ETV Bharat / state

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ‌ ಅಧಿಕಾರಕ್ಕೆ ಬಂದೇ ಬರುತ್ತೆ: ಸತೀಶ್​​ ಜಾರಕಿಹೊಳಿ

author img

By

Published : Jul 6, 2020, 6:37 PM IST

ಹಿಂದೆ ಇದ್ದ ಕಾಂಗ್ರೆಸ್​ ಬೇರೆ, ಮುಂದೆ ಬರಲಿರುವ ಕಾಂಗ್ರೆಸ್ ಬೇರೆ. ಡಿ.ಕೆ.ಶಿವಕುಮಾರ್​​ ನೇತೃತ್ವದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸತೀಶ್​​ ಜಾರಕೊಹೊಳಿ ಹೇಳಿದ್ದಾರೆ.

Satish Jarkiholi
ಸತೀಶ್​​ ಜಾರಕಿಹೊಳಿ

ಚಿಕ್ಕೋಡಿ: ನಮ್ಮ‌ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ‌ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸತೀಶ್​​ ಜಾರಕಿಹೊಳಿ

ಚಿಕ್ಕೋಡಿ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸತ್ಕಾರ ಸ್ವೀಕಾರದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​​ ಉತ್ಸಾಹಿ ರಾಜಕಾರಣಿಯಾಗಿದ್ದಾರೆ. ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ‌ವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ಡಿ.ಕೆ.ಶಿವಕುಮಾರ್​ ಜೈಲಿಗೆ ಹೋಗಿ ಬಂದಿದ್ದು ಅಪ್ರಸ್ತುತ. ಅವರ ಸಾಮರ್ಥ್ಯ ಹಾಗೂ ಪಕ್ಷ ಸೇವೆ ನೋಡಿ ಹೈಕಮಾಂಡ್​​ ಅವರಿಗೆ ಜವಾಬ್ದಾರಿ ನೀಡಿದೆ. ಹಿಂದೆ ಇದ್ದ ಕಾಂಗ್ರೆಸ್​ ಬೇರೆ, ಮುಂದೆ ಬರಲಿರುವ ಕಾಂಗ್ರೆಸ್ ಬೇರೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದರು.

ಚಿಕ್ಕೋಡಿ: ನಮ್ಮ‌ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ‌ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸತೀಶ್​​ ಜಾರಕಿಹೊಳಿ

ಚಿಕ್ಕೋಡಿ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸತ್ಕಾರ ಸ್ವೀಕಾರದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​​ ಉತ್ಸಾಹಿ ರಾಜಕಾರಣಿಯಾಗಿದ್ದಾರೆ. ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ‌ವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ಡಿ.ಕೆ.ಶಿವಕುಮಾರ್​ ಜೈಲಿಗೆ ಹೋಗಿ ಬಂದಿದ್ದು ಅಪ್ರಸ್ತುತ. ಅವರ ಸಾಮರ್ಥ್ಯ ಹಾಗೂ ಪಕ್ಷ ಸೇವೆ ನೋಡಿ ಹೈಕಮಾಂಡ್​​ ಅವರಿಗೆ ಜವಾಬ್ದಾರಿ ನೀಡಿದೆ. ಹಿಂದೆ ಇದ್ದ ಕಾಂಗ್ರೆಸ್​ ಬೇರೆ, ಮುಂದೆ ಬರಲಿರುವ ಕಾಂಗ್ರೆಸ್ ಬೇರೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.