ETV Bharat / state

ಪತ್ರಕರ್ತರಿಗೆ 'ಫ್ಯಾಕ್ಟ್ ಚೆಕ್' ತರಬೇತಿ ಶಿಬಿರ: ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶಿಸುವಂತೆ ಸಲಹೆ

author img

By

Published : Dec 14, 2020, 5:33 PM IST

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಗಳಿಂದ ಕೆಲವೊಮ್ಮೆ ಜನರಲ್ಲಿ ಆತಂಕ ಉಂಟಾಗುತ್ತಿದೆ. ಆದ್ದರಿಂದ ಇಂತಹ ಸುದ್ದಿಗಳು ಬಂದಾಗ ಮಾಧ್ಯಮಗಳು ಸತ್ಯಾಸತ್ಯತೆ ಪರಿಶೀಲಿಸುವ ಮೂಲಕ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

Fact Check Training Camp
ಪತ್ರಕರ್ತರಿಗೆ "ಫ್ಯಾಕ್ಟ್ ಚೆಕ್" ತರಬೇತಿ ಶಿಬಿರ..

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ಸುದ್ದಿ ಇರಲಿ, ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ ಬಳಿಕವೇ ಮಾಧ್ಯಮಗಳು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಲಹೆ ನೀಡಿದರು.

ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಪ್ರಕಟಿಸುವಂತೆ ಜಿಲ್ಲಾಧಿಕಾರಿ ಹಿರೇಮಠ ಸಲಹೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮದವರಿಗಾಗಿ ಏರ್ಪಡಿಸಲಾಗಿದ್ದ "ಫ್ಯಾಕ್ಟ್ ಚೆಕ್" ಕುರಿತ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಗಳಿಂದ ಕೆಲವೊಮ್ಮೆ ಜನರಲ್ಲಿ ಆತಂಕ ಉಂಟಾಗುತ್ತಿದೆ. ಆದ್ದರಿಂದ ಇಂತಹ ಸುದ್ದಿಗಳು ಬಂದಾಗ ಮಾಧ್ಯಮಗಳು ಸತ್ಯಾಸತ್ಯತೆ ಪರಿಶೀಲಿಸುವ ಮೂಲಕ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವ ಕೆಲಸ ಮಾಡಬೇಕಿದೆ ಎಂದರು.

ಸುಳ್ಳು ಸುದ್ದಿ ಪ್ರಕಟಣೆ- ಶಿಕ್ಷೆ ಅಗತ್ಯ:

ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಸುಳ್ಳು ಸುದ್ದಿ ಹರಡುವಂತವರನ್ನು ಗುರುತಿಸಿ ಶಿಕ್ಷಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವದಂತಿಗಳಿಂದ ಗೊಂದಲ ಉಂಟಾದ ಕೆಲವು ಉದಾಹರಣೆಗಳನ್ನು ಅವರು ನೀಡಿದರು.

ಇದೇ ವೇಳೆ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಸುದ್ದಿಗಳ ಸತ್ಯಾಸತ್ಯತೆ ಪತ್ತೆ ಹಚ್ಚುವ ವಿಧಾನಗಳನ್ನು ಪತ್ರಕರ್ತರಿಗೆ ತಿಳಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಘಟನೆಗಳ ಫ್ಯಾಕ್ಟ್ ಚೆಕ್ ತರಬೇತಿ:

ಫ್ಯಾಕ್ಟ್ ಚೆಕ್​ ಕುರಿತು ಗೂಗಲ್ ಸಂಸ್ಥೆಯಿಂದ ವಿಶೇಷ ತರಬೇತಿ ಪಡೆದಿರುವ ಸಂಪನ್ಮೂಲ ವ್ಯಕ್ತಿ ಹಾಗೂ ಪತ್ರಕರ್ತ ಪ್ರಮೋದ್ ಹರಿಕಾಂತ ಅವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವಿವಿಧ ಬಗೆಯ ಸುದ್ದಿಗಳ ಸತ್ಯಾಸತ್ಯತೆ ಪತ್ತೆ ಹಚ್ಚುವ ಕುರಿತು ತರಬೇತಿ ನೀಡಿದರು. ಎಲ್ಲೋ, ಯಾವಾಗಲೋ ನಡೆದ ಹಳೆಯ ಘಟನೆಗಳ ಛಾಯಾಚಿತ್ರ, ವಿಡಿಯೋ ಅಥವಾ ಧ್ವನಿ ತುಣುಕುಗಳನ್ನು ಇನ್ಯಾವುದೋ ಘಟನೆಗೆ ತಳಕುಹಾಕಿ ಸುಳ್ಳು ಸುದ್ದಿ ಸೃಷ್ಟಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ ಕೆಲ ಘಟನೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅವರು ವಿವರಿಸಿದರು.

