ಚಿಕ್ಕೋಡಿ: ಕೊರೊನಾ ಮಹಾಮಾರಿ ಭೀತಿ ಹಿನ್ನೆಲೆಯಲ್ಲಿ ಚಿಕ್ಕೋಡಿ ಸಾರಿಗೆ ವಿಭಾಗಕ್ಕೆ ತೀವ್ರ ನಷ್ಟವಾಗಿದೆ ಎಂದು ಚಿಕ್ಕೋಡಿ ಸಾರಿಗೆ ಇಲಾಖೆ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ್ ವಿ.ಎಂ. ಹೇಳಿದರು.
ಚಿಕ್ಕೋಡಿ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಮಾರ್ಚ್ 14ರಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಸಂಪರ್ಕ ಕಡಿತಗೊಂಡಿತ್ತು. ಅಷ್ಟೇ ಅಲ್ಲದೆ, ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾದ ಪರಿಣಾಮ ಚಿಕ್ಕೋಡಿ ಸಾರಿಗೆ ಸಂಸ್ಥೆ ಪ್ರತಿದಿನ ಸುಮಾರು 3ರಿಂದ 4 ಲಕ್ಷ ರೂ. ನಷ್ಟ ಅನುಭವಿಸುತ್ತಿದೆ ಎಂದರು.