ಬೆಳಗಾವಿ : ಕೊರೊನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಜನತೆ ಮಾತ್ರ ಯಾವುದಕ್ಕೂ ಕ್ಯಾರೇ ಎನ್ನದೇ ಗುಂಪು ಪುಂಪಾಗಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ.
ನಗರದ ಹೊರವಲಯದ ಮಾಲಿನಿ ಸಿಟಿ ಮೈದಾನದಲ್ಲಿರುವ ವೋಲ್ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ಜನ ಸೇರಿದ್ದರು. ಭಯದಿಂದ ಬೆಚ್ಚಿದ ಪೊಲೀಸರು ಮಾರುಕಟ್ಟೆಯೊಳಗೆ ಪ್ರವೇಶಿಸಲು ಹಿಂದೇಟು ಹಾಕುತ್ತಿದ್ದಾರೆ. ಜನಸಂದಣಿ ತಡೆಯಲು 3 ತರಕಾರಿ ಮಾರುಕಟ್ಟೆ ಸ್ಥಾಪಿಸಿದರೂ ಸಹ ಪ್ರಯೋಜನವಿಲ್ಲದಂತಾಗಿದೆ. ಸಾಮಾಜಿಕ ಅಂತರವೂ ಇಲ್ಲದೇ, ಮಾಸ್ಕ್ ಕೂಡಾ ಧರಿಸಿದೆ ಯಾವುದೇ ಮುಂಜಾಗ್ರತಾ ಕ್ರಮವೂ ಕೈಗೊಳ್ಳದೆ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ.
ಕೊರೊನಾ ತಡೆಗೆ ಲಾಕ್ಡೌನ್ ಜಾರಿಯಲ್ಲಿದ್ರೂ ಇಲ್ಲಿನ ಜನ ಮಾತ್ರ ಸರಿಯಾಗಿ ಸ್ಪಂದಿಸ್ತಿಲ್ಲ. ಸರ್ಕಾರ ಇದನ್ನು ತಡೆಯಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಿದೆ.