ETV Bharat / state

ಸವದಿ ಪ್ರಚಾರ ಮಾಡಿದಲ್ಲೆಲ್ಲ ಬಿಜೆಪಿ ಸೋಲು: ಕೈತಪ್ಪುತ್ತಾ ಡಿಸಿಎಂ ಪಟ್ಟ..? - BJP lost Seats Wherever Savadi campaigned

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡರೂ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದ ಲಕ್ಷ್ಮಣ್​ ಸವದಿ. ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಚಾರ ಮಾಡಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದ್ದು, ಇದರಿಂದ ಡಿಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸವದಿ ಪ್ರಚಾರ ಮಾಡಿದಲ್ಲೆಲ್ಲ ಬಿಜೆಪಿ ಸೋಲು
author img

By

Published : Oct 25, 2019, 7:39 PM IST

Updated : Oct 25, 2019, 10:00 PM IST

ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡರೂ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದ ಲಕ್ಷ್ಮಣ್​ ಸವದಿ ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಸವದಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ತಂತ್ರ ಉಲ್ಟಾ ಹೊಡೆದಿರುವುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಸವದಿ ಪ್ರಚಾರ ಮಾಡಿದ್ದ ಕ್ಷೇತ್ರಗಳಲ್ಲೆಲ್ಲಾ ಬಿಜೆಪಿಗೆ ಜನ ಶಾಕ್​ ಕೊಟ್ಟಿದ್ದಾರೆ.

ಸವದಿ ಪ್ರಚಾರ ಮಾಡಿದಲ್ಲೆಲ್ಲ ಬಿಜೆಪಿ ಸೋಲು

ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಹಿಡಿತ ಹೊಂದಿರುವ ಲಕ್ಷ್ಮಣ್​ ಸವದಿ, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿ ಆಗಿದ್ದರು. ಜಿಲ್ಲೆಯಲ್ಲಿ ಎಂಟು ಬಾರಿಗೆ ಶಾಸಕರಾಗಿರುವ ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡದ ಬಿಜೆಪಿ ಹೈಕಮಾಂಡ್, ಸೋಲುಂಡಿದ್ದ ಲಕ್ಷ್ಮಣ್​ ಸವದಿಗೆ ಮಣೆ ಹಾಕಿತ್ತು. ಕೇಂದ್ರದ ಈ ನಡೆಗೆ ಸ್ವಪಕ್ಷದಲ್ಲೇ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಮಹಾರಾಷ್ಟ್ರ ಚುನಾವಣೆ ಹೊಣೆಗಾರಿಕೆ ಸಲುವಾಗಿ ಸಚಿವ ಸ್ಥಾನ ನೀಡಲಾಗಿದೆ ಎಂಬ ಸಮಜಾಯಿಷಿಯನ್ನು ಹೈಕಮಾಂಡ್ ನೀಡಿತ್ತು. ಸಧ್ಯಕ್ಕೆ ಮಹಾರಾಷ್ಟ್ರ ಚುನಾವಣೆಯಲ್ಲಿ ಸವದಿ ಪ್ರಚಾರ ತಂತ್ರ ಫಲಿಸಿಲ್ಲ. ಅವರು ಪ್ರಚಾರ ಮಾಡಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದ್ದು, ಇದರಿಂದ ಡಿಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಲಕ್ಷ್ಮಣ್​ ಸವದಿಗೆ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರ ಚುನಾವಣೆ ಉಸ್ತುವಾರಿ ವಹಿಸಿದ ನಂತರ, ಅಲ್ಲೇ ವಾಸ್ತವ್ಯ ಹೂಡಿ ಭರ್ಜರಿ ಪ್ರಚಾರ ನಡೆಸಿದ್ದರು. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಲಾಪುರ ಗಡಿ ಭಾಗದ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಆದ್ರೆ ಸವದಿ ಪ್ರಚಾರ ಮಾಡಿದ್ದ 18 ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ - ಶಿವಸೇನೆ ಕೂಟ ಕೇವಲ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ. ಇನ್ನು ಕಾಂಗ್ರೆಸ್ ಎನ್ ಸಿ ಪಿ 11 ಸ್ಥಾನಗಳಲ್ಲಿ ಜಯಗಳಿಸಿದೆ. ಜೊತೆಗೆ ಲಿಂಗಾಯತರ ಪ್ರಭಾವ ಹೆಚ್ಚಿರುವ ಈ ಕ್ಷೇತ್ರಗಳ ಪ್ರಚಾರಕ್ಕಾಗಿ ಡಿಸಿಎಂ ಸವದಿಯನ್ನು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಯೂ ಸೇರಿಸಲಾಗಿತ್ತು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಹೈಕಮಾಂಡ್ ಊಹೆ ತಪ್ಪಾಗಿದ್ದು, ಈಗ ಸಚಿವ ಸ್ಥಾನಕ್ಕಾಗಿ ಅಸಮಾಧಾನ ಹೊಂದಿದ್ದ ಶಾಸಕರಿಗೆ ಬಿಜೆಪಿ ಮುಖಂಡರು ಯಾವ ರೀತಿಯ ಸಮಜಾಯಿಷಿ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡರೂ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದ ಲಕ್ಷ್ಮಣ್​ ಸವದಿ ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಸವದಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ತಂತ್ರ ಉಲ್ಟಾ ಹೊಡೆದಿರುವುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಸವದಿ ಪ್ರಚಾರ ಮಾಡಿದ್ದ ಕ್ಷೇತ್ರಗಳಲ್ಲೆಲ್ಲಾ ಬಿಜೆಪಿಗೆ ಜನ ಶಾಕ್​ ಕೊಟ್ಟಿದ್ದಾರೆ.

