ETV Bharat / state

ಸಂಪುಟ ವಿಸ್ತರಣೆ ವಿಚಾರ : ಶೀಘ್ರದಲ್ಲೇ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಎಂದ ಸಿಎಂ

author img

By

Published : Oct 15, 2022, 4:59 PM IST

ರಾಜ್ಯದಲ್ಲಿ ಸಂಕಲ್ಪ ಯಾತ್ರೆ ನಡುವೆ ಶೀಘ್ರದಲ್ಲೇ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾ‌ನ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದರು.

cabinet expansion issue discuss with high command
ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಸಂಕಲ್ಪ ಯಾತ್ರೆ ನಡುವೆ ಶೀಘ್ರದಲ್ಲೆ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾ‌ನ ಮಾಡುತ್ತೇನೆ ಎಂದು ‌ಹೇಳಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತಿ ಶೀಘ್ರದಲ್ಲೇ ದೆಹಲಿಗೆ ಹೋಗುತ್ತೇನೆ. ರಾಜ್ಯದಲ್ಲಿ ಸಂಕಲ್ಪ ಯಾತ್ರೆ ನಡುವೆ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾ‌ನ ಮಾಡುತ್ತೇನೆ ಎಂದರು. ಈ ನಡುವೆ ಬೆಳಗಾವಿಗೆ ಸಿಹಿ ಸುದ್ದಿ ಇದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಏನು ತೀರ್ಮಾನ ಮಾಡಿದರು ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.

ಶೀಘ್ರದಲ್ಲೆ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಎಂದ ಸಿಎಂ

ಕೊಲ್ಹಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರಕ್ಕೆ, ಈಗಾಗಲೇ ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ಕನ್ನಡ ಭವನಗಳಿವೆ. ಇದೇನು ಹೊಸದೇನು ಅಲ್ಲ. ಈ ವಿಚಾರದಲ್ಲಿ ಭಾಷೆ, ಜಾತಿ ಅಡ್ಡಿ ಬರಬರಾದು ಎಂದು ಹೇಳಿದ್ದಾರೆ.

ಕೆಎಲ್​ಇ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಕೋರೆ ಅಮೃತ ಮಹೋತ್ಸವ ಆಚರಣೆ ವಿಚಾರಕ್ಕೆ, ನಾಲ್ಕು ದಶಕಗಳ ಕಾಲ ಸೇವೆ ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ನಾಲ್ಕು ದಶಕಗಳಲ್ಲಿ ಅವರ ಸಮಾಜ ಸೇವೆಯನ್ನು ನಾವು ಗುರುತಿಸಬೇಕು. ನಾಯಕನ ಅಮೃತ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಶುಭಾಶಯ ಕೋರುತ್ತೇನೆ ಎಂದರು.

ಇದನ್ನೂ ಓದಿ : ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ನಮ್ಮ ಆದರ್ಶ: ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಸಂಕಲ್ಪ ಯಾತ್ರೆ ನಡುವೆ ಶೀಘ್ರದಲ್ಲೆ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾ‌ನ ಮಾಡುತ್ತೇನೆ ಎಂದು ‌ಹೇಳಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತಿ ಶೀಘ್ರದಲ್ಲೇ ದೆಹಲಿಗೆ ಹೋಗುತ್ತೇನೆ. ರಾಜ್ಯದಲ್ಲಿ ಸಂಕಲ್ಪ ಯಾತ್ರೆ ನಡುವೆ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾ‌ನ ಮಾಡುತ್ತೇನೆ ಎಂದರು. ಈ ನಡುವೆ ಬೆಳಗಾವಿಗೆ ಸಿಹಿ ಸುದ್ದಿ ಇದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಏನು ತೀರ್ಮಾನ ಮಾಡಿದರು ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.

ಶೀಘ್ರದಲ್ಲೆ ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಎಂದ ಸಿಎಂ

ಕೊಲ್ಹಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರಕ್ಕೆ, ಈಗಾಗಲೇ ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ಕನ್ನಡ ಭವನಗಳಿವೆ. ಇದೇನು ಹೊಸದೇನು ಅಲ್ಲ. ಈ ವಿಚಾರದಲ್ಲಿ ಭಾಷೆ, ಜಾತಿ ಅಡ್ಡಿ ಬರಬರಾದು ಎಂದು ಹೇಳಿದ್ದಾರೆ.

ಕೆಎಲ್​ಇ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಕೋರೆ ಅಮೃತ ಮಹೋತ್ಸವ ಆಚರಣೆ ವಿಚಾರಕ್ಕೆ, ನಾಲ್ಕು ದಶಕಗಳ ಕಾಲ ಸೇವೆ ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ನಾಲ್ಕು ದಶಕಗಳಲ್ಲಿ ಅವರ ಸಮಾಜ ಸೇವೆಯನ್ನು ನಾವು ಗುರುತಿಸಬೇಕು. ನಾಯಕನ ಅಮೃತ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಶುಭಾಶಯ ಕೋರುತ್ತೇನೆ ಎಂದರು.

ಇದನ್ನೂ ಓದಿ : ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ನಮ್ಮ ಆದರ್ಶ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.