ETV Bharat / state

ಗಡಿ ವಿವಾದದ ಬಗ್ಗೆ ಸುಪ್ರೀಂ ತೀರ್ಪಿಗಾಗಿ ಕಾದು ನೋಡೋಣ: ಕುಂದಾನಗರಿಯಲ್ಲಿ ಶಿವಸೇನೆ ವಕ್ತಾರ ರಾವುತ್ - ಸುದ್ದಿಗೋಷ್ಠಿಯಲ್ಲಿ ಶಿವಸೇನೆ ವಕ್ತಾರ ಸಂಜಯ್​ ರಾವುತ್​

ಗಡಿ ವಿವಾದದ ಸಂಬಂಧ ಹೇಳಿಕೆ ನೀಡದಂತೆ ಸಿಎಂ ಉದ್ಧವ್ ಠಾಕ್ರೆ ನಿರ್ದೇಶನ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗಡಿ ವಿವಾದ ಸಂಬಂಧ ಪ್ರತಿಕ್ರಿಯಿಸದಂತೆ ಶಿವಸೇನೆ ಮುಖಂಡರಿಗೆ ಠಾಕ್ರೆ ಸೂಚಿಸಿದ್ದಾರೆ ಎಂದು ರಾವತ್ ತಿಳಿಸಿದರು.

shiva sene spokesperson sanjay raut
ಶಿವಸೇನೆ ವಕ್ತಾರ -ಸಂಜಯ್​ ರಾವತ್
author img

By

Published : Jan 19, 2020, 3:56 AM IST

ಬೆಳಗಾವಿ: ಮರಾಠಿ ಸಾಹಿತ್ಯ ಲೋಕಕ್ಕೆ ಕನ್ನಡಿಗರ ಕೊಡುಗೆ ಅನನ್ಯ. ಪಂಡಿತ್​ ಭೀಮಸೇನ್ ಜೋಶಿ ಕೇವಲ ಕರ್ನಾಟಕಕ್ಕೆ ಸೀಮಿತವಾಗಿರಲಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದರು.

ಶಿವಸೇನೆ ವಕ್ತಾರ -ಸಂಜಯ್​ ರಾವತ್ ಸುದ್ದಿಗೋಷ್ಠಿ

ಬೆಳಗಾವಿಯ ಗೋಗಟೆ ರಂಗಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನೆಲದ ಹಲವು ಸಾಹಿತಿಗಳು ಮರಾಠಿ ಸಾಹಿತ್ಯ ಅಪಾರ ಕೊಡುಗೆ ನೀಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ಕೌರವ, ಪಾಂಡವರ ಯುದ್ಧವಲ್ಲ. ಉಭಯ ರಾಜ್ಯಗಳ ಗಡಿ ವಿವಾದ ಸುಪ್ರೀಂಕೋರ್ಟ್​ನಲ್ಲಿದೆ. ಇದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಉತ್ತಮ ವಕೀಲರನ್ನು ನೇಮಿಸಿದೆ. ಸುಪ್ರೀಂಕೋರ್ಟ್​ನಿಂದ ಯಾವ ತೀರ್ಪು ಬರುತ್ತೆ ಎಂಬುವುದನ್ನು ಕಾದು ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.

ಶಿವಸೇನೆ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲು ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಅಪಾರ. ಖರ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆರವರ ಜೊತೆ ನಾನು ಮರಾಠಿಯಲ್ಲೇ ಮಾತನಾಡುತ್ತೇನೆ ಎಂದರು.

ಇದಕ್ಕೂ ಮೊದಲು ‌ನಗರದ ಖಾಸಗಿ ಹೋಟೆಲ್​​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಸಂಬಂಧ ಹೇಳಿಕೆ ನೀಡದಂತೆ ಸಿಎಂ ಉದ್ಧವ್ ಠಾಕ್ರೆ ನಿರ್ದೇಶನ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗಡಿ ವಿವಾದ ಸಂಬಂಧ ಪ್ರತಿಕ್ರಿಯಿಸದಂತೆ ಶಿವಸೇನೆ ಮುಖಂಡರಿಗೆ ಠಾಕ್ರೆ ಸೂಚಿಸಿದ್ದಾರೆ ಎಂದರು.

