ETV Bharat / state

ಹಿಂದೆ ಸಿದ್ದರಾಮಯ್ಯ ಹೇಳಿದ್ದೆಲ್ಲ ಹುಸಿಯಾಗಿದೆ, ಕೋಲಾರದಿಂದ ಸ್ಫರ್ಧೆ ಅನುಮಾನ: ಲಕ್ಷ್ಮಣ್ ಸವದಿ

ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಅನುಮಾನ-ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ.

author img

By

Published : Jan 10, 2023, 6:25 PM IST

Updated : Jan 10, 2023, 10:33 PM IST

dcm laxman savadi
ಡಿಸಿಎಂ ಲಕ್ಷ್ಮಣ್ ಸವದಿ
ಡಿಸಿಎಂ ಲಕ್ಷ್ಮಣ್ ಸವದಿ

ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವೆ ಎಂದು ಹೇಳಿದ್ದಾರೆ. ಆದರೆ ಹಲವು ಬಾರಿ ಅವರು ಹೇಳಿದ ಮಾತುಗಳು ಹುಸಿಯಾಗಿವೆ. ನಾಮಪತ್ರ ಸಲ್ಲಿಸಿದ ಮೇಲೆಯೇ ಅವರ ಸ್ಪರ್ಧೆ ಖಚಿತವಾಗುತ್ತದೆ ಎಂದು ಮಾಜಿ ಡಿಸಿಎಂ ಹಾಗೂ ಭಾಜಪ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ಹೇಳಿದರು. ಅವರು ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಹಲವು ಬಾರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗಳು ಹುಸಿಯಾಗಿವೆ. ತಾನು ಕೋಲಾರದಿಂದ ಸ್ಪರ್ಧೆ ಮಾಡುವೆ ಎಂದು ಸಿದ್ಧರಾಮಯ್ಯ ಹೇಳಿದ್ದು, ಎಷ್ಟರ ಮಟ್ಟಿಗೆ ನಿಜವಾಗಿ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದ್ದಾರೆ. ಇನ್ನು, ಮೂರು ತಿಂಗಳ ನಂತರ ಯಾವ ನಿರ್ಣಯ ತೆಗೆದುಕೊಳ್ಳುವರು ಎಂಬುದನ್ನೂ ಕಾಯಬೇಕಷ್ಟೇ. ಹಿಂದೆ ಅವರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಕೊನೆ ಚುನಾವಣೆ ಎಂದು ತಿಳಿಸಿದ್ದರು. ಮತ್ತೆ ನಾನು ಈಗ ಸ್ಪರ್ಧೆ ಮಾಡುವೆ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಸ್ಪರ್ಧೆ ಮಾಡುವರು ಎಂಬುದರ ಬಗ್ಗೆ ನನಗೆ ಇನ್ನೂ ಅನುಮಾನವಿದೆ.ಕೋಲಾರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕವೇ ಅವರು ಸ್ಪರ್ಧಿಸುವುದನ್ನೂ ಖಚಿತವಾಗಿ ಹೇಳಲು ಸಾಧ್ಯ ಎಂದು ವಿಧಾನ ಪರಿಷತ್​ ಸದಸ್ಯ ಸವದಿ ಹೇಳಿದರು.

ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ.. ಸಚಿವ ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟಿದ್ದು, ಜತೆಗೆ ಭಾರತೀಯ ಜನತಾ ಪಕ್ಷವು ರಾಷ್ಟ್ರೀಯ ಪಕ್ಷ. ದೆಹಲಿಯಲ್ಲಿರುವ ಪಕ್ಷದ ವರಿಷ್ಠರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಲಕ್ಷ್ಮಣ್​ ಸವದಿ ಹೇಳಿದರು.

ಕೋಲಾರದಿಂದ ಸ್ಥರ್ಧೆ ಮಾಡುವೆ-ಸಿದ್ದರಾಮಯ್ಯ.. ಸೋಮವಾರ ಕೋಲಾರದಲ್ಲಿ ಕಾಂಗ್ರೆಸ್​ ಪಕ್ಷ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ಹೆಚ್​. ಮುನಿಯಪ್ಪ ಸೇರಿದಂತೆ ಎಲ್ಲರೂ ಕೋಲಾರದಿಂದ ಸ್ಥರ್ಧೆ ಮಾಡಬೇಕೆಂದು ಪದೇ ಪದೆ ಮನವಿ ಮಾಡುತ್ತಿದ್ದಾರೆ. ಹೀಗಾಗಿ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಛಿಸಿರುವೆ ಎಂದು ಅವರು ಕ್ಷೇತ್ರದ ಜನರಿಗೆ ತಿಳಿಸಿದ್ದರು.