ಸವದಿ ಪ್ರಚಾರ ಮಾಡಿದಲ್ಲೆಲ್ಲ ಬಿಜೆಪಿ ಸೋಲು

ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಹಿಡಿತ ಹೊಂದಿರುವ ಲಕ್ಷ್ಮಣ್​ ಸವದಿ, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿ ಆಗಿದ್ದರು. ಜಿಲ್ಲೆಯಲ್ಲಿ ಎಂಟು ಬಾರಿಗೆ ಶಾಸಕರಾಗಿರುವ ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡದ ಬಿಜೆಪಿ ಹೈಕಮಾಂಡ್, ಸೋಲುಂಡಿದ್ದ ಲಕ್ಷ್ಮಣ್​ ಸವದಿಗೆ ಮಣೆ ಹಾಕಿತ್ತು. ಕೇಂದ್ರದ ಈ ನಡೆಗೆ ಸ್ವಪಕ್ಷದಲ್ಲೇ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಮಹಾರಾಷ್ಟ್ರ ಚುನಾವಣೆ ಹೊಣೆಗಾರಿಕೆ ಸಲುವಾಗಿ ಸಚಿವ ಸ್ಥಾನ ನೀಡಲಾಗಿದೆ ಎಂಬ ಸಮಜಾಯಿಷಿಯನ್ನು ಹೈಕಮಾಂಡ್ ನೀಡಿತ್ತು. ಸಧ್ಯಕ್ಕೆ ಮಹಾರಾಷ್ಟ್ರ ಚುನಾವಣೆಯಲ್ಲಿ ಸವದಿ ಪ್ರಚಾರ ತಂತ್ರ ಫಲಿಸಿಲ್ಲ. ಅವರು ಪ್ರಚಾರ ಮಾಡಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದ್ದು, ಇದರಿಂದ ಡಿಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಲಕ್ಷ್ಮಣ್​ ಸವದಿಗೆ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರ ಚುನಾವಣೆ ಉಸ್ತುವಾರಿ ವಹಿಸಿದ ನಂತರ, ಅಲ್ಲೇ ವಾಸ್ತವ್ಯ ಹೂಡಿ ಭರ್ಜರಿ ಪ್ರಚಾರ ನಡೆಸಿದ್ದರು. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಲಾಪುರ ಗಡಿ ಭಾಗದ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಆದ್ರೆ ಸವದಿ ಪ್ರಚಾರ ಮಾಡಿದ್ದ 18 ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ - ಶಿವಸೇನೆ ಕೂಟ ಕೇವಲ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ. ಇನ್ನು ಕಾಂಗ್ರೆಸ್ ಎನ್ ಸಿ ಪಿ 11 ಸ್ಥಾನಗಳಲ್ಲಿ ಜಯಗಳಿಸಿದೆ. ಜೊತೆಗೆ ಲಿಂಗಾಯತರ ಪ್ರಭಾವ ಹೆಚ್ಚಿರುವ ಈ ಕ್ಷೇತ್ರಗಳ ಪ್ರಚಾರಕ್ಕಾಗಿ ಡಿಸಿಎಂ ಸವದಿಯನ್ನು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಯೂ ಸೇರಿಸಲಾಗಿತ್ತು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಹೈಕಮಾಂಡ್ ಊಹೆ ತಪ್ಪಾಗಿದ್ದು, ಈಗ ಸಚಿವ ಸ್ಥಾನಕ್ಕಾಗಿ ಅಸಮಾಧಾನ ಹೊಂದಿದ್ದ ಶಾಸಕರಿಗೆ ಬಿಜೆಪಿ ಮುಖಂಡರು ಯಾವ ರೀತಿಯ ಸಮಜಾಯಿಷಿ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Intro:ಕೈಗೂಡಲಿಲ್ಲ ಡಿಸಿಎಂ ಸವದಿ ಪ್ರಚಾರ : ಉರುಳುವುದಾ ಡಿಸಿಎಂ ಪಟ್ಟ..?