ಗಡಿವಿವಾದ ಸಮಸ್ಯೆ ಸುಪ್ರೀಂ ಕೋರ್ಟ್​ನಲ್ಲಿ ಇತ್ಯರ್ಥವಾಗಲಿದೆ. ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ವಾದ ಆಲಿಸಲಿದೆ. ಬಳಿಕ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರಬೇಕು. ದಶಕದ ಅಯೋಧ್ಯೆ-ರಾಮಮಂದಿರ ವಿವಾದ ಇತ್ಯರ್ಥವಾಗಿದೆ. ದೇಶದ ಸಂವಿಧಾನ, ನ್ಯಾಯಾಲಯ ಎಲ್ಲದಕ್ಕಿಂತ, ಎಲ್ಲರಿಗಿಂತ ದೊಡ್ಡದು. ಹೀಗಾಗಿ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ‌ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದರು.

ಬೆಳಗಾವಿ: ಮರಾಠಿ ಸಾಹಿತ್ಯ ಲೋಕಕ್ಕೆ ಕನ್ನಡಿಗರ ಕೊಡುಗೆ ಅನನ್ಯ. ಪಂಡಿತ್​ ಭೀಮಸೇನ್ ಜೋಶಿ ಕೇವಲ ಕರ್ನಾಟಕಕ್ಕೆ ಸೀಮಿತವಾಗಿರಲಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದರು.

ಶಿವಸೇನೆ ವಕ್ತಾರ -ಸಂಜಯ್​ ರಾವತ್ ಸುದ್ದಿಗೋಷ್ಠಿ

ಬೆಳಗಾವಿಯ ಗೋಗಟೆ ರಂಗಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನೆಲದ ಹಲವು ಸಾಹಿತಿಗಳು ಮರಾಠಿ ಸಾಹಿತ್ಯ ಅಪಾರ ಕೊಡುಗೆ ನೀಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ಕೌರವ, ಪಾಂಡವರ ಯುದ್ಧವಲ್ಲ. ಉಭಯ ರಾಜ್ಯಗಳ ಗಡಿ ವಿವಾದ ಸುಪ್ರೀಂಕೋರ್ಟ್​ನಲ್ಲಿದೆ. ಇದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಉತ್ತಮ ವಕೀಲರನ್ನು ನೇಮಿಸಿದೆ. ಸುಪ್ರೀಂಕೋರ್ಟ್​ನಿಂದ ಯಾವ ತೀರ್ಪು ಬರುತ್ತೆ ಎಂಬುವುದನ್ನು ಕಾದು ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.

ಶಿವಸೇನೆ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲು ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಅಪಾರ. ಖರ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆರವರ ಜೊತೆ ನಾನು ಮರಾಠಿಯಲ್ಲೇ ಮಾತನಾಡುತ್ತೇನೆ ಎಂದರು.

ಇದಕ್ಕೂ ಮೊದಲು ‌ನಗರದ ಖಾಸಗಿ ಹೋಟೆಲ್​​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಸಂಬಂಧ ಹೇಳಿಕೆ ನೀಡದಂತೆ ಸಿಎಂ ಉದ್ಧವ್ ಠಾಕ್ರೆ ನಿರ್ದೇಶನ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗಡಿ ವಿವಾದ ಸಂಬಂಧ ಪ್ರತಿಕ್ರಿಯಿಸದಂತೆ ಶಿವಸೇನೆ ಮುಖಂಡರಿಗೆ ಠಾಕ್ರೆ ಸೂಚಿಸಿದ್ದಾರೆ ಎಂದರು.

ಗಡಿವಿವಾದ ಸಮಸ್ಯೆ ಸುಪ್ರೀಂ ಕೋರ್ಟ್​ನಲ್ಲಿ ಇತ್ಯರ್ಥವಾಗಲಿದೆ. ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ವಾದ ಆಲಿಸಲಿದೆ. ಬಳಿಕ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರಬೇಕು. ದಶಕದ ಅಯೋಧ್ಯೆ-ರಾಮಮಂದಿರ ವಿವಾದ ಇತ್ಯರ್ಥವಾಗಿದೆ. ದೇಶದ ಸಂವಿಧಾನ, ನ್ಯಾಯಾಲಯ ಎಲ್ಲದಕ್ಕಿಂತ, ಎಲ್ಲರಿಗಿಂತ ದೊಡ್ಡದು. ಹೀಗಾಗಿ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ‌ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದರು.

