ಬೆಳಗಾವಿ: ಅತೃಪ್ತ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಸಂದೇಶ ಹರಿಬಿಟ್ಟ ಆರೋಪದಡಿ ಸಿಆರ್ಪಿಎಫ್ ಯೋಧನ ವಿರುದ್ಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಗೋಕಾಕ್ ತಾಲೂಕಿನ ಖಾನಾಪುರ ಗ್ರಾಮದ ಸತ್ತಿಗೌಡ ಪಾಟೀಲ್ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಆರ್ಪಿಎಫ್ ಯೋಧ ಚರಣ ಮಂಗೋಳಿ ಕೆಟ್ಟದಾಗಿ ಸಂದೇಶ ರವಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪರ-ವಿರೋಧ ಚರ್ಚೆ ಆರಂಭವಾಗುತ್ತಿದ್ದಂತೆ, ಯೋಧ ಚರಣ ಮಂಗೋಳಿ ಸಂದೇಶವನ್ನು ಡಿಲಿಟ್ ಮಾಡಿದ್ದಾರೆ.