ETV Bharat / state

ಬೆಳಗಾವಿ ಜಿಲ್ಲೆ ವಿಭಜನೆ‌ ವಿಚಾರ: ಲಕ್ಷ್ಮಣ ಸವದಿ ಹೊಸ ಬಾಂಬ್.. ಸಚಿವ ಸತೀಶ್ ಸೈಲೆಂಟ್!

author img

By ETV Bharat Karnataka Team

Published : Nov 18, 2023, 6:13 PM IST

Updated : Nov 18, 2023, 6:54 PM IST

ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎನ್ನುವುದು ಮೂರು ದಶಕಗಳ ಬೇಡಿಕೆಯಾಗಿದೆ. ಆದರೆ ಅಥಣಿ, ರಾಯಬಾಗ, ಕಾಗವಾಡ,‌ಕುಡಚಿ ಹಾಗೂ ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಜಮಖಂಡಿ ತಾಲೂಕುಗಳನ್ನ ಸೇರಿಸಿ ಅಥಣಿ ಜಿಲ್ಲೆಗೆ ಆರು ಕ್ಷೇತ್ರದ ಶಾಸಕರು ಅಭಿಪ್ರಾಯವನ್ನು ಅಧಿವೇಶನದಲ್ಲಿ ಹಂಚಿಕೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

belgaum suvarna soudha
ಬೆಳಗಾವಿ ಸುವರ್ಣ ಸೌಧ
ಶಾಸಕ ಲಕ್ಷ್ಮಣ ಸವದಿ ಮಾಧ್ಯಮದವರ ಜೊತೆ ಮಾತನಾಡಿದರು.

ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಮೂರು ಜಿಲ್ಲೆ ಆಗುವಷ್ಟು ವಿಶಾಲ ಪ್ರದೇಶ ಹೊಂದಿದೆ. ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು ಎನ್ನುವುದು ಮೂರು ದಶಕಗಳ ಬೇಡಿಕೆಯಾಗಿದೆ. ಆದರೆ, ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಮತ್ತು ಭಿನ್ನ ರಾಗದಿಂದಾಗಿ ಆ ಕನಸು ಕನಸಾಗಿಯೇ ಉಳಿದುಕೊಂಡಿದೆ. ಇದೀಗ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ಮತ್ತೊಂದು ಚರ್ಚೆ ಹುಟ್ಟು ಹಾಕಿದೆ.

ಹೌದು.. ಬೆಳಗಾವಿ ಜಿಲ್ಲೆ 13,415 ಚದರ ಕಿ ಮೀ ವಿಸ್ತೀರ್ಣ, 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, 18 ವಿಧಾನಸಭೆ, 3 ಲೋಕಸಭೆ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. 15 ತಾಲೂಕು, 6 ಆರ್ ಟಿ ಓ ಕಚೇರಿ, 506 ಗ್ರಾಪಂ, 345 ತಾಲೂಕು ಪಂಚಾಯಿತಿ ಸದಸ್ಯರು, 90 ಜಿಪಂ ಸದಸ್ಯರನ್ನು ಹೊಂದಿದೆ. ಇನ್ನು ಬೆಳಗಾವಿ, ಗೋಕಾಕ್​, ಹುಕ್ಕೇರಿ, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಅಥಣಿ, ಚಿಕ್ಕೋಡಿ, ರಾಯಬಾಗ, ಖಾನಾಪುರ, ಕಿತ್ತೂರು, ಕಾಗವಾಡ, ನಿಪ್ಪಾಣಿ ಹಾಗೂ ಮೂಡಲಗಿ ಜಿಲ್ಲೆಯ ತಾಲೂಕುಗಳಾಗಿವೆ.

