ETV Bharat / state

ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯ ಬಿಜೆಪಿ ಕೊಡುಗೆ: ಮಹೇಶ್ ಕುಮಠಳ್ಳಿ

author img

By

Published : Aug 10, 2023, 10:00 PM IST

Updated : Aug 11, 2023, 9:08 AM IST

ನಾಳೆ ಅಥಣಿಯಲ್ಲಿ‌ ಸಿಎಂ ಸಿದ್ದರಾಮಯ್ಯ ಉದ್ಘಾಟಿಸುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಬಿಜೆಪಿ ಕೊಡುಗೆ ಎಂದು ಮಾಜಿ ಶಾಸಕ‌ ಮಹೇಶ್ ಕುಮಠಳ್ಳಿ ಹೇಳಿದ್ದಾರೆ.

ಮಾಜಿ ಶಾಸಕ‌ ಮಹೇಶ್ ಕುಮಠಳ್ಳಿ
ಮಾಜಿ ಶಾಸಕ‌ ಮಹೇಶ್ ಕುಮಠಳ್ಳಿ
ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯ ಬಿಜೆಪಿ ಕೊಡುಗೆ

ಬೆಳಗಾವಿ : ಅಧಿಕಾರಲ್ಲಿದ್ದವರು ಆಯಾ ಕಾಮಗಾರಿಗಳನ್ನು ಉದ್ಘಾಟಿಸುವುದು ವಾಡಿಕೆ. ಆದರೆ ನಾಳೆ ಅಥಣಿಯಲ್ಲಿ ಉದ್ಘಾಟನೆ ಆಗುತ್ತಿರುವ ಕಾಮಗಾರಿಗಳು ಬಿಜೆಪಿ ಸರ್ಕಾರದ ಕೊಡುಗೆ ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.

ಅಥಣಿ ತಾಲ್ಲೂಕಿನ ಕೊಕಟನೂರಿನ ಪಶುವೈದ್ಯಕೀಯ ಮಹಾವಿದ್ಯಾಲಯ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಅಡಿಗಲ್ಲು ಸಮಾರಂಭಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಹೇಶ ಕುಮಠಳ್ಳಿ ಮಾತನಾಡಿದರು.

ಪಶು ವೈದ್ಯಕೀಯ ಕಾಲೇಜಿನ ಸಂಪೂರ್ಣ ಶ್ರೇಯಸ್ಸು ಬಿಜೆಪಿಗೆ ಸೇರುತ್ತದೆ. ಅದರಲ್ಲಿ ನಮ್ಮದೊಂದು ಅಳಿಲು ಸೇವೆಯಿದೆ. 2009ರ ಸುಮಾರಿಗೆ ನಾನೂ ಕೂಡ ಈ ಭಾಗದಲ್ಲಿ ಇಂಜಿನಿಯರಿಂಗ್ ಕಾಲೇಜು ಬೇಡ, ಪಶು ವೈದ್ಯಕೀಯ ಕಾಲೇಜು ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದ್ದೆ. ಬಾವುರಾವ ದೇಶಪಾಂಡೆಯವ ಸವಿ‌ನೆನಪಿಗೋಸ್ಕರ ಪಶು ವೈದ್ಯಕೀಯ ಕಾಲೇಜು ಆರಂಭಿಸಲಾಗಿದೆ. ಕಾಲೇಜಿಗೆ ಅವರ ಹೆಸರನ್ನೇ ಇಡಬೇಕು‌. ಯಾವುದೇ ಸಂದರ್ಭದಲ್ಲೂ ಆ ಹೆಸರನ್ನು ಬದಲಾವಣೆ ಮಾಡಬಾರದು ಎಂದು ನಾವು ಪ್ರಸ್ತಾವಣೆ ಸಲ್ಲಿಸಿದ್ದೇವೆ. 2019-23ರ ಅವಧಿಯಲ್ಲಿ ಕಟ್ಟಡದ ಕೆಲಸ ಸಂಪೂರ್ಣವಾಗಿದೆ. ಇದಕ್ಕೆ ಬಿಜೆಪಿ ಕೊಡುಗೆ ಅಪಾರ. ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅನಾವರಗೊಳಿಸುತ್ತಿದ್ದಾರೆ. ಈ ಕಾಮಗಾರಿಗೆ ನನ್ನ ಅಧಿಕಾರಾವಧಿಯಲ್ಲಿ 19 ಲಕ್ಷ ರೂ. ಅನುದಾನ ಒದಗಿಸಿದ್ದೇನೆ. ಬಸವೇಶ್ವರ ವೃತ್ತ ಅಭಿವೃದ್ದಿಗೆ 5 ಲಕ್ಷ ರೂ. ನೀಡಿದ್ದೇನೆ ಎಂದರು.

ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ : ಬಿಜೆಪಿಯಿಂದ ಅವರಿಗೇನು ಅನ್ಯಾಯವಾಗಿದೆ ಎಂಬುದನ್ನು ಅವರೇ ಹೇಳಬೇಕು. ಕಾಂಗ್ರೆಸ್​ನಿಂದ ನಮಗೆ ಅನ್ಯಾಯವಾಗಿದೆ ಎಂದು ನಾವು ಬಿಜೆಪಿಗೆ ಬಂದಿರಲಿಲ್ಲ. ರಾಜಕೀಯ ವಿದ್ಯಮಾನದಿಂದ ಬಂದೆವು. ಕಾಂಗ್ರೆಸ್​ನಲ್ಲಿದ್ದಾಗ ಆ ಪಕ್ಷಕ್ಕೆ ಪ್ರಾಮಾಣಿಕವಾಗಿದ್ದೆ, ಈಗ ಬಿಜೆಪಿಯಲ್ಲೂ ಅಷ್ಟೇ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಪಕ್ಷಕ್ಕೆ ಅವರು ಕೊಡುಗೆ ನೀಡುವ ಜೊತೆಗೆ ಪಕ್ಷದಿಂದ ಸವದಿ ಬೆಳೆದಿದ್ದಾರೆ. ಅಂಥವರು ನನ್ನ ಹೆಣ ಕೂಡಾ ಬಿಜೆಪಿ ಪಕ್ಷದ ಕಚೇರಿ ಮುಂದೆ ಹೋಗಬಾರದು ಎಂದು ಯಾವ ದೃಷ್ಟಿಕೋನ ಇಟ್ಟುಕೊಂಡು ಹೇಳಿದ್ದಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಮಹೇಶ್​ ಕುಮ್ಮಠಳ್ಳಿ ಹೇಳಿದರು.

ರಮೇಶ್​ ಜಾರಕಿಹೊಳಿ ವ್ಯಕ್ತಿ ಅಲ್ಲ, ಶಕ್ತಿ : ರಮೇಶ ಜಾರಕಿಹೊಳಿ ನಾಯಕತ್ವ ಒಪ್ಪಿಕೊಳ್ಳುತ್ತಿರಾ ಎಂಬ ಪ್ರಶ್ನೆಗೆ, ರಮೇಶ ಜಾರಕಿಹೊಳಿ ಅವರಲ್ಲಿ ನಾಯಕತ್ವದ ಗುಣವಿದೆ. ಅವರು ಕೇವಲ ಒಬ್ಬ ವ್ಯಕ್ತಿಯಲ್ಲ ಒಂದು ಶಕ್ತಿ ಎಂದರು. ಅಭಿವೃದ್ಧಿ ಕೆಲಸ ಮಾಡಿದರೆ ಚುನಾವಣೆ ಗೆಲ್ಲುತ್ತೇವೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ನಾನು ಶಾಸನಾಗಿದ್ದಾಗ ಜನರಿಗೆ ಸಾಕಷ್ಟು ಸ್ಪಂದಿಸಿದ್ದೆ, ಆದರೂ ಸೋಲಾಯಿತು ಎಂದರು.

ಇದನ್ನೂ ಓದಿ : ಲೋಕಸಭೆ ಅಧಿವೇಶನದ ನಂತರ ರಾಜ್ಯಾಧ್ಯಕ್ಷ ಪ್ರತಿಪಕ್ಷ ನಾಯಕರ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ

ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯ ಬಿಜೆಪಿ ಕೊಡುಗೆ

ಬೆಳಗಾವಿ : ಅಧಿಕಾರಲ್ಲಿದ್ದವರು ಆಯಾ ಕಾಮಗಾರಿಗಳನ್ನು ಉದ್ಘಾಟಿಸುವುದು ವಾಡಿಕೆ. ಆದರೆ ನಾಳೆ ಅಥಣಿಯಲ್ಲಿ ಉದ್ಘಾಟನೆ ಆಗುತ್ತಿರುವ ಕಾಮಗಾರಿಗಳು ಬಿಜೆಪಿ ಸರ್ಕಾರದ ಕೊಡುಗೆ ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.

ಅಥಣಿ ತಾಲ್ಲೂಕಿನ ಕೊಕಟನೂರಿನ ಪಶುವೈದ್ಯಕೀಯ ಮಹಾವಿದ್ಯಾಲಯ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಅಡಿಗಲ್ಲು ಸಮಾರಂಭಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಹೇಶ ಕುಮಠಳ್ಳಿ ಮಾತನಾಡಿದರು.