ಬೆಳಗಾವಿ : ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿ ಆಗಿತ್ತು. ಜೊತೆಗೆ ಸೋತ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಮಾತ್ರವಲ್ಲದೆ ಡಿಸಿಎಂ ಹುದ್ದೆ ನೀಡಿ ರಾಜ್ಯದಲ್ಲಿ ಅಚ್ಚರಿಯ ನಡೆಗೆ ಕಾರಣವಾಗಿದ್ದ ಬಿಜೆಪಿ ಹೈಕಮಾಂಡ್ ತಂತ್ರ ಸಧ್ಯ ಉಟ್ಟಾ ಹೊಡೆದಿದ್ದು, ಲಕ್ಷ್ಮಣ ಸವದಿ ಪ್ರಚಾರ ತಂತ್ರ ಮಹಾರಾಷ್ಟ್ರದಲ್ಲಿ ಫಲಿಸಿಲ್ಲ. ಎರಡೆರಡು ಹುದ್ದೆ ಅಲಂಕರಿಸಿದ್ದ ಸವದಿ ಸಾಧನೆ ಬಗ್ಗೆ ಸ್ವ ಪಕ್ಷದಲ್ಲಿ ಆಕ್ರೋಶ ಬುಗಿಲೇಳುವ ಸಾಧ್ಯತೆ ದಟ್ಟವಾಗಿದೆ.

ಹೌದು ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ತಮ್ಮದೆ ಹಿಡಿತ ಹೊಂದಿದ್ದ ಲಕ್ಷ್ಮಣ ಸವದಿ ಹೈಕಮಾಂಡ್ ಮಟ್ಟದಲ್ಲಿ ಲಾಭಿ ನಡೆಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿ ಆಗಿದ್ದರು. ಜಿಲ್ಲೆಯಲ್ಲಿ ಎಂಟು ಬಾರಿಗೆ ಶಾಸಕರಾಗಿರುವ ಉಮೇಶ್ ಕತ್ತಿ ಅವರಿಗೆ ಮಂತ್ರಿ ಸ್ಥಾನ ನೀಡದ ಬಿಜೆಪಿ ಹೈಕಮಾಂಡ್, ಸೋತ ಲಕ್ಷ್ಮಣ ಸವದಿಗೆ ಮನೆ ಹಾಕಿತ್ತು. ಕೇಂದ್ರದ ಈ ನಡೆಗೆ ಸ್ವ ಪಕ್ಷದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಮಹಾರಾಷ್ಟ್ರ ಚುನಾವಣೆ ಹೊಣೆಗಾರಿಕೆ ಸಲುವಾಗಿ ಸಚಿವ ಸ್ಥಾನ ನೀಡಲಾಗಿದೆ ಎಂಬ ಸಮಜಾಯಿಷಿ ಹೈಕಮಾಂಡ್ ನೀಡಿತ್ತು, ಸಧ್ಯಕ್ಕೆ ಮಹಾರಾಷ್ಟ್ರ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಪ್ರಚಾರ ತಂತ್ರ ಫಲಿಸಿಲ್ಲ. ಅವರು ಪ್ರಚಾರ ಮಾಡಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದ್ದು ಮುಂದೆ ಡಿಸಿಎಂ ಹುದ್ದೆ ತಲೆದಂಡ ಆಗುತ್ತದೆಯಾ ಎಂದು ಕಾದು ನೋಡಬೇಕು.

