ETV Bharat / state

ಶೇ.50ರಷ್ಟು ಬೆಡ್ ಜಿಲ್ಲಾಡಳಿತಕ್ಕೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಬೆಳಗಾವಿ ಡಿಸಿ ಸೂಚನೆ

author img

By

Published : Apr 27, 2021, 7:04 AM IST

ಬೆಳಗಾವಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಭ್ಯವಿರುವ 3925 ಬೆಡ್​ಗಳ ಪೈಕಿ 2000 ಬೆಡ್​ಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕಾಗುತ್ತದೆ. ಕೋವಿಡ್ ಸೋಂಕಿತರ ಸಂಖ್ಯೆ‌ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ವಾರದೊಳಗೆ ಉಳಿದ ಬೆಡ್​ಗಳನ್ನು ಕೋವಿಡ್ ಚಿಕಿತ್ಸೆಗೆ‌ ಮೀಸಲಿಟ್ಟು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು.

Belgavi
ಖಾಸಗಿ ಆಸ್ಪತ್ರೆಗಳಿಗೆ ಬೆಳಗಾವಿ ಡಿಸಿ ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಆಯುಷ್ಮಾನ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 3,925 ಬೆಡ್​ಗಳು ಲಭ್ಯವಿದೆ. ಇದರಲ್ಲಿ ಶೇ.50 ರಷ್ಟು ಬೆಡ್​ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತದ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಜ್ಞರ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಭ್ಯವಿರುವ 3925 ಬೆಡ್​ಗಳ ಪೈಕಿ ಶೇ.50 ರಷ್ಟು ಬೆಡ್​ಗಳನ್ನು ಅಂದರೆ‌ ಸುಮಾರು 2000 ಬೆಡ್​ಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕಾಗುತ್ತದೆ. ಆದರೆ‌ ಇದುವರೆಗೆ ಕೇವಲ 641 ಬೆಡ್‌ಗಳನ್ನು ಮಾತ್ರ ಮೀಸಲಿಡಲಾಗಿದೆ. ಸದ್ಯಕ್ಕೆ ಈ ಬೆಡ್​ಗಳು‌ ಸಾಕಾಗಬಹುದು. ಆದರೆ ಕೋವಿಡ್ ಸೋಂಕಿತರ ಸಂಖ್ಯೆ‌ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ವಾರದೊಳಗೆ ಉಳಿದ ಬೆಡ್​ಗಳನ್ನು ಕೋವಿಡ್ ಚಿಕಿತ್ಸೆಗೆ‌ ಮೀಸಲಿಟ್ಟು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ತಿಳಿಸಿದರು.

ಆಕ್ಸಿಜನ್ ಕೊರತೆ ಇಲ್ಲ, ಹೆಚ್ಚುವರಿ ಪೂರೈಕೆಗೆ ಕ್ರಮ: ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನದಲ್ಲಿರಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಆಕ್ಸಿಜನ್ ಏಜೆನ್ಸಿ ಮತ್ತು ಪೂರೈಕೆದಾರರನ್ನು ಗುರುತಿಸಿ ಇನ್ನೂ‌ ಹೆಚ್ವಿನ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ‌ ತಡೆಗೆ ಕ್ರಮ: ರಾಜ್ಯದ ಕೆಲವು ಕಡೆಗಳಲ್ಲಿ ವರದಿಯಾಗಿರುವಂತೆ ಜಿಲ್ಲೆಯಲ್ಲಿ ರೆಮಿಡಿಸಿವಿರ್ ಕೊರತೆ ಇಲ್ಲ. ವೈದ್ಯರ ಶಿಫಾರಸ್ಸಿನಂತೆ ಅಗತ್ಯವಿರುವ ರೋಗಿಗಳಿಗೆ ರೆಮಿಡಿಸಿವಿರ್ ಪೂರೈಕೆಗೆ ಅಪರ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ರಚಿಸಲಾಗಿರುತ್ತದೆ. ಆದರೆ ಸದರಿ ಔಷಧಿಯು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಗಟ್ಟಲು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬೆಳಗಾವಿ: ಜಿಲ್ಲೆಯಲ್ಲಿ ಆಯುಷ್ಮಾನ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 3,925 ಬೆಡ್​ಗಳು ಲಭ್ಯವಿದೆ. ಇದರಲ್ಲಿ ಶೇ.50 ರಷ್ಟು ಬೆಡ್​ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತದ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಜ್ಞರ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಭ್ಯವಿರುವ 3925 ಬೆಡ್​ಗಳ ಪೈಕಿ ಶೇ.50 ರಷ್ಟು ಬೆಡ್​ಗಳನ್ನು ಅಂದರೆ‌ ಸುಮಾರು 2000 ಬೆಡ್​ಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕಾಗುತ್ತದೆ. ಆದರೆ‌ ಇದುವರೆಗೆ ಕೇವಲ 641 ಬೆಡ್‌ಗಳನ್ನು ಮಾತ್ರ ಮೀಸಲಿಡಲಾಗಿದೆ. ಸದ್ಯಕ್ಕೆ ಈ ಬೆಡ್​ಗಳು‌ ಸಾಕಾಗಬಹುದು. ಆದರೆ ಕೋವಿಡ್ ಸೋಂಕಿತರ ಸಂಖ್ಯೆ‌ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ವಾರದೊಳಗೆ ಉಳಿದ ಬೆಡ್​ಗಳನ್ನು ಕೋವಿಡ್ ಚಿಕಿತ್ಸೆಗೆ‌ ಮೀಸಲಿಟ್ಟು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ತಿಳಿಸಿದರು.

ಆಕ್ಸಿಜನ್ ಕೊರತೆ ಇಲ್ಲ, ಹೆಚ್ಚುವರಿ ಪೂರೈಕೆಗೆ ಕ್ರಮ: ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನದಲ್ಲಿರಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಆಕ್ಸಿಜನ್ ಏಜೆನ್ಸಿ ಮತ್ತು ಪೂರೈಕೆದಾರರನ್ನು ಗುರುತಿಸಿ ಇನ್ನೂ‌ ಹೆಚ್ವಿನ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ‌ ತಡೆಗೆ ಕ್ರಮ: ರಾಜ್ಯದ ಕೆಲವು ಕಡೆಗಳಲ್ಲಿ ವರದಿಯಾಗಿರುವಂತೆ ಜಿಲ್ಲೆಯಲ್ಲಿ ರೆಮಿಡಿಸಿವಿರ್ ಕೊರತೆ ಇಲ್ಲ. ವೈದ್ಯರ ಶಿಫಾರಸ್ಸಿನಂತೆ ಅಗತ್ಯವಿರುವ ರೋಗಿಗಳಿಗೆ ರೆಮಿಡಿಸಿವಿರ್ ಪೂರೈಕೆಗೆ ಅಪರ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ರಚಿಸಲಾಗಿರುತ್ತದೆ. ಆದರೆ ಸದರಿ ಔಷಧಿಯು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಗಟ್ಟಲು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.