ಪಶು ವೈದ್ಯಕೀಯ ಕಾಲೇಜಿನ ಸಂಪೂರ್ಣ ಶ್ರೇಯಸ್ಸು ಬಿಜೆಪಿಗೆ ಸೇರುತ್ತದೆ. ಅದರಲ್ಲಿ ನಮ್ಮದೊಂದು ಅಳಿಲು ಸೇವೆಯಿದೆ. 2009ರ ಸುಮಾರಿಗೆ ನಾನೂ ಕೂಡ ಈ ಭಾಗದಲ್ಲಿ ಇಂಜಿನಿಯರಿಂಗ್ ಕಾಲೇಜು ಬೇಡ, ಪಶು ವೈದ್ಯಕೀಯ ಕಾಲೇಜು ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದ್ದೆ. ಬಾವುರಾವ ದೇಶಪಾಂಡೆಯವ ಸವಿ‌ನೆನಪಿಗೋಸ್ಕರ ಪಶು ವೈದ್ಯಕೀಯ ಕಾಲೇಜು ಆರಂಭಿಸಲಾಗಿದೆ. ಕಾಲೇಜಿಗೆ ಅವರ ಹೆಸರನ್ನೇ ಇಡಬೇಕು‌. ಯಾವುದೇ ಸಂದರ್ಭದಲ್ಲೂ ಆ ಹೆಸರನ್ನು ಬದಲಾವಣೆ ಮಾಡಬಾರದು ಎಂದು ನಾವು ಪ್ರಸ್ತಾವಣೆ ಸಲ್ಲಿಸಿದ್ದೇವೆ. 2019-23ರ ಅವಧಿಯಲ್ಲಿ ಕಟ್ಟಡದ ಕೆಲಸ ಸಂಪೂರ್ಣವಾಗಿದೆ. ಇದಕ್ಕೆ ಬಿಜೆಪಿ ಕೊಡುಗೆ ಅಪಾರ. ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅನಾವರಗೊಳಿಸುತ್ತಿದ್ದಾರೆ. ಈ ಕಾಮಗಾರಿಗೆ ನನ್ನ ಅಧಿಕಾರಾವಧಿಯಲ್ಲಿ 19 ಲಕ್ಷ ರೂ. ಅನುದಾನ ಒದಗಿಸಿದ್ದೇನೆ. ಬಸವೇಶ್ವರ ವೃತ್ತ ಅಭಿವೃದ್ದಿಗೆ 5 ಲಕ್ಷ ರೂ. ನೀಡಿದ್ದೇನೆ ಎಂದರು.

ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ : ಬಿಜೆಪಿಯಿಂದ ಅವರಿಗೇನು ಅನ್ಯಾಯವಾಗಿದೆ ಎಂಬುದನ್ನು ಅವರೇ ಹೇಳಬೇಕು. ಕಾಂಗ್ರೆಸ್​ನಿಂದ ನಮಗೆ ಅನ್ಯಾಯವಾಗಿದೆ ಎಂದು ನಾವು ಬಿಜೆಪಿಗೆ ಬಂದಿರಲಿಲ್ಲ. ರಾಜಕೀಯ ವಿದ್ಯಮಾನದಿಂದ ಬಂದೆವು. ಕಾಂಗ್ರೆಸ್​ನಲ್ಲಿದ್ದಾಗ ಆ ಪಕ್ಷಕ್ಕೆ ಪ್ರಾಮಾಣಿಕವಾಗಿದ್ದೆ, ಈಗ ಬಿಜೆಪಿಯಲ್ಲೂ ಅಷ್ಟೇ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಪಕ್ಷಕ್ಕೆ ಅವರು ಕೊಡುಗೆ ನೀಡುವ ಜೊತೆಗೆ ಪಕ್ಷದಿಂದ ಸವದಿ ಬೆಳೆದಿದ್ದಾರೆ. ಅಂಥವರು ನನ್ನ ಹೆಣ ಕೂಡಾ ಬಿಜೆಪಿ ಪಕ್ಷದ ಕಚೇರಿ ಮುಂದೆ ಹೋಗಬಾರದು ಎಂದು ಯಾವ ದೃಷ್ಟಿಕೋನ ಇಟ್ಟುಕೊಂಡು ಹೇಳಿದ್ದಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಮಹೇಶ್​ ಕುಮ್ಮಠಳ್ಳಿ ಹೇಳಿದರು.

ರಮೇಶ್​ ಜಾರಕಿಹೊಳಿ ವ್ಯಕ್ತಿ ಅಲ್ಲ, ಶಕ್ತಿ : ರಮೇಶ ಜಾರಕಿಹೊಳಿ ನಾಯಕತ್ವ ಒಪ್ಪಿಕೊಳ್ಳುತ್ತಿರಾ ಎಂಬ ಪ್ರಶ್ನೆಗೆ, ರಮೇಶ ಜಾರಕಿಹೊಳಿ ಅವರಲ್ಲಿ ನಾಯಕತ್ವದ ಗುಣವಿದೆ. ಅವರು ಕೇವಲ ಒಬ್ಬ ವ್ಯಕ್ತಿಯಲ್ಲ ಒಂದು ಶಕ್ತಿ ಎಂದರು. ಅಭಿವೃದ್ಧಿ ಕೆಲಸ ಮಾಡಿದರೆ ಚುನಾವಣೆ ಗೆಲ್ಲುತ್ತೇವೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ನಾನು ಶಾಸನಾಗಿದ್ದಾಗ ಜನರಿಗೆ ಸಾಕಷ್ಟು ಸ್ಪಂದಿಸಿದ್ದೆ, ಆದರೂ ಸೋಲಾಯಿತು ಎಂದರು.

ಇದನ್ನೂ ಓದಿ : ಲೋಕಸಭೆ ಅಧಿವೇಶನದ ನಂತರ ರಾಜ್ಯಾಧ್ಯಕ್ಷ ಪ್ರತಿಪಕ್ಷ ನಾಯಕರ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ

Last Updated : Aug 11, 2023, 9:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.