ETV Bharat / state

ಟಿಕೆಟ್ ನೀಡಿದ ನಾಯಕರಿಗೆ ಧನ್ಯವಾದಗಳು : ಲಖನ್​ ಜಾರಕಿಹೊಳಿ

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನಾಗಿ ಇಷ್ಟು ದಿನ ದುಡಿದು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತಾ ಬಂದಿದ್ದೇನೆ. ಇದನ್ನು ಮನಗಂಡು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ನನಗೆ ಟಿಕೆಟ್ ನೀಡಿದ್ದು, ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಗೋಕಾಕ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದ್ದಾರೆ.

author img

By

Published : Nov 15, 2019, 10:57 AM IST

ಗೋಕಾಕ್​ನಿಂದ ಲಖನ್​ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​

ಗೋಕಾಕ: ಗೋಕಾಕ್​ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಲಖನ್ ಜಾರಕಿಹೊಳಿಗೆ ಟಿಕೆಟ್ ದೊರೆತ ಹಿನ್ನೆಲೆ, ಕಾಂಗ್ರೆಸ್ ಕಾರ್ಯಕರ್ತರು ಲಖನ್​ ಕಛೇರಿಗೆ ತೆರಳಿ ಅಭಿನಂದಿಸಿದರು.

ಗೋಕಾಕ್​ನಿಂದ ಲಖನ್​ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​

ಈ ವೇಳೆ ಮಾತನಾಡಿದ ಲಖನ್​ ಜಾರಕಿಹೊಳಿ, ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನಾಗಿ ಇಷ್ಟು ದಿನ ದುಡಿದು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತಾ ಬಂದಿದ್ದೇನೆ. ಇದನ್ನು ಮನಗಂಡು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ನನಗೆ ಟಿಕೆಟ್ ನೀಡಿದ್ದು, ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಳೆದ 6 ತಿಂಗಳಿನಿಂದ ಸತೀಶ್ ಜಾರಕಿಹೊಳಿ ಜೊತೆ ಪಕ್ಷ ಸಂಘಟಿಸುತ್ತಿದ್ದು, ಸತೀಶ್ ಜೊತೆಗೂಡಿ ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇವೆ. ಜಾರಕಿಹೊಳಿ ಸಹೋದರರ ನಡುವೆ ಯಾವುದೇ ಹೊಂದಾಣಿಕೆ ಇಲ್ಲ. ಯಾರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಕಾಂಗ್ರೆಸ್ ಪಕ್ಷ ಗೆಲ್ಲಿಸುವುದೇ ನಮ್ಮ ಗುರಿ ಎಂದು ಹೇಳಿದರು.

ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ತಾಲೂಕಿನ ಜನತೆ ಕಾಂಗ್ರೆಸ್​ಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.

ಅಭಿಮಾನಿಗಳಿಂದ ಸಂಭ್ರಮಾಚರಣೆ:​ ಲಖನ್ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​ ದೊರೆತ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕೈ ಕಾರ್ಯಕರ್ತರು ಮತ್ತು ಲಖನ್ ಅಭಿಮಾನಿಗಳು, ಸಿದ್ದರಾಮಯ್ಯ , ಸತೀಶ್​ ಜಾರಕಿಹೊಳಿ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಅಶೋಕ್​ ಪೂಜಾರಿಯೂ ಆಕಾಂಕ್ಷಿ: ತೀವ್ರ ಕುತೂಹಲ ಮೂಡಿಸಿದ ಟಿಕೆಟ್ ಹಂಚಿಕೆ ವಿಚಾರವಾಗಿ ಒಂದು ಕಡೆ ಕಾಂಗ್ರೆಸ್​ನಿಂದ ಅಶೋಕ್​ ಪೂಜಾರಿ ಕೂಡ ಟಿಕೆಟ್ ಆಕಾಂಕ್ಷಿ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಪೂಜಾರಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್​ನ ಪ್ರಬಲ ನಾಯಕರು ಲಾಬಿ ನಡೆಸಿದ್ದರು. ಆದರೆ ಬೆಂಗಳೂರಿನಲ್ಲಿ ಸತೀಶ್​ ಜಾರಕಿಹೊಳಿ ಟಿಕೆಟ್ ನೀಡುವ ವಿಚಾರವಾಗಿ ಸಿದ್ದರಾಮಯ್ಯ ಮುಂದೆ ಅಸಮಾಧಾನ ಹೊರಹಾಕಿದ್ದರು. ಸದ್ಯ ಲಖನ್​ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​ ನೀಡಿದೆ. ಅಶೋಕ್​ ಪೂಜಾರಿ ನಡೆ ಇನ್ನೂ ನಿಗೂಢವಾಗಿ ಉಳಿದಿದೆ.

ಗೋಕಾಕ: ಗೋಕಾಕ್​ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಲಖನ್ ಜಾರಕಿಹೊಳಿಗೆ ಟಿಕೆಟ್ ದೊರೆತ ಹಿನ್ನೆಲೆ, ಕಾಂಗ್ರೆಸ್ ಕಾರ್ಯಕರ್ತರು ಲಖನ್​ ಕಛೇರಿಗೆ ತೆರಳಿ ಅಭಿನಂದಿಸಿದರು.

