ETV Bharat / state

ಚುಚ್ಚುಮದ್ದು ಪಡೆದು ಮೂರು ಕಂದಮ್ಮಗಳ ಸಾವು; ವೈದ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಸಚಿವ ಕಾರಜೋಳ ಸೂಚನೆ - Minister Govinda Karajola proposed the incident at the KDP meeting held in the suvrana sovdha belagavi

ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಲಿರುವುದರಿಂದ ಮುಂದಿನ ಒಂದು ವಾರದಲ್ಲಿ ಎಲ್ಲ ಅರ್ಹ ಶಾಲಾ ಮಕ್ಕಳಿಗೆ ಶೇ. ನೂರರಷ್ಟು ಕೋವಿಡ್ ಲಸಿಕೆಯನ್ನು ನೀಡಿ ಎಂದು ಸಚಿವ ಕಾರಜೋಳ ನಿರ್ದೇಶನ ನೀಡಿದ್ದಾರೆ.

Death of three children injected with notice of action against doctor
ಚ್ಚುಚ್ಚುಮದ್ದು ಪಡೆದು ಮೂವರು ಕಂದಮ್ಮಗಳು ಸಾವು; ವೈದ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ
author img

By

Published : Feb 25, 2022, 5:52 PM IST

ಬೆಳಗಾವಿ: ಚುಚ್ಚುಮದ್ದು ಪಡೆದು ರಾಮದುರ್ಗ ತಾಲೂಕಿನ ಮೂವರು ಕಂದಮ್ಮಗಳ ಸಾವು ಪ್ರಕರಣ ಸಂಬಂಧ ಮೂರು ದಿನದೊಳಗೆ ಸಮಗ್ರ ವರದಿ ನೀಡಬೇಕು ಹಾಗೂ ವೈದ್ಯಾಧಿಕಾರಿ ವಿರುದ್ಧ ಮೂರು ದಿನದೊಳಗೆ ಕ್ರಮ ಕೈಗೊಳ್ಳುವಂತೆ ಸಚಿವ ಗೋವಿಂದ ಕಾರಜೋಳ ಡಿಎಚ್ಒ ಡಾ. ಶಶಿಕಾಂತ ಮುನ್ಯಾಳ ಅವರಿಗೆ ನಿರ್ದೇಶನ ನೀಡಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಘಟನೆ ಪ್ರಸ್ತಾಪಿಸಿದ ಸಚಿವ ಗೋವಿಂದ ಕಾರಜೋಳ ಅವರು, ಇದಕ್ಕೆ ಕಾರಣರಾದ ವೈದ್ಯಾಧಿಕಾರಿ ಮೇಲೆ ಕೂಡ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಬಗ್ಗೆ ಮೂರು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡಬೇಕು ಎಂದು ಸಚಿವರು ಸೂಚನೆ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಡಿಎಚ್ಓ ಡಾ.ಮುನ್ಯಾಳ ವಿವರಿಸಿದರು. ಲಸಿಕೆಯ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಇನ್ನೂ ವರದಿ ಬಂದಿರುವುದಿಲ್ಲ ಎಂದರು. ಸಮರ್ಪಕವಾಗಿ ಮಾಹಿತಿ ನೀಡದ ಡಿಎಚ್ಓ ಬಗ್ಗೆ ಅಸಮಾಧಾನಗೊಂಡ ಸಚಿವ ಗೋವಿಂದ ಕಾರಜೋಳ ಅವರು, ಸಭೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತರಿಗೆ ಕರೆ ಮಾಡಿ ಬೆಳಗಾವಿಗೆ ಬೇರೆ ಅಧಿಕಾರಿ ನಿಯೋಜಿಸುವಂತೆ ನಿರ್ದೇಶನ ನೀಡಿದರು.

ನಿಯೋಜನೆ ರದ್ದುಗೊಳಿಸಲು ಸೂಚನೆ: ಆರೋಗ್ಯ ಇಲಾಖೆಯಲ್ಲಿ ಜನರ ಅನುಕೂಲತೆ ದೃಷ್ಟಿಯಿಂದ ಸಿಬ್ಬಂದಿ ನಿಯೋಜಿಸಲಾಗಿರುತ್ತದೆ. ಆರೋಗ್ಯ ಇಲಾಖೆಯಲ್ಲಿನ ಎಲ್ಲ ನಿಯೋಜನೆಗಳನ್ನು ಕೂಡಲೇ ರದ್ದುಪಡಿಸಿ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು. ಇಲಾಖೆಗಳ ಅಂಕಿ - ಅಂಶಗಳ ಬಗ್ಗೆ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶಾಲಾ ಮಕ್ಕಳಿಗೆ ಲಸಿಕೆ: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಲಿರುವುದರಿಂದ ಮುಂದಿನ ಒಂದು ವಾರದಲ್ಲಿ ಎಲ್ಲ ಅರ್ಹ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಿ ಶೇ. ನೂರರಷ್ಟು ಸಾಧನೆ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: ಎಸ್​ಡಿಪಿಐ -ಪಿಎಫ್ಐ ಸಂಘಟನೆ ನಿಷೇಧಿಸುವ ಕಾರ್ಯ ನಡೆಯುತ್ತಿದೆ : ಮಹೇಶ​ ತೆಂಗಿನಕಾಯಿ