Body:ಬೆಳಗಾವಿ ರಾಜಕಾರಣದಲ್ಲಿ ಹಿಡಿತ ಹೊಂದುವ ಉದ್ದೇಶದಿಂದ ಅತ್ತ ಜಾರಕಿಹೊಳಿ ಕುಟುಂಬ ಇತ್ತ ಕತ್ತಿ ಕುಟುಂಬ ಪೈಪೋಟಿ ನಡೆಸುತ್ತವೆ. ಆದರೆ
ಸವದಿಯನ್ನು ಡಿಸಿಎಂ ಮಾಡಿದ್ದು ಬಿಜೆಪಿ ಅನೇಕ ಹಿರಿಯ ನಾಯಕರಿಗೆ ನುಂಗಲಾರದ ತುತ್ತಾಗಿತ್ತು. ಆಗಾಗ ಪಕ್ಷದ ವಿರುದ್ಧ ಕತ್ತಿ ಮಸೆಯುವ ಕೆಲಸ ಮಾಡುತ್ತಿದ್ದ ಉಮೇಶ್ ಕತ್ತಿಗೆ ಸಧ್ಯ ಪ್ರಭಲ ಅಸ್ತ್ರ ಸಿಕ್ಕಂತಾಗಿದೆ. ಮಹಾರಾಷ್ಟ್ರ ಚುನಾವಣೆ ಜವಾಬ್ದಾರಿಯಿಂದ ಲಕ್ಷ್ಮಣ ಸವದಿಗೆ ಡಿಸಿಎಂ ನೀಡಿದ್ದೇವೆ ಎಂಬ ಹೈಕಮಾಂಡ್ ನಡೆಯನ್ನು ಅರಗಿಸಿಕೊಳ್ಳದೆ ಕುಳಿತಿದ್ದ ಜಿಲ್ಲೆಯ ಅನೇಕ ನಾಯಕರಿಗೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಕತ್ತಿ ಮಸೆಯಲು ಮತ್ತಷ್ಟು ಶಕ್ತಿ ನೀಡಿದೆ. ಇದಕ್ಕೆ ಪ್ರಮುಖ ಕಾರಣ ಅಂದರೆ ಲಕ್ಷ್ಮಣ ಸವದಿ ಮಹಾರಾಷ್ಟ್ರ ವಿಧಾನಸಭೆ ಕ್ಷೇತ್ರದಲ್ಲಿ ಮಾಡಿದ್ದ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. ಆದ್ದರಿಂದ ಅವರ ಪಕ್ಷ ಸಂಘಟನೆಯ ಮೇಲೆ ಪ್ರಶ್ನೆ ಮೂಡಿದ್ದು, ಅಸಮಾಧಾನ ಹೊಂದಿರುವ ಬಿಜೆಪಿ ಶಾಸಕರಿಗೆ ಇದು ವರವಾಗಿದೆ‌. ನಮಗೂ ಸಚಿವಸ್ಥಾನ ಬೇಕು ಎಂಬ ಕೂಗು ಜೋರಾಗುವ ಲಕ್ಷಣ ಕಂಡುಬರುತ್ತಿದೆ.

