ETV Bharat / state

ಚುನಾವಣೆಯಲ್ಲಿ ಗೆದ್ದ ನಂತರ 'ಕಮಲ' ಬಿಟ್ಟು 'ಕೈ' ಹಿಡಿದ ಸದಸ್ಯೆ

ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷದಲ್ಲಿದ್ದು, ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಮನಿಷಾ ಶಿಂಧೆ ಇಂದು ಪಕ್ಷ ತೊರೆದು ತಮ್ಮ ಕಾರ್ಯಕರ್ತರೊಂದಿಗೆ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

author img

By

Published : Dec 31, 2020, 5:03 PM IST

BJP Candidate Joins Congress
ಮನಿಷಾ ಶಿಂಧೆ

ಬೆಳಗಾವಿ: ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಪಾಶ್ಚಾಪುರ ಪಂಚಾಯಿತಿಯಿಂದ ನಿನ್ನೆಯಷ್ಟೇ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯೆ ಇಂದು ಪಕ್ಷ ತೊರೆದು ಕಾಂಗ್ರೆಸ್​​ಗೆ ಸೇರ್ಪಡೆಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ ಬಿಜೆಪಿ ಪಕ್ದಲ್ಲಿದ್ದ ಹಾಗೂ ಪಾಶ್ಚಾಪೂರ ಪಂಚಾಯಿತಿ 5 ನೇ ವಾರ್ಡ್ ನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಮನಿಷಾ ಶಿಂಧೆ, ತಮ್ಮ ವಾರ್ಡ್​ನಲ್ಲಿ ಜಯಗಳಿಸಿದ್ದಾರೆ. ನಿನ್ನೆಯಷ್ಟೇ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಇಂದು ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇನ್ನು ಪಕ್ಷ ಬದಲಾವಣೆಗೆ ಮನಿಷಾ ಕಾರಣ ತಿಳಿಸಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.

ಬೆಳಗಾವಿ: ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಪಾಶ್ಚಾಪುರ ಪಂಚಾಯಿತಿಯಿಂದ ನಿನ್ನೆಯಷ್ಟೇ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯೆ ಇಂದು ಪಕ್ಷ ತೊರೆದು ಕಾಂಗ್ರೆಸ್​​ಗೆ ಸೇರ್ಪಡೆಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ ಬಿಜೆಪಿ ಪಕ್ದಲ್ಲಿದ್ದ ಹಾಗೂ ಪಾಶ್ಚಾಪೂರ ಪಂಚಾಯಿತಿ 5 ನೇ ವಾರ್ಡ್ ನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಮನಿಷಾ ಶಿಂಧೆ, ತಮ್ಮ ವಾರ್ಡ್​ನಲ್ಲಿ ಜಯಗಳಿಸಿದ್ದಾರೆ. ನಿನ್ನೆಯಷ್ಟೇ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಇಂದು ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇನ್ನು ಪಕ್ಷ ಬದಲಾವಣೆಗೆ ಮನಿಷಾ ಕಾರಣ ತಿಳಿಸಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.