ETV Bharat / state

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಬಿಜೆಪಿ ಮುಂದಾದ್ರೇ ಉಗ್ರ ಪ್ರತಿಭಟನೆ : ಸತೀಶ್​​ ಜಾರಕಿಹೊಳಿ‌

author img

By

Published : Aug 8, 2021, 7:25 PM IST

ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಮುಂದಾದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎನ್ನುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಸಿದರು..

ಸತೀಶ್​​ ಜಾರಕಿಹೊಳಿ‌
Satish Jarakiholi

ಬೆಳಗಾವಿ : ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ‌ ತಿಳಿಸಿದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದ್ರೇ ಸುಮ್ನಿರಲ್ಲ.. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ‌

ಗೋಕಾಕ್‌ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮುಡಿಪಾಗಿಟ್ಟದ್ದಾರೆ.

ಹೀಗಾಗಿ, ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಎಂದು ಹೆಸರು ಇಟ್ಟಿದೆ. ಆದರೆ, ಬಿಜೆಪಿ ನಾಯಕರು ಅದನ್ನು ತೆಗೆದು ಹಾಕುವ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದರು.

ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಮುಂದಾದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎನ್ನುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಸಿದರು.

ಕ್ರೀಡೆಗೆ ಅನುದಾನ ಹೆಚ್ಚಿಸಲಿ : ಬಿಜೆಪಿ ಕೇಂದ್ರ ಸರ್ಕಾರ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅನುದಾನವನ್ನು ಪ್ರತಿವರ್ಷ ಹಂತ ಹಂತವಾಗಿ ಹೆಚ್ಚಿಸಬೇಕು. ಕ್ರೀಡಾಪಟುಗಳಿಗೆ ನೀಡುವ ಪ್ರೋತ್ಸಾಹ ಧನವನ್ನು ಸರ್ಕಾರ ಗಣನೀಯವಾಗಿ ಕಡಿತಗೊಳಿಸುವುದು ಸರಿಯಲ್ಲ. ಹೀಗೆ ಮಾಡುವುದರಿಂದ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ತೋರಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಟೋಕಿಯೊ ಒಲಂಪಿಕ್ಸ್​​ನಲ್ಲಿ ಜಾವೆಲಿನ್​​​ ಥ್ರೋನಲ್ಲಿ ನೀರಜ್ ಚೋಪ್ರಾ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರ ಸಾಧನೆಯಿಂದ ಇಡೀ ದೇಶಕ್ಕೆ ಗೌರವ ತರುವಂತಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಇಂತಹ ಕ್ರೀಡಾಪಟುಗಳು ಅನೇಕರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವರೆಲ್ಲರಿಗೂ ಪ್ರೋತ್ಸಾಹ ಮಾಡಬೇಕು ಎಂದರು.

ಓದಿ: ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿ: ಸಿ.ಟಿ. ರವಿ

ಕೋವಿಡ್ ನಿಯಂತ್ರಣದಲ್ಲಿ ವಿಫಲ : ಕೋವಿಡ್ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಈಗ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ. ಆದ ಕಾರಣ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಕೈಮೀರಿದ ಬಳಿಕ ನಿಯಂತ್ರಣಕ್ಕೆ ಪ್ರಯತ್ನಿಸುವುದು ಸರಿಯಾದ ಕ್ರಮವಲ್ಲ.

ಈಗಾಗಲೇ ಅನೇಕ ಕಡೆಗಳಿಂದ ವ್ಯಾಕ್ಸಿನ್ ವಿಳಂಬವಾಗುತ್ತಿವೆ ಎಂಬ ಮಾತು ಕೇಳಿ ಬರುತ್ತಿವೆ. ಸರ್ಕಾರ ಪೂರೈಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಕೆ ಮಾಡಬೇಕು. ಇದರಿಂದ ಮೂರನೇ ಅಲೆ ತಡೆಯಲು ಸಾಧ್ಯ ಎಂದು ಸಲಹೆ ನೀಡಿದರು.

ಓದಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ದ್ವೇಷದ ರಾಜಕಾರಣ: ಸಿದ್ದರಾಮಯ್ಯ ಕೆಂಡಾಮಂಡಲ

ಬೆಳಗಾವಿ : ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ‌ ತಿಳಿಸಿದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದ್ರೇ ಸುಮ್ನಿರಲ್ಲ.. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ‌

ಗೋಕಾಕ್‌ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮುಡಿಪಾಗಿಟ್ಟದ್ದಾರೆ.

ಹೀಗಾಗಿ, ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಎಂದು ಹೆಸರು ಇಟ್ಟಿದೆ. ಆದರೆ, ಬಿಜೆಪಿ ನಾಯಕರು ಅದನ್ನು ತೆಗೆದು ಹಾಕುವ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದರು.

ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಮುಂದಾದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎನ್ನುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಸಿದರು.

ಕ್ರೀಡೆಗೆ ಅನುದಾನ ಹೆಚ್ಚಿಸಲಿ : ಬಿಜೆಪಿ ಕೇಂದ್ರ ಸರ್ಕಾರ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅನುದಾನವನ್ನು ಪ್ರತಿವರ್ಷ ಹಂತ ಹಂತವಾಗಿ ಹೆಚ್ಚಿಸಬೇಕು. ಕ್ರೀಡಾಪಟುಗಳಿಗೆ ನೀಡುವ ಪ್ರೋತ್ಸಾಹ ಧನವನ್ನು ಸರ್ಕಾರ ಗಣನೀಯವಾಗಿ ಕಡಿತಗೊಳಿಸುವುದು ಸರಿಯಲ್ಲ. ಹೀಗೆ ಮಾಡುವುದರಿಂದ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ತೋರಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಟೋಕಿಯೊ ಒಲಂಪಿಕ್ಸ್​​ನಲ್ಲಿ ಜಾವೆಲಿನ್​​​ ಥ್ರೋನಲ್ಲಿ ನೀರಜ್ ಚೋಪ್ರಾ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರ ಸಾಧನೆಯಿಂದ ಇಡೀ ದೇಶಕ್ಕೆ ಗೌರವ ತರುವಂತಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಇಂತಹ ಕ್ರೀಡಾಪಟುಗಳು ಅನೇಕರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವರೆಲ್ಲರಿಗೂ ಪ್ರೋತ್ಸಾಹ ಮಾಡಬೇಕು ಎಂದರು.

ಓದಿ: ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿ: ಸಿ.ಟಿ. ರವಿ

ಕೋವಿಡ್ ನಿಯಂತ್ರಣದಲ್ಲಿ ವಿಫಲ : ಕೋವಿಡ್ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಈಗ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ. ಆದ ಕಾರಣ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಕೈಮೀರಿದ ಬಳಿಕ ನಿಯಂತ್ರಣಕ್ಕೆ ಪ್ರಯತ್ನಿಸುವುದು ಸರಿಯಾದ ಕ್ರಮವಲ್ಲ.

ಈಗಾಗಲೇ ಅನೇಕ ಕಡೆಗಳಿಂದ ವ್ಯಾಕ್ಸಿನ್ ವಿಳಂಬವಾಗುತ್ತಿವೆ ಎಂಬ ಮಾತು ಕೇಳಿ ಬರುತ್ತಿವೆ. ಸರ್ಕಾರ ಪೂರೈಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಕೆ ಮಾಡಬೇಕು. ಇದರಿಂದ ಮೂರನೇ ಅಲೆ ತಡೆಯಲು ಸಾಧ್ಯ ಎಂದು ಸಲಹೆ ನೀಡಿದರು.

ಓದಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ದ್ವೇಷದ ರಾಜಕಾರಣ: ಸಿದ್ದರಾಮಯ್ಯ ಕೆಂಡಾಮಂಡಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.