ನನಗೆ ಕ್ಷೇತ್ರದ ಜನರು ಮುಖ್ಯ. ಆಮೇಲೆ ನಾಯಕರುಗಳಿಗೆ ಜನರ ಆಶೀರ್ವಾದ ಇದ್ದರೆ, ಮಾತ್ರ ರಾಜಕೀಯದಲ್ಲಿ ಉಳಿಯುವುದಕ್ಕೆ ಸಾಧ್ಯವಾಗುತ್ತದೆ‌. ಇಲ್ಲವಾದಲ್ಲಿ ಆಗೋಲ್ಲ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದಿದ್ದೆ. ಎಲ್ಲ ಕಡೆ ಕೋಲಾರ ಕ್ಷೇತ್ರದಿಂದ ನಿಲ್ಲಬೇಕೆಂದು ಪ್ರತಿಯೊಬ್ಬರು ಒತ್ತಾಯಿಸಿದ್ದರು. ಹೀಗಾಗಿ ಹೈಕಮಾಂಡ್ ಹೇಳಿದ ಹಾಗೆ ನಡೆದುಕೊಳ್ಳಲಾಗುತ್ತದೆ. ತಪ್ಪು ಸಂದೇಶ ಹೋಗಬಾರದು. ನಾನು ಇಲ್ಲಿ ಸ್ಪರ್ಧೆ ಮಾಡಲು ತಯಾರಿದ್ದೇನೆ. ಆದರೆ, ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಬಹಿರಂಗ ಪಡಿಸಿದ್ದರು.

ನಾನು ಚಾಮುಂಡಿ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿರುವೆ. ಎರಡು ಬಾರಿ ವರುಣಾ, ಒಂದು ಬಾರಿ ಬಾದಾಮಿ ಕ್ಷೇತ್ರದಿಂದ ಗೆದ್ದಿರುವೆ. ಆಗದವರು ನನ್ನ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಇಲ್ಲ, ಕ್ಷೇತ್ರ ಹುಡುಕಾಟದಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ. ನನಗೆ ಹಳೇ ಕ್ಷೇತ್ರ ವರುಣಾದಿಂದಲೂ ನಿಲ್ಲಬೇಕೆಂದು ಒತ್ತಾಯ ಮಾಡುತ್ತಿದ್ದಾರೆ‌. ಬಾದಾಮಿ ದೂರ ಆಗಿದೆ. ಬರಲು ಕಷ್ಟ ಎಂದಾಗ, ಬಾದಾಮಿ ಕ್ಷೇತ್ರದ ಜನರು ಹೆಲಿಕಾಪ್ಟರ್ ತೆಗೆದುಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಸಮಾರಂಭದಲ್ಲಿ ಹೇಳಿದ್ದರು.

ಕೋಲಾರ ಜನರಿಗೆ ಈಗ ಮಾತು ಕೊಡುತ್ತೇನೆ. ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು. ಲೀಡರ್​ಗಳ ಮೂಲಕ ಬರಬೇಕೆಂದು ಏನಿಲ್ಲ. ಇದು ನನ್ನ ಸಂಪ್ರದಾಯ. ಸಾಮಾನ್ಯರಲ್ಲಿ ಸಾಮಾನ್ಯರು ಸಹ ನನ್ನ ಬಳಿ ನೇರವಾಗಿ ಬಂದು ಕಷ್ಟ ಸುಖ ಹೇಳಿಕೊಳ್ಳಬಹುದು. ನಿಮ್ಮೆಲ್ಲರ ಆಶೀರ್ವಾದಿಂದ ಶಾಸಕನಾದ ಮೇಲೆ ಕೋಲಾರಕ್ಕೆ ವಿಶೇಷ ಆದ್ಯತೆ ನೀಡುತ್ತೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದರು.

