ETV Bharat / state

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು: ಹುಲಿ ಉಗುರಿನ ಮಾದರಿ ಪೆಂಡೆಂಟ್ ವಶಕ್ಕೆ

author img

By ETV Bharat Karnataka Team

Published : Oct 27, 2023, 1:04 PM IST

Updated : Oct 27, 2023, 2:26 PM IST

ಲಕ್ಷ್ಮೀ ಹೆಬ್ಬಾಳ್ಕರ್​ ಅವರ ನಿವಾಸ ಮತ್ತು ಹುಬ್ಬಳ್ಳಿಯಲ್ಲಿ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠರ ನಿವಾಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಅರಣ್ಯ ಇಲಾಖೆ ದಾಳಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಅರಣ್ಯ ಇಲಾಖೆ ದಾಳಿ

ಬೆಳಗಾವಿ/ಹುಬ್ಬಳ್ಳಿ: ಹುಲಿ ಉಗುರಿನ ಮಾದರಿ ಪೆಂಡೆಂಟ್ ಧರಿಸಿದ್ದ ತಮ್ಮ ಪುತ್ರನ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕುವೆಂಪು ನಗರದಲ್ಲಿ ಇರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಡಿಎಫ್ಓ ಶಂಕರ ಕಲ್ಲೋಳಿಕರ್ ಎಸಿಎಫ್ ಸುರೇಶ ತೇಲಿ ನೇತೃತ್ವದ ತಂಡ ತೆರಳಿ ಪರಿಶೀಲನೆ ನಡೆಸಿತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್, ಮೃಣಾಲ್ ಹೆಬ್ಬಾಳ್ಕರ್ ಅವರಿಂದ ಲಾಕೆಟ್ ಕುರಿತು ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.

ಮದುವೆ ಸಂದರ್ಭದಲ್ಲಿ ಸಂಬಂಧಿಕರು ಗಿಫ್ಟ್ ಕೊಟ್ಟಿದ್ದರು. ಇದು ಪ್ಲ್ಯಾಸ್ಟಿಕ್ ಹುಲಿ ಉಗುರಿನ ಪೆಂಡೆಂಟ್ ಆಗಿದೆ. ಅರಣ್ಯಾಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಡೆಯಿಂದ ಮಾಹಿತಿ ಸಂಗ್ರಹ ಮಾಡಿದ ಅಧಿಕಾರಿಗಳು, ಹುಲಿ ಉಗುರಿನ ಮಾದರಿ ಪೆಂಡೆಂಟ್ ಅ​ನ್ನು ಎಫ್​​ಎಸ್​ಎಲ್​ಗೆ ಪರೀಕ್ಷೆಗೆ ಕಳುಹಿಸಲು ಮುಂದಾಗಿದ್ದಾರೆ. ಮುಂದಿನ ತನಿಖೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಮದುವೆ ಸೇರಿ ಮತ್ತಿತರ ಸಮಾರಂಭಗಳಲ್ಲಿ ಮೃಣಾಲ್ ಹುಲಿಯ ಉಗುರಿನ ಮಾದರಿ ಪೆಂಡೆಂಟ್​ ಧರಿಸಿದ್ದ ಫೋಟೋ ವೈರಲ್​ ಆಗಿತ್ತು.

ನಾನು ಶುದ್ಧ ಸಸ್ಯಾಹಾರಿ ಆಗಿದ್ದೇನೆ. ಹಾಗಾಗಿ, ನಮ್ಮ ಮನೆಯಲ್ಲಿ ವನ್ಯಜೀವಿ ಉತ್ಪನ್ನಗಳು ಬರಲು ಸಾಧ್ಯವಿಲ್ಲ. ಹುಲಿ, ನವಿಲು ದೂರ ಉಳಿಯಿತು. ಕುರಿ, ಕೋಳಿ, ಆಕಳು ಕೊಲ್ಲುವುದನ್ನೇ ನಾನು ವಿರೋಧಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ್ದ​ ಫೋಟೋ ವೈರಲ್​: ಅರಣ್ಯಾಧಿಕಾರಿ ಪ್ರತಿಕ್ರಿಯೆ ಹೀಗಿದೆ..

ಸಚಿವೆ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ಮನೆಯಲ್ಲಿ ಪರಿಶೀಲನೆ: ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ನಗರದಲ್ಲಿನ ಬಟರ್ ಮಾರ್ಕೆಟ್​​ನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಮನೆಗೆ ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸಿದರು. ಈ ವೇಳೆ ಹುಲಿ ಉಗುರಿನ ಮಾದರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದರು.

