ಬೆಳಗಾವಿ: ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ನೋಟಿಸ್ ನೀಡಿದ ಹಿನ್ನೆಲೆ ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ.
ಯಲ್ಪಪ್ಪ ನಾಯ್ಕರ್ (56) ಆತ್ಮಹತ್ಯೆಗೆ ಶರಣಾದ ರೈತ. ನಿನ್ನೆ ಸಂಜೆ ತಮ್ಮ ಮನೆಯಲ್ಲೇ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತ ಯಲ್ಲಪ್ಪ ಟ್ರ್ಯಾಕ್ಟರ್ ಖರೀದಿಗೆ ಅಲಹಾಬಾದ್ ಬ್ಯಾಂಕ್ನಲ್ಲಿ ಸಾಲ ಪಡೆದಿದ್ದರು. ಸಾಲ ಮರುಪಾವತಿಸುವಂತೆ ಕಳೆದ ತಿಂಗಳ ಹಿಂದಷ್ಟೇ ಅಲಹಾಬಾದ್ ಬ್ಯಾಂಕ್ ರೈತನಿಗೆ ನೋಟಿಸ್ ನೀಡಿತ್ತು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಿಲ್ಲೆಯ ಯರಗಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.