ETV Bharat / state

ಕಾರಿನಿಂದಿಳಿಯದ ಅಧಿಕಾರಿಗಳು: ಕೇಂದ್ರ ಅಧ್ಯಯನ ತಂಡಕ್ಕೆ ಗೋಕಾಕ್​​ ಸಂತ್ರಸ್ತರ ಘೇರಾವ್

ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳೊಂದಿಗೆ ಸಮಸ್ಯೆ ಹೇಳಿಕೊಳ್ಳಲು ಅವಕಾಶ ದೊರೆಯದ ಕಾರಣ, ಇದರಿಂದ ಸಿಟ್ಟಾದ ಗೋಕಾಕ್​ನ ಸಂತ್ರಸ್ತರು ಕಾರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.

author img

By

Published : Sep 8, 2020, 4:12 PM IST

Updated : Sep 8, 2020, 4:37 PM IST

ಕಾರಿಗೆ ಘೇರಾವ್ ಹಾಕಿ ಪ್ರತಿಭಟನೆ
ಕಾರಿಗೆ ಘೇರಾವ್ ಹಾಕಿ ಪ್ರತಿಭಟನೆ

ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ, ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ್​​ ತಾಲೂಕಿನ ಲೋಳಸೂರ ಸೇತುವೆ ಬಳಿ ನಡೆಯಿತು.

ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತ‌ನಾಡಲು ತಂಡದ ಅಧಿಕಾರಿಗಳು ನಿರಾಕರಿಸಿ ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.

ಕೇಂದ್ರ ಅಧ್ಯಯನ ತಂಡಕ್ಕೆ ಗೋಕಾಕ್​​ ಸಂತ್ರಸ್ತರ ಘೇರಾವ್

ಕಾರಿನ ಮುಂದೆ ಧರಣಿ ಕುಳಿತು, ಅಧಿಕಾರಿಗಳಿಗೆ ಧಿಕ್ಕಾರ ಹಾಕ ತೊಡಗಿದರು. ಮನವೊಲಿಕೆಗೆ ಮುಂದಾದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ತರಾಟೆಗೆ ತೆಗೆದುಕೊಂಡರು. ಸಮಸ್ಯೆ ಹೇಳಿಕೊಳ್ಳಲು ಅವಕಾಶ ಕೊಡಿ. ಅವರಿಗೆ ಕನ್ನಡ ತಿಳಿಯದಿದ್ದರೆ ಹಿಂದಿಯಲ್ಲೇ ಮಾತನಾಡುತ್ತೇವೆ. ಸಂತ್ರಸ್ತರ ಬವಣೆಗಳು ಅವರಿಗೆ ತಿಳಿಯಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇಷ್ಟಾದರೂ ತಂಡದ ಅಧಿಕಾರಿಗಳು ಕಾರಿನಿಂದ ಇಳಿಯಲಿಲ್ಲ. ಕೊನೆಗೆ ಎಲ್ಲ ವಿಷಯವನ್ನೂ ಗಮನಕ್ಕೆ ತರುತ್ತೇನೆ ಎಂದು ಜಿಲ್ಲಾಧಿಕಾರಿ ನೀಡಿದ ಭರವಸೆ ಮೇರೆಗೆ ಪ್ರತಿಭಟನಾಕಾರರು ಕಾರುಗಳು ಮುಂದೆ ಹೋಗಲು ಬಿಟ್ಟರು.

ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ, ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ್​​ ತಾಲೂಕಿನ ಲೋಳಸೂರ ಸೇತುವೆ ಬಳಿ ನಡೆಯಿತು.

ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತ‌ನಾಡಲು ತಂಡದ ಅಧಿಕಾರಿಗಳು ನಿರಾಕರಿಸಿ ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.

ಕೇಂದ್ರ ಅಧ್ಯಯನ ತಂಡಕ್ಕೆ ಗೋಕಾಕ್​​ ಸಂತ್ರಸ್ತರ ಘೇರಾವ್

ಕಾರಿನ ಮುಂದೆ ಧರಣಿ ಕುಳಿತು, ಅಧಿಕಾರಿಗಳಿಗೆ ಧಿಕ್ಕಾರ ಹಾಕ ತೊಡಗಿದರು. ಮನವೊಲಿಕೆಗೆ ಮುಂದಾದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ತರಾಟೆಗೆ ತೆಗೆದುಕೊಂಡರು. ಸಮಸ್ಯೆ ಹೇಳಿಕೊಳ್ಳಲು ಅವಕಾಶ ಕೊಡಿ. ಅವರಿಗೆ ಕನ್ನಡ ತಿಳಿಯದಿದ್ದರೆ ಹಿಂದಿಯಲ್ಲೇ ಮಾತನಾಡುತ್ತೇವೆ. ಸಂತ್ರಸ್ತರ ಬವಣೆಗಳು ಅವರಿಗೆ ತಿಳಿಯಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇಷ್ಟಾದರೂ ತಂಡದ ಅಧಿಕಾರಿಗಳು ಕಾರಿನಿಂದ ಇಳಿಯಲಿಲ್ಲ. ಕೊನೆಗೆ ಎಲ್ಲ ವಿಷಯವನ್ನೂ ಗಮನಕ್ಕೆ ತರುತ್ತೇನೆ ಎಂದು ಜಿಲ್ಲಾಧಿಕಾರಿ ನೀಡಿದ ಭರವಸೆ ಮೇರೆಗೆ ಪ್ರತಿಭಟನಾಕಾರರು ಕಾರುಗಳು ಮುಂದೆ ಹೋಗಲು ಬಿಟ್ಟರು.

Last Updated : Sep 8, 2020, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.