ಅಥಣಿ: ಅಥಣಿ ಪಟ್ಟಣದ ಹೊರವಲಯದಲ್ಲಿ ಅತಿಕ್ರಮಣವಾಗಿದ್ದ ಸರ್ಕಾರಿ ಜಮೀನು ತೆರವು ಕಾರ್ಯ ತಹಶೀಲ್ದಾರ್ ಎಂ ಎನ್ ಬಳಿಗಾರ್ ನೇತೃತ್ವದಲ್ಲಿ ನಡೆಯಿತು.
ಪಟ್ಟಣದ ಸುತ್ತಮುತ್ತಲಿನ ಸರ್ಕಾರಿ ಜಮೀನುಗಳಲ್ಲಿ ಕೂಲಿ ಕಾರ್ಮಿಕರು ಮತ್ತು ವಲಸಿಗರು ಅಕ್ರಮ ಶೆಡ್ಗಳನ್ನು ನಿರ್ಮಿಸಿ ವಾಸ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಅರಿತ ತಹಶೀಲ್ದಾರ್ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಕ್ರಮಗಳ ಶೆಡ್ಗಳ ತೆರವು ಕಾರ್ಯ ಮಾಡಿದ್ದಾರೆ.
ಕಾರ್ಯಾಚರಣೆ ವೇಳೆ ಅಧಿಕಾರಿಗಳು ಮತ್ತು ಸ್ಥಳೀಯರ ಮಧ್ಯೆ ಭಾರಿ ವಾಗ್ವಾದ ನಡೆಯಿತು. ಸ್ಥಳೀಯರ ವಿರೋಧಕ್ಕೆ ಜಗ್ಗದ ಅಧಿಕಾರಿಗಳು ಅತಿಕ್ರಮಣ ಜಾಗವನ್ನು ತೆರವುಗೊಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಅಡ್ಡಿಪಡಿಸಿದ ಮಹಿಳೆಗೆ ಪೊಲೀಸ್ ಅಧಿಕಾರಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.