ETV Bharat / state

ಯಡೂರ ಗ್ರಾಮ ಪಂಚಾಯತ್​ನಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ

author img

By

Published : Feb 3, 2021, 7:54 AM IST

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮ ಪಂಚಾಯತಿ‌ಯಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಮಾಡಿಕೊಂಡಿವೆ. 20 ಸದಸ್ಯರ ಬಲವನ್ನು ಹೊಂದಿರುವ ಯಡೂರ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿಯಿಂದ ಏಳು ಜನ ಸದಸ್ಯರು, ಕಾಂಗ್ರೆಸ್​ನಿಂದ ಆರು ಜನ ಸದಸ್ಯರು ಆಯ್ಕೆಯಾಗಿದ್ದರು.

Chikkodi
ಕಾಂಗ್ರೆಸ್-ಬಿಜೆಪಿ

ಚಿಕ್ಕೋಡಿ (ಬೆಳಗಾವಿ): ಒಂದು ಕಡೆ ದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಯಾವಾಗಲೂ ಹಾವು- ಮುಂಗುಸಿಯಂತೆ ಇದ್ದರೆ, ಈ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮದ ಸರ್ವಾಂಗೀಣ ವಿಕಾಸಕ್ಕಾಗಿ ಬಿಜೆಪಿ- ಕಾಂಗ್ರೆಸ್ ಸದಸ್ಯರು ಸೇರಿ ಗ್ರಾಮದ ಅಭಿವೃದ್ಧಿಗೆ ಪಕ್ಷಭೇದ ಮರೆತು ಒಂದಾಗಿ ಗ್ರಾಮ ಪಂಚಾಯತಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಮೈತ್ರಿ ಮಾಡಿಕೊಂಡ ಕಾಂಗ್ರೆಸ್-ಬಿಜೆಪಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮ ಪಂಚಾಯತಿ‌ಯಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಮಾಡಿಕೊಂಡಿವೆ. 20 ಸದಸ್ಯರ ಬಲ ಹೊಂದಿರುವ ಯಡೂರ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿಯಿಂದ ಏಳು ಜನ ಸದಸ್ಯರು, ಕಾಂಗ್ರೆಸ್​ನಿಂದ ಆರು ಜನ ಸದಸ್ಯರು ಹಾಗೂ ಶಿವತೇಜ ಫೌಂಡೇಶನ್​ನಿಂದ 7 ಜನ ಸದಸ್ಯರು ಆಯ್ಕೆಯಾಗಿದ್ದರು.

ಇಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಅಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ವರಾಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಹುಲ ದೇಸಾಯಿ ನಾಮಪತ್ರವನ್ನು ಸಲ್ಲಿಸಿದ್ದರು. ಇತ್ತ ಶಿವತೇಜ ಫೌಂಡೇಶನ್​ನಿಂದ ಅಧ್ಯಕ್ಷ ಸ್ಥಾನಕ್ಕೆ ಬಿಬಾ ಕಾಂಬಳೆ ಅವರು ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಅಜಯ ಸೂರ್ಯವಂಶಿ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಶ್ರೀದೇವಿ ವರಾಳೆ 13 ಮತಗಳನ್ನು ಪಡೆದು ಅಧ್ಯಕ್ಷರಾಗಿ ಚುನಾಯಿತರಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ರಾಹುಲ ದೇಸಾಯಿ 13 ಮತಗಳನ್ನು ಪಡೆದು ಆಯ್ಕೆಯಾದರು. ಕಾಂಗ್ರೆಸ್-ಬಿಜೆಪಿ ಸದಸ್ಯರು ಸೇರಿ ಗ್ರಾಮ ಪಂಚಾಯಿತಿಯ ಆಡಳಿತದ ಅಧಿಕಾರ ಚುಕ್ಕಾಣಿ ಹಿಡಿದರು. ಇದರಿಂದ ಸಹಜವಾಗಿಯೇ ಶಿವತೇಜ ಫೌಂಡೇಶನ್​ಗೆ ಮುಖಭಂಗವಾಗಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಧ್ವಜವನ್ನು ಹಿಡಿದು ರಂಗೆರಚಿ, ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ದೇಸಾಯಿ ಮಾತನಾಡಿ, ನಮ್ಮಲ್ಲಿ ಕಾಂಗ್ರೆಸ್-ಬಿಜೆಪಿ ಎನ್ನುವ ಯಾವುದೇ ಪಕ್ಷಬೇಧವಿಲ್ಲ, ಯಡೂರು ಗ್ರಾಮದ ಸರ್ವಾಂಗೀಣ ವಿಕಾಸಕ್ಕಾಗಿ ಕಾಂಗ್ರೆಸ್ -ಬಿಜೆಪಿ ಸದಸ್ಯರು ಸೇರಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದೇವೆ. ಗ್ರಾಮದ ಅಭಿವೃದ್ಧಿಯೇ ನಮ್ಮ ಮೂಲ ಗುರಿಯಾಗಿದೆ ಎಂದು ತಿಳಿಸಿದರು.