ಬೆಳಗಾವಿ ಜಿಲ್ಲೆ ವಿಭಜನೆ ಮೂರು ದಶಕದ ಹೋರಾಟ: ಗಡಿ ಭಾಗದ ಚಿಕ್ಕೋಡಿ ಉಪವಿಭಾಗದ ಅನೇಕ ಹಳ್ಳಿಗಳ ಜನರು ತಮ್ಮ ಕೆಲಸಕ್ಕೆ ಬೆಳಗಾವಿಗೆ ಬರಬೇಕು ಎಂದರೆ 200 ಕಿ.ಮೀ ಕ್ಕಿಂತ ಹೆಚ್ಚು ದೂರ ಪ್ರಯಾಣ ಬೆಳೆಸಬೇಕು. ತಮ್ಮ ಕೆಲಸ ಬಿಟ್ಟು ದಿನಪೂರ್ತಿ ಒಂದು ದಿನ ಸಮಯ ವ್ಯಯಿಸುವ ಸ್ಥಿತಿಯಿದೆ. ಹಾಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು ಎಂದು ಕಳೆದ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದೆ. ಆದರೆ, ಚುನಾವಣೆ ಮತ್ತು ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮಾತ್ರ ಜಿಲ್ಲಾ ವಿಭಜನೆ ಚರ್ಚೆ ಮುನ್ನೆಲೆಗೆ ಬರುತ್ತದೆ. ಆ ಬಳಿಕ ಯಾವೊಬ್ಬ ರಾಜಕಾರಣಿಗಳು ಈ ಬಗ್ಗೆ ತುಟಿ ಪಿಟಕ್ ಎನ್ನುವುದಿಲ್ಲ.

ಜಿಲ್ಲೆ ವಿಭಜನೆ ಸಚಿವ ಸತೀಶ್​ ಮಾತಿಗೆ ಪರ ವಿರೋಧ ಚರ್ಚೆ:ತಮ್ಮ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಜಿಲ್ಲಾ‌ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಗೋಕಾಕ ಜಿಲ್ಲೆಗಳನ್ನಾಗಿ ಮಾಡುವ ಹೇಳಿಕೆ ಅನೇಕ ಬಾರಿ ನೀಡಿದ್ದರು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ಸಭೆ ಕೂಡ ನಡೆದಿದೆ ಎಂದು ಹೇಳಿದ್ದರು. ಜಿಲ್ಲಾ ಉಸ್ತುವಾರಿ ಸಚಿವರ ಮಾತಿಗೆ ಪರ ವಿರೋಧ ಚರ್ಚೆಗಳು ಕೇಳಿ ಬಂದಿದ್ದವು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಆ ಸಭೆಗೆ ನಾವು ಹೋಗಿಲ್ಲ. ಜಿಲ್ಲಾ ವಿಭಜನೆ ಆಗೋದಾದರೆ ನಮ್ಮ ಬೈಲಹೊಂಗಲ ಪರಿಗಣಿಸುವಂತೆ ಒತ್ತಾಯಿಸಿದ್ದರು.

ಅಥಣಿ ಜಿಲ್ಲೆಗೆ ಸವದಿ ಆಗ್ರಹ: ಅಥಣಿ ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಚಿಕ್ಕೋಡಿ ಜಿಲ್ಲೆ ಮಾಡಬೇಕೆಂದಾಗ ಗೋಕಾಕ ಮತ್ತು ಗೋಕಾಕ ಜಿಲ್ಲೆ ಮಾಡಬೇಕೆಂದಾಗ ಬೈಲಹೊಂಗಲ ಮಾಡುವಂತೆ ಒತ್ತಾಯ ಕೇಳಿ ಬಂದಿವೆ. ಇದರ ಬದಲು ಅಥಣಿ, ರಾಯಬಾಗ, ಕಾಗವಾಡ,‌ಕುಡಚಿ ಹಾಗೂ ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಜಮಖಂಡಿ ತಾಲೂಕುಗಳನ್ನ ಸೇರಿಸಿ ಅಥಣಿ ಜಿಲ್ಲೆ ಮಾಡಬೇಕು. ಅಂದಾಗ ಈ ಭಾಗಕ್ಕೆ ಶಾಶ್ವತ ಪರಿಹಾರ ಸಿಗಲಿದ್ದು, ಆ ನಿಟ್ಟಿನಲ್ಲಿ ಆರು ಕ್ಷೇತ್ರದ ಶಾಸಕರು ಅಭಿಪ್ರಾಯವನ್ನು ಅಧಿವೇಶನದಲ್ಲಿ ಹಂಚಿಕೊಳ್ಳಬೇಕೆಂದು ಹೇಳಿದ್ದಾರೆ.