ಶಿಬಿರದಲ್ಲಿ ಫೋಟೋ ವೆರಿಫಿಕೇಷನ್, ವಿಡಿಯೋ ವೆರಿಫಿಕೇಷನ್, ವೆಬ್ಸೈಟ್ ವೆರಿಫಿಕೇಷನ್, ಜಿಯೋ ಲೋಕೇಷನ್ ಪತ್ತೆ ಮತ್ತು ಸಾಮಾಜಿಕ ಜಾಲತಾಣಗಳ ಸತ್ಯಾಸತ್ಯತೆ ಪರಿಶೀಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಮೋದ ಹರಿಕಾಂತ ತಿಳಿಸಿಕೊಟ್ಟರು. ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ 30 ಕ್ಕೂ ಅಧಿಕ ವರದಿಗಾರರು, ಉಪ ಸಂಪಾದಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ಸುದ್ದಿ ಇರಲಿ, ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ ಬಳಿಕವೇ ಮಾಧ್ಯಮಗಳು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಲಹೆ ನೀಡಿದರು.

ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಪ್ರಕಟಿಸುವಂತೆ ಜಿಲ್ಲಾಧಿಕಾರಿ ಹಿರೇಮಠ ಸಲಹೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮದವರಿಗಾಗಿ ಏರ್ಪಡಿಸಲಾಗಿದ್ದ "ಫ್ಯಾಕ್ಟ್ ಚೆಕ್" ಕುರಿತ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಗಳಿಂದ ಕೆಲವೊಮ್ಮೆ ಜನರಲ್ಲಿ ಆತಂಕ ಉಂಟಾಗುತ್ತಿದೆ. ಆದ್ದರಿಂದ ಇಂತಹ ಸುದ್ದಿಗಳು ಬಂದಾಗ ಮಾಧ್ಯಮಗಳು ಸತ್ಯಾಸತ್ಯತೆ ಪರಿಶೀಲಿಸುವ ಮೂಲಕ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವ ಕೆಲಸ ಮಾಡಬೇಕಿದೆ ಎಂದರು.

ಸುಳ್ಳು ಸುದ್ದಿ ಪ್ರಕಟಣೆ- ಶಿಕ್ಷೆ ಅಗತ್ಯ:

ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಸುಳ್ಳು ಸುದ್ದಿ ಹರಡುವಂತವರನ್ನು ಗುರುತಿಸಿ ಶಿಕ್ಷಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವದಂತಿಗಳಿಂದ ಗೊಂದಲ ಉಂಟಾದ ಕೆಲವು ಉದಾಹರಣೆಗಳನ್ನು ಅವರು ನೀಡಿದರು.

ಇದೇ ವೇಳೆ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಸುದ್ದಿಗಳ ಸತ್ಯಾಸತ್ಯತೆ ಪತ್ತೆ ಹಚ್ಚುವ ವಿಧಾನಗಳನ್ನು ಪತ್ರಕರ್ತರಿಗೆ ತಿಳಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಘಟನೆಗಳ ಫ್ಯಾಕ್ಟ್ ಚೆಕ್ ತರಬೇತಿ:

ಫ್ಯಾಕ್ಟ್ ಚೆಕ್​ ಕುರಿತು ಗೂಗಲ್ ಸಂಸ್ಥೆಯಿಂದ ವಿಶೇಷ ತರಬೇತಿ ಪಡೆದಿರುವ ಸಂಪನ್ಮೂಲ ವ್ಯಕ್ತಿ ಹಾಗೂ ಪತ್ರಕರ್ತ ಪ್ರಮೋದ್ ಹರಿಕಾಂತ ಅವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವಿವಿಧ ಬಗೆಯ ಸುದ್ದಿಗಳ ಸತ್ಯಾಸತ್ಯತೆ ಪತ್ತೆ ಹಚ್ಚುವ ಕುರಿತು ತರಬೇತಿ ನೀಡಿದರು. ಎಲ್ಲೋ, ಯಾವಾಗಲೋ ನಡೆದ ಹಳೆಯ ಘಟನೆಗಳ ಛಾಯಾಚಿತ್ರ, ವಿಡಿಯೋ ಅಥವಾ ಧ್ವನಿ ತುಣುಕುಗಳನ್ನು ಇನ್ಯಾವುದೋ ಘಟನೆಗೆ ತಳಕುಹಾಕಿ ಸುಳ್ಳು ಸುದ್ದಿ ಸೃಷ್ಟಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ ಕೆಲ ಘಟನೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅವರು ವಿವರಿಸಿದರು.

ಶಿಬಿರದಲ್ಲಿ ಫೋಟೋ ವೆರಿಫಿಕೇಷನ್, ವಿಡಿಯೋ ವೆರಿಫಿಕೇಷನ್, ವೆಬ್ಸೈಟ್ ವೆರಿಫಿಕೇಷನ್, ಜಿಯೋ ಲೋಕೇಷನ್ ಪತ್ತೆ ಮತ್ತು ಸಾಮಾಜಿಕ ಜಾಲತಾಣಗಳ ಸತ್ಯಾಸತ್ಯತೆ ಪರಿಶೀಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಮೋದ ಹರಿಕಾಂತ ತಿಳಿಸಿಕೊಟ್ಟರು. ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ 30 ಕ್ಕೂ ಅಧಿಕ ವರದಿಗಾರರು, ಉಪ ಸಂಪಾದಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.