ಬೆಳಗಾವಿ: ಚುಚ್ಚುಮದ್ದು ಪಡೆದು ರಾಮದುರ್ಗ ತಾಲೂಕಿನ ಮೂವರು ಕಂದಮ್ಮಗಳ ಸಾವು ಪ್ರಕರಣ ಸಂಬಂಧ ಮೂರು ದಿನದೊಳಗೆ ಸಮಗ್ರ ವರದಿ ನೀಡಬೇಕು ಹಾಗೂ ವೈದ್ಯಾಧಿಕಾರಿ ವಿರುದ್ಧ ಮೂರು ದಿನದೊಳಗೆ ಕ್ರಮ ಕೈಗೊಳ್ಳುವಂತೆ ಸಚಿವ ಗೋವಿಂದ ಕಾರಜೋಳ ಡಿಎಚ್ಒ ಡಾ. ಶಶಿಕಾಂತ ಮುನ್ಯಾಳ ಅವರಿಗೆ ನಿರ್ದೇಶನ ನೀಡಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಘಟನೆ ಪ್ರಸ್ತಾಪಿಸಿದ ಸಚಿವ ಗೋವಿಂದ ಕಾರಜೋಳ ಅವರು, ಇದಕ್ಕೆ ಕಾರಣರಾದ ವೈದ್ಯಾಧಿಕಾರಿ ಮೇಲೆ ಕೂಡ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಬಗ್ಗೆ ಮೂರು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡಬೇಕು ಎಂದು ಸಚಿವರು ಸೂಚನೆ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಡಿಎಚ್ಓ ಡಾ.ಮುನ್ಯಾಳ ವಿವರಿಸಿದರು. ಲಸಿಕೆಯ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಇನ್ನೂ ವರದಿ ಬಂದಿರುವುದಿಲ್ಲ ಎಂದರು. ಸಮರ್ಪಕವಾಗಿ ಮಾಹಿತಿ ನೀಡದ ಡಿಎಚ್ಓ ಬಗ್ಗೆ ಅಸಮಾಧಾನಗೊಂಡ ಸಚಿವ ಗೋವಿಂದ ಕಾರಜೋಳ ಅವರು, ಸಭೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತರಿಗೆ ಕರೆ ಮಾಡಿ ಬೆಳಗಾವಿಗೆ ಬೇರೆ ಅಧಿಕಾರಿ ನಿಯೋಜಿಸುವಂತೆ ನಿರ್ದೇಶನ ನೀಡಿದರು.

ನಿಯೋಜನೆ ರದ್ದುಗೊಳಿಸಲು ಸೂಚನೆ: ಆರೋಗ್ಯ ಇಲಾಖೆಯಲ್ಲಿ ಜನರ ಅನುಕೂಲತೆ ದೃಷ್ಟಿಯಿಂದ ಸಿಬ್ಬಂದಿ ನಿಯೋಜಿಸಲಾಗಿರುತ್ತದೆ. ಆರೋಗ್ಯ ಇಲಾಖೆಯಲ್ಲಿನ ಎಲ್ಲ ನಿಯೋಜನೆಗಳನ್ನು ಕೂಡಲೇ ರದ್ದುಪಡಿಸಿ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು. ಇಲಾಖೆಗಳ ಅಂಕಿ - ಅಂಶಗಳ ಬಗ್ಗೆ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶಾಲಾ ಮಕ್ಕಳಿಗೆ ಲಸಿಕೆ: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಲಿರುವುದರಿಂದ ಮುಂದಿನ ಒಂದು ವಾರದಲ್ಲಿ ಎಲ್ಲ ಅರ್ಹ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಿ ಶೇ. ನೂರರಷ್ಟು ಸಾಧನೆ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: ಎಸ್​ಡಿಪಿಐ -ಪಿಎಫ್ಐ ಸಂಘಟನೆ ನಿಷೇಧಿಸುವ ಕಾರ್ಯ ನಡೆಯುತ್ತಿದೆ : ಮಹೇಶ​ ತೆಂಗಿನಕಾಯಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.