ರಾಜಕೀಯ ಆಂತರಿಕ ಕಚ್ಚಾಟ್ಟದಿಂದ ಜಿಲ್ಲಾ ವಿಭಜನೆ ವಿಳಂಬ: ಬೆಳಗಾವಿ ಜಿಲ್ಲೆಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿರುವ ಜಾರಕಿಹೊಳಿ‌, ಸವದಿ, ಕತ್ತಿ, ಕೋರೆ ಹಾಗೂ ಜೊಲ್ಲೆ ಕುಟುಂಬಗಳ ಆಂತರಿಕ ಕಚ್ಚಾಟ್ಟದಿಂದಾಗಿ ಜಿಲ್ಲಾ ವಿಭಜನೆ ಆಗುತ್ತಿಲ್ಲ ಎಂಬ ಮಾತು ಕೇಳಿ ಬಂದಿವೆ. ಎರಡು ತಿಂಗಳ‌ ಹಿಂದೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಿದ್ದರು. ಆದರೆ ಇದೀಗ ಏಕಾಏಕಿ ಜಿಲ್ಲಾ ವಿಭಜನೆ ಚರ್ಚೆ ಸೈಲೆಂಟ್ ಆಗಿದೆ.

ಇನ್ನು ಸಚಿವ ಸತೀಶ ಜಾರಕಿಹೊಳಿ ಮಾಧ್ಯಮಗಳ ಜೊತೆ ನಿನ್ನೆ ಮಾತನಾಡಿ, ಜಿಲ್ಲಾ‌ ವಿಭಜನೆ ಮಾಡುವಂತೆ ಬೇಡಿಕೆ ಇಡುವುದಷ್ಟೇ ನಮ್ಮ ಡ್ಯೂಟಿ. ಆ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಸರ್ಕಾರ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ. ಅಲ್ಲಿಯವರೆಗೂ ಕಾಯಬೇಕಷ್ಟೇ ಎಂದು ತಿಳಿಸಿದರು. ಮತ್ತೊಂದೆಡೆ ಬೆಳಗಾವಿ ಗಡಿ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ತೀರ್ಪು ಬರುವರೆಗೂ ಜಿಲ್ಲಾ ವಿಭಜನೆ ಕೈ ಬಿಡುವಂತೆ ಕನ್ನಡ ಹೋರಾಟಗಾರರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಶಾಸಕರು ಜಿಲ್ಲಾ ವಿಭಜನೆ ಬಗ್ಗೆ ಒಮ್ಮತದಿಂದ ಧ್ವನಿ ಎತ್ತುತ್ತಾರೆ ಎಂದು ಕಾದು ನೋಡಬೇಕಿದೆ.

ಇದನ್ನೂಓದಿ:ಆಡಳಿತ ಸುಗಮವಾಗಲೂ ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಸಚಿವ ಸತೀಶ ಜಾರಕಿಹೊಳಿ

ಶಾಸಕ ಲಕ್ಷ್ಮಣ ಸವದಿ ಮಾಧ್ಯಮದವರ ಜೊತೆ ಮಾತನಾಡಿದರು.

ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಮೂರು ಜಿಲ್ಲೆ ಆಗುವಷ್ಟು ವಿಶಾಲ ಪ್ರದೇಶ ಹೊಂದಿದೆ. ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು ಎನ್ನುವುದು ಮೂರು ದಶಕಗಳ ಬೇಡಿಕೆಯಾಗಿದೆ. ಆದರೆ, ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಮತ್ತು ಭಿನ್ನ ರಾಗದಿಂದಾಗಿ ಆ ಕನಸು ಕನಸಾಗಿಯೇ ಉಳಿದುಕೊಂಡಿದೆ. ಇದೀಗ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ಮತ್ತೊಂದು ಚರ್ಚೆ ಹುಟ್ಟು ಹಾಕಿದೆ.

