ETV Bharat / state

ಸಂಕಷ್ಟದ ಸಮಯದಲ್ಲೂ ಬಿಜೆಪಿ ಸರ್ಕಾರ ಶಿಕ್ಷಣಕ್ಕೆ ಒತ್ತು ಕೊಟ್ಟಿದೆ : ಸಚಿವ ಕಾರಜೋಳ

ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ಕಾರ್ಯಕ್ರಮಕ್ಕೆ ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಿದರು.

author img

By

Published : Jun 23, 2021, 2:33 PM IST

Tab Distribution
ಡಿಸಿಎಂ ಗೋವಿಂದ ಕಾರಜೋಳ ಟ್ಯಾಬ್ ವಿತರಿಸಿದರು

ಬೆಳಗಾವಿ : ನಗರದ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜಿನಲ್ಲಿ ಬಡ, ಪ್ರತಿಭಾವಂತ ಮಕ್ಕಳಿಗೆ ಡಿಸಿಎಂ ಗೋವಿಂದ ಕಾರಜೋಳ ಟ್ಯಾಬ್ ವಿತರಣೆ ಮಾಡಿದರು‌.

ಬಳಿಕ ಮಾತನಾಡಿದ ಅವರು, ಸಂಕಷ್ಟದ ಸಮಯದಲ್ಲೂ ಶೈಕ್ಷಣಿಕವಾಗಿ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಬಡ ಮಕ್ಕಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗಿದೆ. ಕಳೆದ ವರ್ಷ ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ನೀಡಲಾಗಿತ್ತು ಎಂದರು.

ಡಿಸಿಎಂ ಗೋವಿಂದ ಕಾರಜೋಳ ಟ್ಯಾಬ್ ವಿತರಿಸಿದರು

ಬೆಳಗಾವಿ ಜಿಲ್ಲೆಯ 22 ಸರ್ಕಾರಿ ಡಿಗ್ರಿ ಕಾಲೇಜುಗಳ 6,20 ಮಕ್ಕಳಿಗೆ ಈ ಬಾರಿ ಟ್ಯಾಬ್ ನೀಡುತ್ತಿದ್ದೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇಂದು ಸಾಂಕೇತಿಕವಾಗಿ 10 ಮಕ್ಕಳಿಗೆ ಟ್ಯಾಬ್ ವಿತರಿಸಿದ್ದೇವೆ. ಮಕ್ಕಳು ಶ್ರಮವಹಿಸಿ ಓದಬೇಕು. ಹೆಚ್ಚು ಅಂಕ ಗಳಿಸಿ ಜಿಲ್ಲೆಗೆ ಶ್ರೇಯಸ್ಸು ತಂದು ಕೊಡಬೇಕು ಎಂದು ಹೇಳಿದರು.

ಬೆಳಗಾವಿ : ನಗರದ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜಿನಲ್ಲಿ ಬಡ, ಪ್ರತಿಭಾವಂತ ಮಕ್ಕಳಿಗೆ ಡಿಸಿಎಂ ಗೋವಿಂದ ಕಾರಜೋಳ ಟ್ಯಾಬ್ ವಿತರಣೆ ಮಾಡಿದರು‌.

ಬಳಿಕ ಮಾತನಾಡಿದ ಅವರು, ಸಂಕಷ್ಟದ ಸಮಯದಲ್ಲೂ ಶೈಕ್ಷಣಿಕವಾಗಿ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಬಡ ಮಕ್ಕಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗಿದೆ. ಕಳೆದ ವರ್ಷ ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ನೀಡಲಾಗಿತ್ತು ಎಂದರು.

ಡಿಸಿಎಂ ಗೋವಿಂದ ಕಾರಜೋಳ ಟ್ಯಾಬ್ ವಿತರಿಸಿದರು

ಬೆಳಗಾವಿ ಜಿಲ್ಲೆಯ 22 ಸರ್ಕಾರಿ ಡಿಗ್ರಿ ಕಾಲೇಜುಗಳ 6,20 ಮಕ್ಕಳಿಗೆ ಈ ಬಾರಿ ಟ್ಯಾಬ್ ನೀಡುತ್ತಿದ್ದೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇಂದು ಸಾಂಕೇತಿಕವಾಗಿ 10 ಮಕ್ಕಳಿಗೆ ಟ್ಯಾಬ್ ವಿತರಿಸಿದ್ದೇವೆ. ಮಕ್ಕಳು ಶ್ರಮವಹಿಸಿ ಓದಬೇಕು. ಹೆಚ್ಚು ಅಂಕ ಗಳಿಸಿ ಜಿಲ್ಲೆಗೆ ಶ್ರೇಯಸ್ಸು ತಂದು ಕೊಡಬೇಕು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.