ETV Bharat / state

ಚಿಕ್ಕೋಡಿ ಗಡಿಯಲ್ಲಿ ಕಟ್ಟೆಚ್ಚರ, ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ: ಗಣೇಶ್​​ ಹುಕ್ಕೇರಿ

author img

By

Published : Jul 10, 2020, 12:21 AM IST

ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ಕಡಿಮೆ ಪ್ರಮಾಣದಲ್ಲಿದೆ. ಆದರೆ, ನೆರೆಯ ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Ganesh Hukkeri urged officials to take action those who violate in chikkodi Border
ಚಿಕ್ಕೋಡಿ ಗಡಿಯಲ್ಲಿ ಕಟ್ಟೆಚ್ಚರ, ಕಾನೂನು ಕ್ರಮ ಉಲ್ಲಂಘಿಸಿದರೆ ಕಠಿಣ ಕ್ರಮ: ಗಣೇಶ್​​ ಹುಕ್ಕೇರಿ

ಚಿಕ್ಕೋಡಿ (ಬೆಳಗಾವಿ): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕ ಗಡಿ ಭಾಗದಲ್ಲಿ ಕಳ್ಳ ಮಾರ್ಗದಿಂದ ನುಸುಳ್ಳಿ ಬಂದರೆ ಅಂತವರ ವಿರುದ್ಧ ಕಠಿಣ ಕಾನೂನು ಶಿಕ್ಷೆಗೊಳಪಡಿಸಲಾಗುವುದು ಎಂದು ಶಾಸಕ ಗಣೇಶ್​ ಹುಕ್ಕೇರಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕೋಡಿ ಗಡಿಯಲ್ಲಿ ಕಟ್ಟೆಚ್ಚರ, ಕಾನೂನು ಕ್ರಮ ಉಲ್ಲಂಘಿಸಿದರೆ ಕಠಿಣ ಕ್ರಮ: ಗಣೇಶ್​​ ಹುಕ್ಕೇರಿ

ಚಿಕ್ಕೋಡಿ ತಹಶೀಲ್ದಾರ್​ ಕಾರ್ಯಾಲಯದಲ್ಲಿ ತಾಲೂಕಾಡಳಿತದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ಕಡಿಮೆ ಪ್ರಮಾಣದಲ್ಲಿದೆ. ಆದರೆ, ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿವೆ.

ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಠಿಣ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ಸಂಬಂಧಿಸಿದಂತೆ ಎಲ್ಲಾ ಸೌಕರ್ಯಗಳನ್ನು ತಾಲೂಕಾಡಳಿತದಿಂದ ಒದಗಿಸಲಾಗುವುದು ಎಂದರು.

ಚಿಕ್ಕೋಡಿ ತಾಲೂಕಾಡಳಿತ, ಆರೋಗ್ಯ ಇಲಾಖೆ, ಅಂಗನವಾಡಿ, ಆಶಾ ಕಾರ್ಯಕರ್ತರು ಸೇರಿದಂತೆ ತಾಲೂಕಾಡಳಿತ ಉತ್ತಮವಾಗಿ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದರು.

ಚಿಕ್ಕೋಡಿ (ಬೆಳಗಾವಿ): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕ ಗಡಿ ಭಾಗದಲ್ಲಿ ಕಳ್ಳ ಮಾರ್ಗದಿಂದ ನುಸುಳ್ಳಿ ಬಂದರೆ ಅಂತವರ ವಿರುದ್ಧ ಕಠಿಣ ಕಾನೂನು ಶಿಕ್ಷೆಗೊಳಪಡಿಸಲಾಗುವುದು ಎಂದು ಶಾಸಕ ಗಣೇಶ್​ ಹುಕ್ಕೇರಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕೋಡಿ ಗಡಿಯಲ್ಲಿ ಕಟ್ಟೆಚ್ಚರ, ಕಾನೂನು ಕ್ರಮ ಉಲ್ಲಂಘಿಸಿದರೆ ಕಠಿಣ ಕ್ರಮ: ಗಣೇಶ್​​ ಹುಕ್ಕೇರಿ

ಚಿಕ್ಕೋಡಿ ತಹಶೀಲ್ದಾರ್​ ಕಾರ್ಯಾಲಯದಲ್ಲಿ ತಾಲೂಕಾಡಳಿತದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ಕಡಿಮೆ ಪ್ರಮಾಣದಲ್ಲಿದೆ. ಆದರೆ, ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿವೆ.

ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಠಿಣ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ಸಂಬಂಧಿಸಿದಂತೆ ಎಲ್ಲಾ ಸೌಕರ್ಯಗಳನ್ನು ತಾಲೂಕಾಡಳಿತದಿಂದ ಒದಗಿಸಲಾಗುವುದು ಎಂದರು.

ಚಿಕ್ಕೋಡಿ ತಾಲೂಕಾಡಳಿತ, ಆರೋಗ್ಯ ಇಲಾಖೆ, ಅಂಗನವಾಡಿ, ಆಶಾ ಕಾರ್ಯಕರ್ತರು ಸೇರಿದಂತೆ ತಾಲೂಕಾಡಳಿತ ಉತ್ತಮವಾಗಿ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.