡಿಸಿ ಆದೇಶ
ಈ ಬಗ್ಗೆ ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಅವರನ್ನ ಕೇಳಿದ್ರೆ, ಕಾಗವಾಡ ಪೊಲೀಸರೇ ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.