ಇದನ್ನೂಓದಿ:ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ಆಡಳಿತ ವಿರುದ್ಧ ದನಿ ಎತ್ತಲು ನಾಳೆಯಿಂದ ಪ್ರಜಾಧ್ವನಿ ಬಸ್ ಯಾತ್ರೆ: ಡಿಕೆ ಶಿವಕುಮಾರ್

ಡಿಸಿಎಂ ಲಕ್ಷ್ಮಣ್ ಸವದಿ

ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವೆ ಎಂದು ಹೇಳಿದ್ದಾರೆ. ಆದರೆ ಹಲವು ಬಾರಿ ಅವರು ಹೇಳಿದ ಮಾತುಗಳು ಹುಸಿಯಾಗಿವೆ. ನಾಮಪತ್ರ ಸಲ್ಲಿಸಿದ ಮೇಲೆಯೇ ಅವರ ಸ್ಪರ್ಧೆ ಖಚಿತವಾಗುತ್ತದೆ ಎಂದು ಮಾಜಿ ಡಿಸಿಎಂ ಹಾಗೂ ಭಾಜಪ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ್ ಸವದಿ ಹೇಳಿದರು. ಅವರು ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಹಲವು ಬಾರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗಳು ಹುಸಿಯಾಗಿವೆ. ತಾನು ಕೋಲಾರದಿಂದ ಸ್ಪರ್ಧೆ ಮಾಡುವೆ ಎಂದು ಸಿದ್ಧರಾಮಯ್ಯ ಹೇಳಿದ್ದು, ಎಷ್ಟರ ಮಟ್ಟಿಗೆ ನಿಜವಾಗಿ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದ್ದಾರೆ. ಇನ್ನು, ಮೂರು ತಿಂಗಳ ನಂತರ ಯಾವ ನಿರ್ಣಯ ತೆಗೆದುಕೊಳ್ಳುವರು ಎಂಬುದನ್ನೂ ಕಾಯಬೇಕಷ್ಟೇ. ಹಿಂದೆ ಅವರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಕೊನೆ ಚುನಾವಣೆ ಎಂದು ತಿಳಿಸಿದ್ದರು. ಮತ್ತೆ ನಾನು ಈಗ ಸ್ಪರ್ಧೆ ಮಾಡುವೆ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಸ್ಪರ್ಧೆ ಮಾಡುವರು ಎಂಬುದರ ಬಗ್ಗೆ ನನಗೆ ಇನ್ನೂ ಅನುಮಾನವಿದೆ.ಕೋಲಾರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕವೇ ಅವರು ಸ್ಪರ್ಧಿಸುವುದನ್ನೂ ಖಚಿತವಾಗಿ ಹೇಳಲು ಸಾಧ್ಯ ಎಂದು ವಿಧಾನ ಪರಿಷತ್​ ಸದಸ್ಯ ಸವದಿ ಹೇಳಿದರು.

ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ.. ಸಚಿವ ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟಿದ್ದು, ಜತೆಗೆ ಭಾರತೀಯ ಜನತಾ ಪಕ್ಷವು ರಾಷ್ಟ್ರೀಯ ಪಕ್ಷ. ದೆಹಲಿಯಲ್ಲಿರುವ ಪಕ್ಷದ ವರಿಷ್ಠರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಲಕ್ಷ್ಮಣ್​ ಸವದಿ ಹೇಳಿದರು.

ಕೋಲಾರದಿಂದ ಸ್ಥರ್ಧೆ ಮಾಡುವೆ-ಸಿದ್ದರಾಮಯ್ಯ.. ಸೋಮವಾರ ಕೋಲಾರದಲ್ಲಿ ಕಾಂಗ್ರೆಸ್​ ಪಕ್ಷ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ಹೆಚ್​. ಮುನಿಯಪ್ಪ ಸೇರಿದಂತೆ ಎಲ್ಲರೂ ಕೋಲಾರದಿಂದ ಸ್ಥರ್ಧೆ ಮಾಡಬೇಕೆಂದು ಪದೇ ಪದೆ ಮನವಿ ಮಾಡುತ್ತಿದ್ದಾರೆ. ಹೀಗಾಗಿ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಛಿಸಿರುವೆ ಎಂದು ಅವರು ಕ್ಷೇತ್ರದ ಜನರಿಗೆ ತಿಳಿಸಿದ್ದರು.

