ETV Bharat / state

ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಚಿಕ್ಕೋಡಿಯಲ್ಲಿ ರೈತರ ಪ್ರೊಟೆಸ್ಟ್​​​​​

author img

By

Published : Sep 25, 2020, 6:40 PM IST

ರೈತ ವಿರೋಧಿ ಮಸೂದೆ ಹಾಗೂ ಕಾಯ್ದೆಗಳನ್ನು ಕೈ ಬಿಡುವಂತೆ ಚಿಕ್ಕೋಡಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.

Chikkodi Farmer Protest against APMC, Land reforms act
ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಚಿಕ್ಕೋಡಿಯಲ್ಲಿ ರೈತರ ಪ್ರತಿಭಟನೆ.

ಚಿಕ್ಕೋಡಿ: ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯು ರೈತರಿಗೆ ಮಾರಕವಾಗಿದ್ದು, ಈ ಕೂಡಲೇ ವಾಪಸ್​ ಪಡೆಯಬೇಕು ಎಂದು ಆಗ್ರಹಿಸಿ ರೈತರು ವಿನೂತನವಾಗಿ ಪ್ರತಿಭಟಿಸಿದರು.

ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಚಿಕ್ಕೋಡಿಯಲ್ಲಿ ರೈತರ ಪ್ರತಿಭಟನೆ

ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟಿಸಿದರು. ರೈತ ಸಂಘಟನೆಗಳಿಗೆ ವಿವಿಧ ಕನ್ನಡಪರ, ದಲಿತ ಸಂಘರ್ಷ ಸಮಿತಿ ಹಾಗೂ ಕಾರ್ಮಿಕ ಮತ್ತು ಮಹಿಳಾ ಸಂಘಟನೆಗಳು ಬೆಂಬಲ ನೀಡಿದವು. ಬಸವೇಶ್ವರ ತಾಲೂಕಿನಲ್ಲಿ ಅಥಣಿ, ನಿಪ್ಪಾಣಿ ಹುಕ್ಕೇರಿ ತಾಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ವಿರೋಧಿ ಮಸೂದೆ ಹಾಗೂ ಕಾಯ್ದೆಗಳನ್ನು ಕೈ ಬಿಡುವಂತೆ ಸರ್ಕಾರಕ್ಕೆ ಆಗ್ರಹಿಸಿದ ರೈತರು ಪ್ರತಿಭಟನೆಯ ನಂತರ ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು‌.

ಚಿಕ್ಕೋಡಿ: ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯು ರೈತರಿಗೆ ಮಾರಕವಾಗಿದ್ದು, ಈ ಕೂಡಲೇ ವಾಪಸ್​ ಪಡೆಯಬೇಕು ಎಂದು ಆಗ್ರಹಿಸಿ ರೈತರು ವಿನೂತನವಾಗಿ ಪ್ರತಿಭಟಿಸಿದರು.

ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಚಿಕ್ಕೋಡಿಯಲ್ಲಿ ರೈತರ ಪ್ರತಿಭಟನೆ

ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟಿಸಿದರು. ರೈತ ಸಂಘಟನೆಗಳಿಗೆ ವಿವಿಧ ಕನ್ನಡಪರ, ದಲಿತ ಸಂಘರ್ಷ ಸಮಿತಿ ಹಾಗೂ ಕಾರ್ಮಿಕ ಮತ್ತು ಮಹಿಳಾ ಸಂಘಟನೆಗಳು ಬೆಂಬಲ ನೀಡಿದವು. ಬಸವೇಶ್ವರ ತಾಲೂಕಿನಲ್ಲಿ ಅಥಣಿ, ನಿಪ್ಪಾಣಿ ಹುಕ್ಕೇರಿ ತಾಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ವಿರೋಧಿ ಮಸೂದೆ ಹಾಗೂ ಕಾಯ್ದೆಗಳನ್ನು ಕೈ ಬಿಡುವಂತೆ ಸರ್ಕಾರಕ್ಕೆ ಆಗ್ರಹಿಸಿದ ರೈತರು ಪ್ರತಿಭಟನೆಯ ನಂತರ ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.