ETV Bharat / state

ರಾಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ‌. ದೇಣಿಗೆ ನೀಡಿದ ಮಾಜಿ ಸಂಸದ ಅಮರಸಿಂಹ ಪಾಟೀಲ - ಮಾಜಿ ಸಂಸದ ಅಮರಸಿಂಹ ಪಾಟೀಲ ಲೇಟೆಸ್ಟ್​ ನ್ಯೂಸ್

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ಅದರಂತೆ ಜನರು ತಮ್ಮ ಕೈಲಾದ ಹಣವನ್ನು ನೀಡುತ್ತಿದ್ದು, ಇಂದು ಮಾಜಿ ಸಂಸದ ಅಮರಸಿಂಹ ಪಾಟೀಲ ಕುಟುಂಬ ಮಂದಿರ ನಿರ್ಮಾಣಕ್ಕಾಗಿ 10 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದೆ.

ರಾಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ‌. ದೇಣಿಗೆ ನೀಡಿದ ಮಾಜಿ ಸಂಸದ ಅಮರಸಿಂಹ ಪಾಟೀಲ
Former MP Amarasimha Patil donated 10 lakh to Ram Mandir construction
author img

By

Published : Feb 28, 2021, 5:14 PM IST

ಚಿಕ್ಕೋಡಿ: ಮಾಜಿ ಸಂಸದ ಅಮರಸಿಂಹ ಪಾಟೀಲರ ಕುಟುಂಬ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 10 ಲಕ್ಷ ರೂ. ದೇಣಿಗೆ ನೀಡಿದೆ. ಆರ್​ಎಸ್​​​ಎಸ್ ಪ್ರಮುಖರಿಗೆ ದೇಣಿಗೆ ಹಣವನ್ನು ನೀಡಲಾಯಿತು.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಆಯೋಜಿಸಿದ್ದ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದರ ಕುಟುಂಬ ದೇಣಿಗೆ ಹಣ ನೀಡಿತು.

ಬಳಿಕ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರತಿಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೆ ದೇಣಿಗೆ ಸಂಗ್ರಹವಾಗುತ್ತಿದೆ. ನಾನೂ ಕೂಡಾ 10 ಲಕ್ಷ ರೂ. ದೇಣಿಗೆ ನೀಡಿದ್ದೇನೆ ಎಂದರು.

ಓದಿ: ಕಾಂಗ್ರೆಸ್​ನಲ್ಲಿ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ನಂತರ ವಿಶ್ವ ಹಿಂದೂ ಪರಿಷತ್​​ನ ಕ್ಷೇತ್ರೀಯ ಸಂಘಟನಾ ಮಹಾಮಂತ್ರಿ ಕೇಶವ ಹೆಗಡೆ ಮಾತನಾಡಿ,‌ ಅಯೋಧ್ಯೆಯಲ್ಲಿ ಭವ್ಯವಾದ ಮಂದಿರ ನಿರ್ಮಾಣವಾಗಲಿದ್ದು, ರಾಮ ಕಥಾ ಪಾರ್ಕ್​​​, ರಾಮಾಯಣ ಕಥೆಯ ಪ್ರದರ್ಶನಕ್ಕಾಗಿ ಚಿತ್ರಮಂದಿರಗಳು ನಿರ್ಮಾಣವಾಗಲಿದೆ. 2023 ರಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಆಗುವುದು ನಿಶ್ಚಿತ ಎಂದರು.

ಚಿಕ್ಕೋಡಿ: ಮಾಜಿ ಸಂಸದ ಅಮರಸಿಂಹ ಪಾಟೀಲರ ಕುಟುಂಬ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 10 ಲಕ್ಷ ರೂ. ದೇಣಿಗೆ ನೀಡಿದೆ. ಆರ್​ಎಸ್​​​ಎಸ್ ಪ್ರಮುಖರಿಗೆ ದೇಣಿಗೆ ಹಣವನ್ನು ನೀಡಲಾಯಿತು.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಆಯೋಜಿಸಿದ್ದ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದರ ಕುಟುಂಬ ದೇಣಿಗೆ ಹಣ ನೀಡಿತು.

ಬಳಿಕ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರತಿಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೆ ದೇಣಿಗೆ ಸಂಗ್ರಹವಾಗುತ್ತಿದೆ. ನಾನೂ ಕೂಡಾ 10 ಲಕ್ಷ ರೂ. ದೇಣಿಗೆ ನೀಡಿದ್ದೇನೆ ಎಂದರು.

ಓದಿ: ಕಾಂಗ್ರೆಸ್​ನಲ್ಲಿ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ನಂತರ ವಿಶ್ವ ಹಿಂದೂ ಪರಿಷತ್​​ನ ಕ್ಷೇತ್ರೀಯ ಸಂಘಟನಾ ಮಹಾಮಂತ್ರಿ ಕೇಶವ ಹೆಗಡೆ ಮಾತನಾಡಿ,‌ ಅಯೋಧ್ಯೆಯಲ್ಲಿ ಭವ್ಯವಾದ ಮಂದಿರ ನಿರ್ಮಾಣವಾಗಲಿದ್ದು, ರಾಮ ಕಥಾ ಪಾರ್ಕ್​​​, ರಾಮಾಯಣ ಕಥೆಯ ಪ್ರದರ್ಶನಕ್ಕಾಗಿ ಚಿತ್ರಮಂದಿರಗಳು ನಿರ್ಮಾಣವಾಗಲಿದೆ. 2023 ರಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಆಗುವುದು ನಿಶ್ಚಿತ ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.