ನನಗೆ ಕ್ಷೇತ್ರದ ಜನರು ಮುಖ್ಯ. ಆಮೇಲೆ ನಾಯಕರುಗಳಿಗೆ ಜನರ ಆಶೀರ್ವಾದ ಇದ್ದರೆ, ಮಾತ್ರ ರಾಜಕೀಯದಲ್ಲಿ ಉಳಿಯುವುದಕ್ಕೆ ಸಾಧ್ಯವಾಗುತ್ತದೆ‌. ಇಲ್ಲವಾದಲ್ಲಿ ಆಗೋಲ್ಲ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದಿದ್ದೆ. ಎಲ್ಲ ಕಡೆ ಕೋಲಾರ ಕ್ಷೇತ್ರದಿಂದ ನಿಲ್ಲಬೇಕೆಂದು ಪ್ರತಿಯೊಬ್ಬರು ಒತ್ತಾಯಿಸಿದ್ದರು. ಹೀಗಾಗಿ ಹೈಕಮಾಂಡ್ ಹೇಳಿದ ಹಾಗೆ ನಡೆದುಕೊಳ್ಳಲಾಗುತ್ತದೆ. ತಪ್ಪು ಸಂದೇಶ ಹೋಗಬಾರದು. ನಾನು ಇಲ್ಲಿ ಸ್ಪರ್ಧೆ ಮಾಡಲು ತಯಾರಿದ್ದೇನೆ. ಆದರೆ, ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಬಹಿರಂಗ ಪಡಿಸಿದ್ದರು.

ನಾನು ಚಾಮುಂಡಿ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿರುವೆ. ಎರಡು ಬಾರಿ ವರುಣಾ, ಒಂದು ಬಾರಿ ಬಾದಾಮಿ ಕ್ಷೇತ್ರದಿಂದ ಗೆದ್ದಿರುವೆ. ಆಗದವರು ನನ್ನ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಇಲ್ಲ, ಕ್ಷೇತ್ರ ಹುಡುಕಾಟದಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ. ನನಗೆ ಹಳೇ ಕ್ಷೇತ್ರ ವರುಣಾದಿಂದಲೂ ನಿಲ್ಲಬೇಕೆಂದು ಒತ್ತಾಯ ಮಾಡುತ್ತಿದ್ದಾರೆ‌. ಬಾದಾಮಿ ದೂರ ಆಗಿದೆ. ಬರಲು ಕಷ್ಟ ಎಂದಾಗ, ಬಾದಾಮಿ ಕ್ಷೇತ್ರದ ಜನರು ಹೆಲಿಕಾಪ್ಟರ್ ತೆಗೆದುಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಸಮಾರಂಭದಲ್ಲಿ ಹೇಳಿದ್ದರು.

ಕೋಲಾರ ಜನರಿಗೆ ಈಗ ಮಾತು ಕೊಡುತ್ತೇನೆ. ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು. ಲೀಡರ್​ಗಳ ಮೂಲಕ ಬರಬೇಕೆಂದು ಏನಿಲ್ಲ. ಇದು ನನ್ನ ಸಂಪ್ರದಾಯ. ಸಾಮಾನ್ಯರಲ್ಲಿ ಸಾಮಾನ್ಯರು ಸಹ ನನ್ನ ಬಳಿ ನೇರವಾಗಿ ಬಂದು ಕಷ್ಟ ಸುಖ ಹೇಳಿಕೊಳ್ಳಬಹುದು. ನಿಮ್ಮೆಲ್ಲರ ಆಶೀರ್ವಾದಿಂದ ಶಾಸಕನಾದ ಮೇಲೆ ಕೋಲಾರಕ್ಕೆ ವಿಶೇಷ ಆದ್ಯತೆ ನೀಡುತ್ತೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದರು.

ಇದನ್ನೂಓದಿ:ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ಆಡಳಿತ ವಿರುದ್ಧ ದನಿ ಎತ್ತಲು ನಾಳೆಯಿಂದ ಪ್ರಜಾಧ್ವನಿ ಬಸ್ ಯಾತ್ರೆ: ಡಿಕೆ ಶಿವಕುಮಾರ್

Last Updated : Jan 10, 2023, 10:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.