ಹುಲಿ ಉಗುರು ಮಾದರಿಯ ಪೆಂಡೆಂಟ್ ಮಾದರಿ ಚೈನ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ನಗರದಲ್ಲಿನ ಬಟರ್ ಮಾರ್ಕೆಟ್​​ನಲ್ಲಿರುವ ರಜತ್ ಉಳ್ಳಾಗಡ್ಡಿಮಠ ಅವರ ಮನೆಗೆ ಅಧಿಕಾರಿಗಳು ಆಗಮಿಸಿದ್ದರು.

ಬೆಳಗಾವಿ/ಹುಬ್ಬಳ್ಳಿ: ಹುಲಿ ಉಗುರಿನ ಮಾದರಿ ಪೆಂಡೆಂಟ್ ಧರಿಸಿದ್ದ ತಮ್ಮ ಪುತ್ರನ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕುವೆಂಪು ನಗರದಲ್ಲಿ ಇರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಡಿಎಫ್ಓ ಶಂಕರ ಕಲ್ಲೋಳಿಕರ್ ಎಸಿಎಫ್ ಸುರೇಶ ತೇಲಿ ನೇತೃತ್ವದ ತಂಡ ತೆರಳಿ ಪರಿಶೀಲನೆ ನಡೆಸಿತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್, ಮೃಣಾಲ್ ಹೆಬ್ಬಾಳ್ಕರ್ ಅವರಿಂದ ಲಾಕೆಟ್ ಕುರಿತು ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.

ಮದುವೆ ಸಂದರ್ಭದಲ್ಲಿ ಸಂಬಂಧಿಕರು ಗಿಫ್ಟ್ ಕೊಟ್ಟಿದ್ದರು. ಇದು ಪ್ಲ್ಯಾಸ್ಟಿಕ್ ಹುಲಿ ಉಗುರಿನ ಪೆಂಡೆಂಟ್ ಆಗಿದೆ. ಅರಣ್ಯಾಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಡೆಯಿಂದ ಮಾಹಿತಿ ಸಂಗ್ರಹ ಮಾಡಿದ ಅಧಿಕಾರಿಗಳು, ಹುಲಿ ಉಗುರಿನ ಮಾದರಿ ಪೆಂಡೆಂಟ್ ಅ​ನ್ನು ಎಫ್​​ಎಸ್​ಎಲ್​ಗೆ ಪರೀಕ್ಷೆಗೆ ಕಳುಹಿಸಲು ಮುಂದಾಗಿದ್ದಾರೆ. ಮುಂದಿನ ತನಿಖೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಮದುವೆ ಸೇರಿ ಮತ್ತಿತರ ಸಮಾರಂಭಗಳಲ್ಲಿ ಮೃಣಾಲ್ ಹುಲಿಯ ಉಗುರಿನ ಮಾದರಿ ಪೆಂಡೆಂಟ್​ ಧರಿಸಿದ್ದ ಫೋಟೋ ವೈರಲ್​ ಆಗಿತ್ತು.

ನಾನು ಶುದ್ಧ ಸಸ್ಯಾಹಾರಿ ಆಗಿದ್ದೇನೆ. ಹಾಗಾಗಿ, ನಮ್ಮ ಮನೆಯಲ್ಲಿ ವನ್ಯಜೀವಿ ಉತ್ಪನ್ನಗಳು ಬರಲು ಸಾಧ್ಯವಿಲ್ಲ. ಹುಲಿ, ನವಿಲು ದೂರ ಉಳಿಯಿತು. ಕುರಿ, ಕೋಳಿ, ಆಕಳು ಕೊಲ್ಲುವುದನ್ನೇ ನಾನು ವಿರೋಧಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ್ದ​ ಫೋಟೋ ವೈರಲ್​: ಅರಣ್ಯಾಧಿಕಾರಿ ಪ್ರತಿಕ್ರಿಯೆ ಹೀಗಿದೆ..

ಸಚಿವೆ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ಮನೆಯಲ್ಲಿ ಪರಿಶೀಲನೆ: ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ನಗರದಲ್ಲಿನ ಬಟರ್ ಮಾರ್ಕೆಟ್​​ನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಮನೆಗೆ ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸಿದರು. ಈ ವೇಳೆ ಹುಲಿ ಉಗುರಿನ ಮಾದರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದರು.

ಹುಲಿ ಉಗುರು ಮಾದರಿಯ ಪೆಂಡೆಂಟ್ ಮಾದರಿ ಚೈನ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ನಗರದಲ್ಲಿನ ಬಟರ್ ಮಾರ್ಕೆಟ್​​ನಲ್ಲಿರುವ ರಜತ್ ಉಳ್ಳಾಗಡ್ಡಿಮಠ ಅವರ ಮನೆಗೆ ಅಧಿಕಾರಿಗಳು ಆಗಮಿಸಿದ್ದರು.

Last Updated : Oct 27, 2023, 2:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.