ETV Bharat / state

ಮೊಸಳೆ ಕಾಟ ತಂದಿಟ್ಟ ಪ್ರವಾಹ: ನದಿಗೆ ಕಾಲಿಡದಂತೆ ಗ್ರಾಮಸ್ಥರಿಗೆ ಎಚ್ಚರಿಕೆ - ಕುರಣಿ ಗ್ರಾಮದಲ್ಲಿ ಮೊಸಳೆಗಳ ಕಾಟ ಚಿಕ್ಕೋಡಿ ಸುದ್ದಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಹಿರಣ್ಯಕೇಶಿ ನದಿ ತೀರದ ಜನರಿಗೆ ಇದೀಗ ಮೊಸಳೆ ಕಾಟ ಎದುರಾಗಿದೆ. ನದಿ ತೀರದಲ್ಲಿ ಜಾನುವಾರು ಹಾಗೂ ಬಟ್ಟೆಗಳನ್ನು ತೊಳೆಯಂತೆ ಎಚ್ಚರಿಕೆಯ ನೋಟಿಸ್ ಹಾಕಲಾಗಿದೆ.

bnelagavi
ಕುರಣಿ ಗ್ರಾಮದಲ್ಲಿ ಮೊಸಳೆಗಳ ಕಾಟ
author img

By

Published : Jan 9, 2020, 6:46 AM IST

Updated : Jan 9, 2020, 6:56 AM IST

ಚಿಕ್ಕೋಡಿ : ಪ್ರವಾಹದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಹಿರಣ್ಯಕೇಶಿ ನದಿ ತೀರದ ಜನರಿಗೆ ಇದೀಗ ಮೊಸಳೆ ಕಾಟ ಶುರುವಾಗಿದೆ.

ಕಳೆದ ಹಲವು ದಿನಗಳಿಂದ ನದಿ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕುರಣಿ ಗ್ರಾಮದ ಜನರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಕೋಚರಿ ಬ್ಯಾರೇಜ್‍ನಿಂದ ಹೊಳೆಮ್ಮ ದೇವಿ ದೇವಸ್ಥಾನದವರೆಗಿನ ಬ್ಯಾರೇಜ್​ವರೆಗೆ ಮೊಸಳೆಗಳು ಇವೆ ಎನ್ನಲಾಗುತ್ತಿದೆ.

chikkodi
ತಿಳುವಳಿಕೆ ಪತ್ರ

ನದಿ ತೀರದಲ್ಲಿ ಜಾನುವಾರುಗಳ ಹಾಗೂ ಬಟ್ಟೆಗಳನ್ನು ತೊಳೆಯಬೇಡಿ ಎಂಬ ನೋಟಿಸ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಮೀನುಗಾರರಿಗೂ ನದಿಗೆ ಇಳಿಯದಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ನದಿಯಲ್ಲಿನ ವಿಷ ಜಂತುಗಳು ಜಮೀನು ಹಾಗೂ ಗ್ರಾಮಗಳಿಗೆ ನುಗ್ಗಿದ್ದವು. ಪ್ರವಾಹ ತಗ್ಗಿ ಹಲವು ದಿನಗಳ ನಂತರ ಇದೀಗ ಹಿರಣ್ಯಕೇಶಿ ನದಿಯ ದಡದಲ್ಲಿ ಮೊಸಳೆಗಳು ಕಾಣಿಸಿಕೊಂಡಿವೆ.

ಚಿಕ್ಕೋಡಿ : ಪ್ರವಾಹದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಹಿರಣ್ಯಕೇಶಿ ನದಿ ತೀರದ ಜನರಿಗೆ ಇದೀಗ ಮೊಸಳೆ ಕಾಟ ಶುರುವಾಗಿದೆ.

ಕಳೆದ ಹಲವು ದಿನಗಳಿಂದ ನದಿ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕುರಣಿ ಗ್ರಾಮದ ಜನರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಕೋಚರಿ ಬ್ಯಾರೇಜ್‍ನಿಂದ ಹೊಳೆಮ್ಮ ದೇವಿ ದೇವಸ್ಥಾನದವರೆಗಿನ ಬ್ಯಾರೇಜ್​ವರೆಗೆ ಮೊಸಳೆಗಳು ಇವೆ ಎನ್ನಲಾಗುತ್ತಿದೆ.

chikkodi
ತಿಳುವಳಿಕೆ ಪತ್ರ

ನದಿ ತೀರದಲ್ಲಿ ಜಾನುವಾರುಗಳ ಹಾಗೂ ಬಟ್ಟೆಗಳನ್ನು ತೊಳೆಯಬೇಡಿ ಎಂಬ ನೋಟಿಸ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಮೀನುಗಾರರಿಗೂ ನದಿಗೆ ಇಳಿಯದಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ನದಿಯಲ್ಲಿನ ವಿಷ ಜಂತುಗಳು ಜಮೀನು ಹಾಗೂ ಗ್ರಾಮಗಳಿಗೆ ನುಗ್ಗಿದ್ದವು. ಪ್ರವಾಹ ತಗ್ಗಿ ಹಲವು ದಿನಗಳ ನಂತರ ಇದೀಗ ಹಿರಣ್ಯಕೇಶಿ ನದಿಯ ದಡದಲ್ಲಿ ಮೊಸಳೆಗಳು ಕಾಣಿಸಿಕೊಂಡಿವೆ.

Intro:ಕುರಣಿ ಗ್ರಾಮದಲ್ಲಿ ಮೊಸಳೆಗಳ ಕಾಟBody:

ಚಿಕ್ಕೋಡಿ : 

ಪ್ರವಾಹದಿಂದ ತತ್ತರಿಸಿರುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಹಿರಣ್ಯಕೇಶಿ ನದಿ ತೀರದ ಜನರಿಗೆ ಇದೀಗ ಮೊಸಳೆ ಕಾಟ ಎದುರಾಗಿದೆ.

ಕಳೆದ ಹಲವು ದಿನಗಳಿಂದ ನದಿ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕುರಣಿ ಗ್ರಾಮದ ಜನರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಕೋಚರಿ ಬ್ಯಾರೇಜ್‍ನಿಂದ ಹೊಳೆಮ್ಮ ದೇವಿ ದೇವಸ್ಥಾನದ ವರೆಗಿನ ಬ್ಯಾರೇಜ್ ವರೆಗೆ ಮೊಸಳೆಗಳು ಇವೆ ಎನ್ನಲಾಗಿದೆ.

ಹೀಗಾಗಿ ನದಿ ತೀರದಲ್ಲಿ ಜಾನುವಾರುಗಳನ್ನು ತೊಳೆಯುವುದು ಹಾಗೂ ಬಟ್ಟೆಗಳನ್ನು ತೊಳೆಯಬೇಡಿ ಎಂದು ನೋಟಿಸ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಸಲಾಗಿದೆ. ಅಲ್ಲದೆ ವಿಶೇಷವಾಗಿ ಮೀನುಗಾರರು ನದಿಗೆ ಇಳೆಯದಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ನದಿಯಲ್ಲಿನ ವಿಷ ಜಂತುಗಳು ಜಮೀನು ಹಾಗೂ ಗ್ರಾಮಗಳಿಗೆ ನುಗ್ಗಿದ್ದವು. ಪ್ರವಾಹ ತಗ್ಗಿ ಹಲವು ದಿನಗಳ ನಂತರ ಇದೀಗ ಹಿರಣ್ಯಕೇಶಿ ನದಿಯ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
Last Updated : Jan 9, 2020, 6:56 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.