ETV Bharat / state

ಅಮಿತ್‌ ಶಾ ಅವರೊಂದಿಗೆ ಇಂದು ಪಕ್ಷ ಸಮಾಲೋಚನೆ ಸಭೆ: ಲಕ್ಷ್ಮಣ ಸವದಿ - ಡಿಸಿಎಂ ಲಕ್ಷ್ಮಣ ಸವದಿ

ಇಂದು ಅಮಿತ್ ಶಾ ಅವರೊಂದಿಗೆ ಜಿಲ್ಲೆಯ ಸಚಿವರು, ಶಾಸಕರು, ಪದಾಧಿಕಾರಿಗಳು ಸೇರಿಕೊಂಡು ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆ ಕುರಿತು ಇಂದು ಸಂಜೆ ಸಮಾಲೋಚನೆ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ‌ ಹೇಳಿದರು.

BJP Party meeting with Amit Shah today in belagavi
ಡಿಸಿಎಂ ಲಕ್ಷ್ಮಣ ಸವದಿ
author img

By

Published : Jan 17, 2021, 1:22 PM IST

ಬೆಳಗಾವಿ: ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆ ಹಿನ್ನೆಲೆ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಇಂದು‌ ಸಮಾಲೋಚನೆ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ‌ ಹೇಳಿದರು.

ಸಮಾಲೋಚನೆ ಸಭೆ ಕುರಿತು ಲಕ್ಷ್ಮಣ ಸವದಿ ಮಾಹಿತಿ

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಇಂದು ನಗರದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಆಗಮಿಸಲಿದ್ದಾರೆ.

ಈಗಾಗಲೇ ಬೆಳಗಾವಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬಾಗಲಕೋಟೆಗೆ ಸಮಾರಂಭಕ್ಕೆ ತೆರಳಿದ್ದಾರೆ. ಮರಳಿ ಮಧ್ಯಾಹ್ನ 1.30 ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ನಂತರ ನಗರದ ಪ್ರವಾಸಿ ಮಂದಿರದಲ್ಲಿ ಊಟ ಮುಗಿಸಿಕೊಂಡು ಅಲ್ಲಿಂದ ನೇರವಾಗಿ ದಿ.ಸುರೇಶ ಅಂಗಡಿ ಮನೆಗೆ ಭೇಟಿ ನೀಡಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದರು.

ಇನ್ನು ಸಂಜೆ 4 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ್ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ಕೆಎಲ್ಇ ಸಂಸ್ಥೆಯಲ್ಲಿ ಲ್ಯಾಬ್ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜಿಗ್ರಿ ಹಾಲ್​ನಲ್ಲಿ ಜಿಲ್ಲೆಯ ಬಿಜೆಪಿ‌ ಮುಖಂಡರು, ಮಂತ್ರಿಗಳು ಹಾಗೂ ಅಮಿತ್ ಶಾ ಅವರೊಂದಿಗೆ ಸಭೆ ನಡೆಯಲಿದೆ‌. ಆ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶಗಳನ್ನು ಮಾಡಿದ್ದರಿಂದ ಹಿಂದೆಂದು ಕಾಣದ ರೀತಿಯಲ್ಲಿ ಗ್ರಾಮ ಪಂಚಾಯತ್​ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬೇರೆ ಜಿಲ್ಲೆಗೆ ಹೋಲಿಸಿದರೆ ಬೆಳಗಾವಿಯಲ್ಲಿ ಅತಿ‌ ಹೆಚ್ಚು ಗ್ರಾಮ ಪಂಚಾಯತ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಹೀಗಾಗಿ ಗ್ರಾಪಂ ಸದಸ್ಯರ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವರಿಗೆ ಅಭಿನಂದನೆ ಸಲ್ಲಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು‌.

ಬೆಳಗಾವಿ: ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆ ಹಿನ್ನೆಲೆ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಇಂದು‌ ಸಮಾಲೋಚನೆ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ‌ ಹೇಳಿದರು.

ಸಮಾಲೋಚನೆ ಸಭೆ ಕುರಿತು ಲಕ್ಷ್ಮಣ ಸವದಿ ಮಾಹಿತಿ

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಇಂದು ನಗರದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಆಗಮಿಸಲಿದ್ದಾರೆ.

ಈಗಾಗಲೇ ಬೆಳಗಾವಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬಾಗಲಕೋಟೆಗೆ ಸಮಾರಂಭಕ್ಕೆ ತೆರಳಿದ್ದಾರೆ. ಮರಳಿ ಮಧ್ಯಾಹ್ನ 1.30 ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ನಂತರ ನಗರದ ಪ್ರವಾಸಿ ಮಂದಿರದಲ್ಲಿ ಊಟ ಮುಗಿಸಿಕೊಂಡು ಅಲ್ಲಿಂದ ನೇರವಾಗಿ ದಿ.ಸುರೇಶ ಅಂಗಡಿ ಮನೆಗೆ ಭೇಟಿ ನೀಡಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದರು.

ಇನ್ನು ಸಂಜೆ 4 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ್ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ಕೆಎಲ್ಇ ಸಂಸ್ಥೆಯಲ್ಲಿ ಲ್ಯಾಬ್ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜಿಗ್ರಿ ಹಾಲ್​ನಲ್ಲಿ ಜಿಲ್ಲೆಯ ಬಿಜೆಪಿ‌ ಮುಖಂಡರು, ಮಂತ್ರಿಗಳು ಹಾಗೂ ಅಮಿತ್ ಶಾ ಅವರೊಂದಿಗೆ ಸಭೆ ನಡೆಯಲಿದೆ‌. ಆ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶಗಳನ್ನು ಮಾಡಿದ್ದರಿಂದ ಹಿಂದೆಂದು ಕಾಣದ ರೀತಿಯಲ್ಲಿ ಗ್ರಾಮ ಪಂಚಾಯತ್​ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬೇರೆ ಜಿಲ್ಲೆಗೆ ಹೋಲಿಸಿದರೆ ಬೆಳಗಾವಿಯಲ್ಲಿ ಅತಿ‌ ಹೆಚ್ಚು ಗ್ರಾಮ ಪಂಚಾಯತ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಹೀಗಾಗಿ ಗ್ರಾಪಂ ಸದಸ್ಯರ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವರಿಗೆ ಅಭಿನಂದನೆ ಸಲ್ಲಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.