ಹೌದು.. ಬೆಳಗಾವಿ ಜಿಲ್ಲೆ 13,415 ಚದರ ಕಿ ಮೀ ವಿಸ್ತೀರ್ಣ, 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, 18 ವಿಧಾನಸಭೆ, 3 ಲೋಕಸಭೆ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. 15 ತಾಲೂಕು, 6 ಆರ್ ಟಿ ಓ ಕಚೇರಿ, 506 ಗ್ರಾಪಂ, 345 ತಾಲೂಕು ಪಂಚಾಯಿತಿ ಸದಸ್ಯರು, 90 ಜಿಪಂ ಸದಸ್ಯರನ್ನು ಹೊಂದಿದೆ. ಇನ್ನು ಬೆಳಗಾವಿ, ಗೋಕಾಕ್​, ಹುಕ್ಕೇರಿ, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಅಥಣಿ, ಚಿಕ್ಕೋಡಿ, ರಾಯಬಾಗ, ಖಾನಾಪುರ, ಕಿತ್ತೂರು, ಕಾಗವಾಡ, ನಿಪ್ಪಾಣಿ ಹಾಗೂ ಮೂಡಲಗಿ ಜಿಲ್ಲೆಯ ತಾಲೂಕುಗಳಾಗಿವೆ.

ಬೆಳಗಾವಿ ಜಿಲ್ಲೆ ವಿಭಜನೆ ಮೂರು ದಶಕದ ಹೋರಾಟ: ಗಡಿ ಭಾಗದ ಚಿಕ್ಕೋಡಿ ಉಪವಿಭಾಗದ ಅನೇಕ ಹಳ್ಳಿಗಳ ಜನರು ತಮ್ಮ ಕೆಲಸಕ್ಕೆ ಬೆಳಗಾವಿಗೆ ಬರಬೇಕು ಎಂದರೆ 200 ಕಿ.ಮೀ ಕ್ಕಿಂತ ಹೆಚ್ಚು ದೂರ ಪ್ರಯಾಣ ಬೆಳೆಸಬೇಕು. ತಮ್ಮ ಕೆಲಸ ಬಿಟ್ಟು ದಿನಪೂರ್ತಿ ಒಂದು ದಿನ ಸಮಯ ವ್ಯಯಿಸುವ ಸ್ಥಿತಿಯಿದೆ. ಹಾಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು ಎಂದು ಕಳೆದ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದೆ. ಆದರೆ, ಚುನಾವಣೆ ಮತ್ತು ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮಾತ್ರ ಜಿಲ್ಲಾ ವಿಭಜನೆ ಚರ್ಚೆ ಮುನ್ನೆಲೆಗೆ ಬರುತ್ತದೆ. ಆ ಬಳಿಕ ಯಾವೊಬ್ಬ ರಾಜಕಾರಣಿಗಳು ಈ ಬಗ್ಗೆ ತುಟಿ ಪಿಟಕ್ ಎನ್ನುವುದಿಲ್ಲ.

ಜಿಲ್ಲೆ ವಿಭಜನೆ ಸಚಿವ ಸತೀಶ್​ ಮಾತಿಗೆ ಪರ ವಿರೋಧ ಚರ್ಚೆ:ತಮ್ಮ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಜಿಲ್ಲಾ‌ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಗೋಕಾಕ ಜಿಲ್ಲೆಗಳನ್ನಾಗಿ ಮಾಡುವ ಹೇಳಿಕೆ ಅನೇಕ ಬಾರಿ ನೀಡಿದ್ದರು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ಸಭೆ ಕೂಡ ನಡೆದಿದೆ ಎಂದು ಹೇಳಿದ್ದರು. ಜಿಲ್ಲಾ ಉಸ್ತುವಾರಿ ಸಚಿವರ ಮಾತಿಗೆ ಪರ ವಿರೋಧ ಚರ್ಚೆಗಳು ಕೇಳಿ ಬಂದಿದ್ದವು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಆ ಸಭೆಗೆ ನಾವು ಹೋಗಿಲ್ಲ. ಜಿಲ್ಲಾ ವಿಭಜನೆ ಆಗೋದಾದರೆ ನಮ್ಮ ಬೈಲಹೊಂಗಲ ಪರಿಗಣಿಸುವಂತೆ ಒತ್ತಾಯಿಸಿದ್ದರು.