ಗೋಕಾಕ್​ನಿಂದ ಲಖನ್​ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​

ಈ ವೇಳೆ ಮಾತನಾಡಿದ ಲಖನ್​ ಜಾರಕಿಹೊಳಿ, ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನಾಗಿ ಇಷ್ಟು ದಿನ ದುಡಿದು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತಾ ಬಂದಿದ್ದೇನೆ. ಇದನ್ನು ಮನಗಂಡು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ನನಗೆ ಟಿಕೆಟ್ ನೀಡಿದ್ದು, ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಳೆದ 6 ತಿಂಗಳಿನಿಂದ ಸತೀಶ್ ಜಾರಕಿಹೊಳಿ ಜೊತೆ ಪಕ್ಷ ಸಂಘಟಿಸುತ್ತಿದ್ದು, ಸತೀಶ್ ಜೊತೆಗೂಡಿ ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇವೆ. ಜಾರಕಿಹೊಳಿ ಸಹೋದರರ ನಡುವೆ ಯಾವುದೇ ಹೊಂದಾಣಿಕೆ ಇಲ್ಲ. ಯಾರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಕಾಂಗ್ರೆಸ್ ಪಕ್ಷ ಗೆಲ್ಲಿಸುವುದೇ ನಮ್ಮ ಗುರಿ ಎಂದು ಹೇಳಿದರು.

ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ತಾಲೂಕಿನ ಜನತೆ ಕಾಂಗ್ರೆಸ್​ಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.

ಅಭಿಮಾನಿಗಳಿಂದ ಸಂಭ್ರಮಾಚರಣೆ:​ ಲಖನ್ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​ ದೊರೆತ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕೈ ಕಾರ್ಯಕರ್ತರು ಮತ್ತು ಲಖನ್ ಅಭಿಮಾನಿಗಳು, ಸಿದ್ದರಾಮಯ್ಯ , ಸತೀಶ್​ ಜಾರಕಿಹೊಳಿ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಅಶೋಕ್​ ಪೂಜಾರಿಯೂ ಆಕಾಂಕ್ಷಿ: ತೀವ್ರ ಕುತೂಹಲ ಮೂಡಿಸಿದ ಟಿಕೆಟ್ ಹಂಚಿಕೆ ವಿಚಾರವಾಗಿ ಒಂದು ಕಡೆ ಕಾಂಗ್ರೆಸ್​ನಿಂದ ಅಶೋಕ್​ ಪೂಜಾರಿ ಕೂಡ ಟಿಕೆಟ್ ಆಕಾಂಕ್ಷಿ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಪೂಜಾರಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್​ನ ಪ್ರಬಲ ನಾಯಕರು ಲಾಬಿ ನಡೆಸಿದ್ದರು. ಆದರೆ ಬೆಂಗಳೂರಿನಲ್ಲಿ ಸತೀಶ್​ ಜಾರಕಿಹೊಳಿ ಟಿಕೆಟ್ ನೀಡುವ ವಿಚಾರವಾಗಿ ಸಿದ್ದರಾಮಯ್ಯ ಮುಂದೆ ಅಸಮಾಧಾನ ಹೊರಹಾಕಿದ್ದರು. ಸದ್ಯ ಲಖನ್​ ಜಾರಕಿಹೊಳಿಗೆ ಕಾಂಗ್ರೆಸ್​ ಟಿಕೆಟ್​ ನೀಡಿದೆ. ಅಶೋಕ್​ ಪೂಜಾರಿ ನಡೆ ಇನ್ನೂ ನಿಗೂಢವಾಗಿ ಉಳಿದಿದೆ.

Intro:ಟಿಕೆಟ್ ನೀಡಿದ ನಾಯಕರಿಗೆ ಧನ್ಯವಾದಗಳು : ಲಖನ ಜಾರಕಿಹೊಳಿ
Body:ಗೋಕಾಕ: ಗೋಕಾಕ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಖನ ಜಾರಕಿಹೊಳಿ ಅವರ ಕಛೇರಿಗೆ ಭೇಟಿ ನೀಡಿ ಅಭಿನಂದಿಸಿದರು.

ನಂತರ ಮಾತನಾಡಿದ ಲಖನ ಜಾರಕಿಹೊಳಿ ಅವರು ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನಾಗಿ ಇಷ್ಟು ದಿನ ದುಡಿದ್ದು ಪಕ್ಷದ ಅಭ್ಯರ್ಥಿ ಗೆಲ್ಲಿಸುತ್ತಾ ಬಂದಿದ್ದೂ ಇದನ್ನು ಮನಗಂಡು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ನನಗೆ ಟಿಕೆಟ್ ನೀಡಿದ್ದು ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೆನೆ.

ಕಳೆದ 6 ತಿಂಗಳಿದ ಸತೀಶ್ ಜಾರಕಿಹೊಳಿ ಜೊತೆ ಪಕ್ಷ ಸಂಘಟಿಸುತ್ತಿದ್ದು, ಸತೀಶ್ ಜೊತೆ ಕೈಗೂಡಿ ಇನ್ನೂ ಹೆಚ್ಚು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದೆವೆ. ಜಾರಕಿಹೊಳಿ ಸಹೋದರರ ನಡುವೆ ಯಾವುದೇ ಹೊಂದಾಣಿಕೆ ಇಲ್ಲ. ಯಾರು ಇದರ ಬಗ್ಗೆ ತಲೆ ಕೆಡಿಸಿ ಕೊಳ್ಳಬೇಡಿ, ಕಾಂಗ್ರೆಸ್ ಪಕ್ಷ ಗೆಲ್ಲಿಸುವುದೆ ನಮ್ಮ ಗುರಿ ಎಂದರು.

ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕು ಮತ್ತು ತಾಲೂಕಿನ ಜನತೆ ಕಾಂಗ್ರೆಸಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

KN_GKK_05_14_LAKHAN_JARKIHOLI_BYTE_KAC10009Conclusion:ಗೋಕಾಕ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.