Intro:Body:

ಬೆಳಗಾವಿ:

ಮರಾಠಿ ಸಾಹಿತ್ಯ ಲೋಕಕ್ಕೆ ಕನ್ನಡಿಗರ ಕೊಡುಗೆ ಅನನ್ಯ ಎಂದು ಶಿವಸೇನೆ ವಕ್ತಾರ ಸಂಜಯ್ ರಾವುತ್ ಪ್ರತಿಪಾದಿಸಿದರು.

ಬೆಳಗಾವಿಯ ಗೋಗಟೆ ರಂಗಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನೆಲದ ಹಲವು ಸಾಹಿತಿಗಳು ಮರಾಠಿ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆ ಮರಾಠಿ ಸಾಹಿತ್ಯಕ್ಕೆ ಅನನ್ಯವಾಗಿದೆ.‌ ಕರ್ನಾಟಕ ಮೂಲದ ಪಂಡಿತ್ ಭೀಮಸೇನ್ ಜೋಶಿ ಅವರ ಸಂಬಂಧ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಮಹಾರಾಷ್ಟ್ರಕ್ಕೂ ಅವರ ಸಂಬಂಧ ಇದೆ ಎಂದರು.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕೌರವ ಪಾಂಡವರ ಯುದ್ಧವಲ್ಲ. ಉಭಯ ರಾಜ್ಯಗಳ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿದೆ. ಗಡಿವಿವಾದ ನೋಡಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಉತ್ತಮ ವಕೀಲರನ್ನು ನೇಮಿಸಿದೆ. ಸುಪ್ರೀಂಕೋರ್ಟ್ ಏನು ತೀರ್ಪು ಬರುತ್ತೆ ಎಂಬುವುದನ್ನು ಕಾದು ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.

ಸಂವಾದದಲ್ಲಿ ಸಂಜಯ್ ರಾವತ್ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆರನ್ನು ಹಾಡಿ ಹೊಗಳಿದರು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ಬರಲು ಖರ್ಗೆ ಕೊಡುಗೆ ಅಪಾರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆರವರ ಜತೆ ನಾನು ಮರಾಠಿಯಲ್ಲೇ ಮಾತನಾಡುತ್ತೇನೆ ಎಂದರು.

ಇದಕ್ಕೂ ಮೊದಲು‌ನಗರದ ಖಾಸಗಿ ಹೋಟೆಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಸಂಬಂಧ ಹೇಳಿಕೆ ನೀಡದಂತೆ ಸಿಎಂ ಉದ್ಧವ್ ಠಾಕ್ರೆ ನಿರ್ದೇಶನ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗಡಿವಿವಾದ ಸಂಬಂಧ ಪ್ರತಿಕ್ರಿಯಿಸದಂತೆ ಶಿವಸೇನೆ ಮುಖಂಡರಿಗೆ ಠಾಕ್ರೆ ಸೂಚನೆ ಕೊಟ್ಟಿದ್ದಾರೆ ಎಂದರು. 

ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿದೆ. ಗಡಿವಿವಾದ ಸಮಸ್ಯೆ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥ ವಾಗಲಿದೆ. ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ವಾದ ಆಲಿಸಲಿ. ಬಳಿಕ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರಬೇಕು. ದಶಕದ ಅಯೋಧ್ಯೆ-ರಾಮಮಂದಿರ ವಿವಾದ ಇತ್ಯರ್ಥವಾಗಿದೆ. ದೇಶದ ಸಂವಿಧಾನ, ಸುಪ್ರೀಂ ಕೋರ್ಟ್  ಎಲ್ಲದಕ್ಕಿಂತ, ಎಲ್ಲರಿಗಿಂತ ದೊಡ್ಡದು. ಹೀಗಾಗಿ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ‌ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದರು.

--

KN_BGM_07_18_Sanjay_Ravut_Reaction_7201786

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.