ಅಥಣಿ: ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ೧೦ ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಸವದಿ, ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಮ ಮಂದಿರ ನಿರ್ಮಾಣ ಆದೇಶವನ್ನು ದೇಶದ ಜನ ಸ್ವಾಗತಿಸಿದ್ದಾರೆ. ಇದರಿಂದಾಗಿ ದೇವಸ್ಥಾನ ನಿರ್ಮಾಣಕ್ಕೆ ಸರ್ಕಾರd ಹಣ ಬೇಡ, ಜನರ ಹಣದಿಂದ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಶ್ರೀರಾಮ ಮಂದಿರಕ್ಕೆ ಅಥಣಿ ಹಾಗೂ ದೇಶದಲ್ಲಿ ದೇಣಿಗೆ ಸಂಗ್ರಹ ನಡೆಸಲಾಗುತ್ತಿದೆ.
ಇದರಲ್ಲಿ ನನ್ನ ಅಳಿಲು ಸೇವೆಯಾಗಿ 10 ಲಕ್ಷ ರೂಪಾಯಿ ನೀಡಿರುವುದು ನನ್ನ ಸೌಭಾಗ್ಯ ಎಂದರು. ಈ ವೇಳೆ ಆರ್ಎಸ್ಎಸ್ನ ಅರವಿಂದ್ ದೇಶಪಾಂಡೆ, ಶಾಸಕ ಮಹೇಶ್ ಕುಮಟಳ್ಳಿ ಹಾಜರಿದ್ದರು.