ನೂತನ ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ ಉಮ್ರಾಣಿ ಮಾತನಾಡಿ, ಇಲ್ಲಿ ಕಾಂಗ್ರೆಸ್-ಬಿಜೆಪಿ ಎನ್ನುವ ಯಾವುದೇ ಪಕ್ಷ ಭೇದಭಾವವಿಲ್ಲ. ನಾವೆಲ್ಲರೂ ಒಗ್ಗೂಡಿ ಕೇಂದ್ರ, ರಾಜ್ಯ ಸರ್ಕಾರದಿಂದ ಬರತಕ್ಕಂತಹ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸುವುದು ನಮ್ಮ ಧ್ಯೇಯವಾಗಿದೆ. ಗ್ರಾಮ ಪಂಚಾಯಿತಿ ಹಂತದಲ್ಲಿ ಗ್ರಾಮದ ಅಭಿವೃದ್ಧಿ ನಮ್ಮ ಮೂಲಮಂತ್ರವಾಗಿದೆ ಎಂದರು.

ದೇಶದಲ್ಲಿ ಕಾಂಗ್ರೆಸ್- ಬಿಜೆಪಿ ಪಕ್ಷಗಳು ಬದ್ಧ ವೈರಿಗಳಂತೆ ಇದ್ದರೆ, ಇತ್ತ ಯಡೂರು ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರು ಸೇರಿಕೊಂಡು ಗ್ರಾಮ ಪಂಚಾಯಿತಿಯ ಆಡಳಿತದ ಚುಕ್ಕಾಣಿಯನ್ನು ಹಿಡಿದು ಗ್ರಾಮವನ್ನು ಅಭಿವೃದ್ಧಿಗೆ ಪಣ ತೊಟ್ಟಿರುವುದು ನಿಜಕ್ಕೂ ಶ್ಲಾಘನೀಯ.

ಚಿಕ್ಕೋಡಿ (ಬೆಳಗಾವಿ): ಒಂದು ಕಡೆ ದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಯಾವಾಗಲೂ ಹಾವು- ಮುಂಗುಸಿಯಂತೆ ಇದ್ದರೆ, ಈ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮದ ಸರ್ವಾಂಗೀಣ ವಿಕಾಸಕ್ಕಾಗಿ ಬಿಜೆಪಿ- ಕಾಂಗ್ರೆಸ್ ಸದಸ್ಯರು ಸೇರಿ ಗ್ರಾಮದ ಅಭಿವೃದ್ಧಿಗೆ ಪಕ್ಷಭೇದ ಮರೆತು ಒಂದಾಗಿ ಗ್ರಾಮ ಪಂಚಾಯತಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಮೈತ್ರಿ ಮಾಡಿಕೊಂಡ ಕಾಂಗ್ರೆಸ್-ಬಿಜೆಪಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮ ಪಂಚಾಯತಿ‌ಯಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಮಾಡಿಕೊಂಡಿವೆ. 20 ಸದಸ್ಯರ ಬಲ ಹೊಂದಿರುವ ಯಡೂರ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿಯಿಂದ ಏಳು ಜನ ಸದಸ್ಯರು, ಕಾಂಗ್ರೆಸ್​ನಿಂದ ಆರು ಜನ ಸದಸ್ಯರು ಹಾಗೂ ಶಿವತೇಜ ಫೌಂಡೇಶನ್​ನಿಂದ 7 ಜನ ಸದಸ್ಯರು ಆಯ್ಕೆಯಾಗಿದ್ದರು.

ಇಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಅಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ವರಾಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಹುಲ ದೇಸಾಯಿ ನಾಮಪತ್ರವನ್ನು ಸಲ್ಲಿಸಿದ್ದರು. ಇತ್ತ ಶಿವತೇಜ ಫೌಂಡೇಶನ್​ನಿಂದ ಅಧ್ಯಕ್ಷ ಸ್ಥಾನಕ್ಕೆ ಬಿಬಾ ಕಾಂಬಳೆ ಅವರು ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಅಜಯ ಸೂರ್ಯವಂಶಿ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಶ್ರೀದೇವಿ ವರಾಳೆ 13 ಮತಗಳನ್ನು ಪಡೆದು ಅಧ್ಯಕ್ಷರಾಗಿ ಚುನಾಯಿತರಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ರಾಹುಲ ದೇಸಾಯಿ 13 ಮತಗಳನ್ನು ಪಡೆದು ಆಯ್ಕೆಯಾದರು. ಕಾಂಗ್ರೆಸ್-ಬಿಜೆಪಿ ಸದಸ್ಯರು ಸೇರಿ ಗ್ರಾಮ ಪಂಚಾಯಿತಿಯ ಆಡಳಿತದ ಅಧಿಕಾರ ಚುಕ್ಕಾಣಿ ಹಿಡಿದರು. ಇದರಿಂದ ಸಹಜವಾಗಿಯೇ ಶಿವತೇಜ ಫೌಂಡೇಶನ್​ಗೆ ಮುಖಭಂಗವಾಗಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಧ್ವಜವನ್ನು ಹಿಡಿದು ರಂಗೆರಚಿ, ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ದೇಸಾಯಿ ಮಾತನಾಡಿ, ನಮ್ಮಲ್ಲಿ ಕಾಂಗ್ರೆಸ್-ಬಿಜೆಪಿ ಎನ್ನುವ ಯಾವುದೇ ಪಕ್ಷಬೇಧವಿಲ್ಲ, ಯಡೂರು ಗ್ರಾಮದ ಸರ್ವಾಂಗೀಣ ವಿಕಾಸಕ್ಕಾಗಿ ಕಾಂಗ್ರೆಸ್ -ಬಿಜೆಪಿ ಸದಸ್ಯರು ಸೇರಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದೇವೆ. ಗ್ರಾಮದ ಅಭಿವೃದ್ಧಿಯೇ ನಮ್ಮ ಮೂಲ ಗುರಿಯಾಗಿದೆ ಎಂದು ತಿಳಿಸಿದರು.

ನೂತನ ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ ಉಮ್ರಾಣಿ ಮಾತನಾಡಿ, ಇಲ್ಲಿ ಕಾಂಗ್ರೆಸ್-ಬಿಜೆಪಿ ಎನ್ನುವ ಯಾವುದೇ ಪಕ್ಷ ಭೇದಭಾವವಿಲ್ಲ. ನಾವೆಲ್ಲರೂ ಒಗ್ಗೂಡಿ ಕೇಂದ್ರ, ರಾಜ್ಯ ಸರ್ಕಾರದಿಂದ ಬರತಕ್ಕಂತಹ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸುವುದು ನಮ್ಮ ಧ್ಯೇಯವಾಗಿದೆ. ಗ್ರಾಮ ಪಂಚಾಯಿತಿ ಹಂತದಲ್ಲಿ ಗ್ರಾಮದ ಅಭಿವೃದ್ಧಿ ನಮ್ಮ ಮೂಲಮಂತ್ರವಾಗಿದೆ ಎಂದರು.

ದೇಶದಲ್ಲಿ ಕಾಂಗ್ರೆಸ್- ಬಿಜೆಪಿ ಪಕ್ಷಗಳು ಬದ್ಧ ವೈರಿಗಳಂತೆ ಇದ್ದರೆ, ಇತ್ತ ಯಡೂರು ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರು ಸೇರಿಕೊಂಡು ಗ್ರಾಮ ಪಂಚಾಯಿತಿಯ ಆಡಳಿತದ ಚುಕ್ಕಾಣಿಯನ್ನು ಹಿಡಿದು ಗ್ರಾಮವನ್ನು ಅಭಿವೃದ್ಧಿಗೆ ಪಣ ತೊಟ್ಟಿರುವುದು ನಿಜಕ್ಕೂ ಶ್ಲಾಘನೀಯ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.