ಅಥಣಿ ಜಿಲ್ಲೆಗೆ ಸವದಿ ಆಗ್ರಹ: ಅಥಣಿ ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಚಿಕ್ಕೋಡಿ ಜಿಲ್ಲೆ ಮಾಡಬೇಕೆಂದಾಗ ಗೋಕಾಕ ಮತ್ತು ಗೋಕಾಕ ಜಿಲ್ಲೆ ಮಾಡಬೇಕೆಂದಾಗ ಬೈಲಹೊಂಗಲ ಮಾಡುವಂತೆ ಒತ್ತಾಯ ಕೇಳಿ ಬಂದಿವೆ. ಇದರ ಬದಲು ಅಥಣಿ, ರಾಯಬಾಗ, ಕಾಗವಾಡ,‌ಕುಡಚಿ ಹಾಗೂ ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಜಮಖಂಡಿ ತಾಲೂಕುಗಳನ್ನ ಸೇರಿಸಿ ಅಥಣಿ ಜಿಲ್ಲೆ ಮಾಡಬೇಕು. ಅಂದಾಗ ಈ ಭಾಗಕ್ಕೆ ಶಾಶ್ವತ ಪರಿಹಾರ ಸಿಗಲಿದ್ದು, ಆ ನಿಟ್ಟಿನಲ್ಲಿ ಆರು ಕ್ಷೇತ್ರದ ಶಾಸಕರು ಅಭಿಪ್ರಾಯವನ್ನು ಅಧಿವೇಶನದಲ್ಲಿ ಹಂಚಿಕೊಳ್ಳಬೇಕೆಂದು ಹೇಳಿದ್ದಾರೆ.

ರಾಜಕೀಯ ಆಂತರಿಕ ಕಚ್ಚಾಟ್ಟದಿಂದ ಜಿಲ್ಲಾ ವಿಭಜನೆ ವಿಳಂಬ: ಬೆಳಗಾವಿ ಜಿಲ್ಲೆಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿರುವ ಜಾರಕಿಹೊಳಿ‌, ಸವದಿ, ಕತ್ತಿ, ಕೋರೆ ಹಾಗೂ ಜೊಲ್ಲೆ ಕುಟುಂಬಗಳ ಆಂತರಿಕ ಕಚ್ಚಾಟ್ಟದಿಂದಾಗಿ ಜಿಲ್ಲಾ ವಿಭಜನೆ ಆಗುತ್ತಿಲ್ಲ ಎಂಬ ಮಾತು ಕೇಳಿ ಬಂದಿವೆ. ಎರಡು ತಿಂಗಳ‌ ಹಿಂದೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಿದ್ದರು. ಆದರೆ ಇದೀಗ ಏಕಾಏಕಿ ಜಿಲ್ಲಾ ವಿಭಜನೆ ಚರ್ಚೆ ಸೈಲೆಂಟ್ ಆಗಿದೆ.

ಇನ್ನು ಸಚಿವ ಸತೀಶ ಜಾರಕಿಹೊಳಿ ಮಾಧ್ಯಮಗಳ ಜೊತೆ ನಿನ್ನೆ ಮಾತನಾಡಿ, ಜಿಲ್ಲಾ‌ ವಿಭಜನೆ ಮಾಡುವಂತೆ ಬೇಡಿಕೆ ಇಡುವುದಷ್ಟೇ ನಮ್ಮ ಡ್ಯೂಟಿ. ಆ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಸರ್ಕಾರ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ. ಅಲ್ಲಿಯವರೆಗೂ ಕಾಯಬೇಕಷ್ಟೇ ಎಂದು ತಿಳಿಸಿದರು. ಮತ್ತೊಂದೆಡೆ ಬೆಳಗಾವಿ ಗಡಿ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ತೀರ್ಪು ಬರುವರೆಗೂ ಜಿಲ್ಲಾ ವಿಭಜನೆ ಕೈ ಬಿಡುವಂತೆ ಕನ್ನಡ ಹೋರಾಟಗಾರರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಶಾಸಕರು ಜಿಲ್ಲಾ ವಿಭಜನೆ ಬಗ್ಗೆ ಒಮ್ಮತದಿಂದ ಧ್ವನಿ ಎತ್ತುತ್ತಾರೆ ಎಂದು ಕಾದು ನೋಡಬೇಕಿದೆ.

ಇದನ್ನೂಓದಿ:ಆಡಳಿತ ಸುಗಮವಾಗಲೂ ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಸಚಿವ ಸತೀಶ ಜಾರಕಿಹೊಳಿ

Last Updated : Nov 18, 2023, 6:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.