ETV Bharat / state

ಉಕ್ಕಿ ಹರಿಯುತ್ತಿರುವ ಮಲಪ್ರಭಾ: ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

author img

By

Published : Aug 18, 2020, 10:51 AM IST

dfsda
ಉಕ್ಕಿ ಹರಿಯುತ್ತಿರುವ ಮಲಪ್ರಭಾ

ಸವದತ್ತಿ: (ಬೆಳಗಾವಿ) ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿ ಪಾತ್ರದಲ್ಲಿರುವ ಮುನವಳ್ಳಿ ಪಟ್ಟಣದ ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ 30ಕ್ಕೂ ಹೆಚ್ಚು ಅಂಗಡಿ- ಮುಂಗಟ್ಟುಗಳು ಜಲಾವೃತವಾಗಿವೆ.

ಉಕ್ಕಿ ಹರಿಯುತ್ತಿರುವ ಮಲಪ್ರಭಾ

ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಲಪ್ರಭಾ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಡ್ಯಾಮ್​ನಿಂದ (ನವಿಲು ತೀರ್ಥ) ಈಗಾಗಲೇ 26 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ, ಮುನವಳ್ಳಿ ದಂಡೆಯಲ್ಲಿ ಬಣಕಾರ ಓಣಿ ಸೇರಿದಂತೆ ಇತರೆಡೆ ಮನೆಗಳು,ಅಂಗಡಿಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಇನ್ನು ಖಾನಾಪುರ ತಾಲೂಕಿನಲ್ಲಿ ಮಳೆಯ ಪ್ರಮಾಣದಲ್ಲಿ ಸ್ವಲ್ಪಮಟ್ಟಿಗೆ ಕಡಿಮೆ ಆಗಿದ್ದರೂ ಜಲಾಶಯಕ್ಕೆ ಒಳಹರಿವು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸ್ಥಳೀಯ ಶಾಸಕ ಆನಂದ ಮಾಮನಿ ನಿವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸವದತ್ತಿ: (ಬೆಳಗಾವಿ) ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿ ಪಾತ್ರದಲ್ಲಿರುವ ಮುನವಳ್ಳಿ ಪಟ್ಟಣದ ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ 30ಕ್ಕೂ ಹೆಚ್ಚು ಅಂಗಡಿ- ಮುಂಗಟ್ಟುಗಳು ಜಲಾವೃತವಾಗಿವೆ.

ಉಕ್ಕಿ ಹರಿಯುತ್ತಿರುವ ಮಲಪ್ರಭಾ

ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಲಪ್ರಭಾ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಡ್ಯಾಮ್​ನಿಂದ (ನವಿಲು ತೀರ್ಥ) ಈಗಾಗಲೇ 26 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ, ಮುನವಳ್ಳಿ ದಂಡೆಯಲ್ಲಿ ಬಣಕಾರ ಓಣಿ ಸೇರಿದಂತೆ ಇತರೆಡೆ ಮನೆಗಳು,ಅಂಗಡಿಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಇನ್ನು ಖಾನಾಪುರ ತಾಲೂಕಿನಲ್ಲಿ ಮಳೆಯ ಪ್ರಮಾಣದಲ್ಲಿ ಸ್ವಲ್ಪಮಟ್ಟಿಗೆ ಕಡಿಮೆ ಆಗಿದ್ದರೂ ಜಲಾಶಯಕ್ಕೆ ಒಳಹರಿವು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸ್ಥಳೀಯ ಶಾಸಕ ಆನಂದ ಮಾಮನಿ ನಿವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.