ಬೆಳಗಾವಿ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ರೈತರ ಅಹೋರಾತ್ರಿ ಧರಣಿಯಲ್ಲಿ ಇಬ್ಬರು ರೈತ ಮಹಿಳೆಯರು ಅಸ್ವಸ್ಥರಾಗಿದ್ದಾರೆ.
ರೈತ ಮಹಿಳೆಯರಾದ ಸುರೇಖಾ ಕಾಬೋಜಿ, ಪಾರ್ವತಿ ಕಡಚಗಟ್ಟಿ ಮೂರ್ಛೆ ಹೋಗಿದ್ದು, ರಾತ್ರಿಯೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ, ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.