ETV Bharat / state

ಅಥಣಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

author img

By

Published : Apr 20, 2021, 10:44 AM IST

ಅಥಣಿಯ ಸತ್ತಿ ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Framer Committed Suicide in Atani
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಅಥಣಿ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ರವೀಂದ್ರ ದಾನಸೂರ (44) ಎಂಬವರು ಮನೆ ಪಕ್ಕದ ಶೆಡ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತ ರೈತ ಸಿಂಡಿಕೇಟ್ ಬ್ಯಾಂಕ್​ನಲ್ಲಿ 5 ಲಕ್ಷ, ಪಿಕೆಪಿಎಸ್ ಬ್ಯಾಂಕ್​ನಲ್ಲಿ 1 ಲಕ್ಷ ಹಾಗೂ ಇತರ ಸ್ವಸಹಾಯ ಸಂಘಗಳ ಮುಖಾಂತರ 3 ಲಕ್ಷ ಸೇರಿ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ನಿಂತಿದ್ದ ಟ್ಯಾಂಕರ್​​ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ಸವಾರ

ಕೃಷಿ ಜಮೀನು ಸವಳು ಜವಳು ಹೊಂದಿದ್ದರಿಂದ ಸರಿಯಾಗಿ ಬೆಳೆ ಬಾರದೆ ರೈತ ರವೀಂದ್ರ ಅವರು ಸಾಲದ ಶೂಲಕ್ಕೆ ಸಿಲುಕಿದ್ದರು. ಹಾಗಾಗಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಅಥಣಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಥಣಿ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ರವೀಂದ್ರ ದಾನಸೂರ (44) ಎಂಬವರು ಮನೆ ಪಕ್ಕದ ಶೆಡ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತ ರೈತ ಸಿಂಡಿಕೇಟ್ ಬ್ಯಾಂಕ್​ನಲ್ಲಿ 5 ಲಕ್ಷ, ಪಿಕೆಪಿಎಸ್ ಬ್ಯಾಂಕ್​ನಲ್ಲಿ 1 ಲಕ್ಷ ಹಾಗೂ ಇತರ ಸ್ವಸಹಾಯ ಸಂಘಗಳ ಮುಖಾಂತರ 3 ಲಕ್ಷ ಸೇರಿ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ನಿಂತಿದ್ದ ಟ್ಯಾಂಕರ್​​ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ಸವಾರ

ಕೃಷಿ ಜಮೀನು ಸವಳು ಜವಳು ಹೊಂದಿದ್ದರಿಂದ ಸರಿಯಾಗಿ ಬೆಳೆ ಬಾರದೆ ರೈತ ರವೀಂದ್ರ ಅವರು ಸಾಲದ ಶೂಲಕ್ಕೆ ಸಿಲುಕಿದ್ದರು. ಹಾಗಾಗಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಅಥಣಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.