ಲಕ್ಷ್ಮಣ ಸವದಿಗೆ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರ ಚುನಾವಣೆ ಉಸ್ತುವಾರಿ ವಹಿಸಿದ ನಂತರ ಅಲ್ಲೆ ವಾಸ್ತವ್ಯ ಹೂಡಿ ಭರ್ಜರಿ ಪ್ರಚಾರ ನಡೆಸಿದ್ದರು. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಗಡಿ ಭಾಗದ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು. ಆದರೆ ಸವದಿ ಪ್ರಚಾರ ಮಾಡಿದ್ದ 18 ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ - ಶಿವಸೇನೆ ಕೂಟ ಕೇವಲ ನಾಲ್ಕು ಕ್ಷೇತ್ರ ಗೆದ್ದುಕೊಂಡಿದೆ. ಇನ್ನೂ ಕಾಂಗ್ರೆಸ್ ಎನ್ ಸಿ ಪಿ 11 ಸ್ಥಾನಗಳಲ್ಲಿ ಜಯ ಗಳಿಸಿದ್ದು ಇಲ್ಲಿ ಲಕ್ಷ್ಮಣ ಸವದಿ ಪ್ರಚಾರ ತಂತ್ರ ಫಲಿಸಿಲ್ಲ. ಜೊತೆಗೆ ಹೆಚ್ಚು ಲಿಂಗಾಯತ ಪ್ರಭಾವ ಇರುವಂತಹ ಈ ಕ್ಷೇತ್ರಗಳ ಪ್ರಚಾರಕ್ಕಾಗಿ ಡಿಸಿಎಂ ಸವದಿ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಯೂ ಸೇರಿಸಲಾಗಿತ್ತು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಹೈಕಮಾಂಡ್ ಊಹೆ ತಪ್ಪಾಗಿದ್ದು ಈಗ ಸಚಿವ ಸ್ಥಾನಕ್ಕಾಗಿ ಅಸಮಾಧಾನ ಹೊಂದಿದ್ದ ಶಾಸಕರಿಗೆ ಬಿಜೆಪಿ ಮುಖಂಡರು ಯಾವ ರೀತಿಯ ಸಮಜಾಯಿಷಿ ನೀಡುತ್ತಾರೆ ಎಂಬುದು ಕಾದು ನೋಡಬೇಕು.

Conclusion:ಒಟ್ಟಿನಲ್ಲಿ ಮಹಾ ಅಖಾಡದಲ್ಲಿ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆ ಉಂಟಾಗಿದೆ. ಮಹಾ ಚುನಾವಣೆ ನೆಪದಲ್ಲಿ ಸೋತ ಸವದಿಗೆ ಡಿಸಿಎಂ ಪಟ್ಟದ ಜೊತೆ ಸಚಿವ ಸ್ಥಾನ ನೀಡಿದ್ದ ಬಿಜೆಪಿ ಹೈಕಮಾಂಡ್ ಗೆ ಸಧ್ಯ ಸವದಿ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ. ಇತ್ತ ಹಿರಿಯರ ಸ್ಥಾನದಲ್ಲಿದ್ದು ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದ ಉಮೇಶ್ ಕತ್ತಿ ಅವರನ್ನು ಸಮಾಧಾನ ಮಾಡುವ ಹೊಣೆ ಬಿಜೆಪಿ ಮುಖಂಡರ ಮೇಲಿದೆ‌. ಒಟ್ಟಿನಲ್ಲಿ ಮಹಾ ಅಖಾಡದಲ್ಲಿ ಸೋತಿರಿವ ಲಕ್ಷ್ಮಣ ಸವದಿ ಡಿಸಿಎಂ ಪಟ್ಟ ಉಳಿಯುವುದಾ ಉರುಳುವುದಾ ಕಾದು ನೋಡಬೇಕು.

ವಿನಾಯಕ ಮಠಪತಿ
ಬೆಳಗಾವಿ

Last Updated : Oct 25, 2019, 10:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.