ETV Bharat / state

ಷರತ್ತಿಗೆ ಒಪ್ಪಿದರೂ ನೀರು ಬಿಡದ ಮಹಾ ಸರ್ಕಾರ.. ಕೇಳೋರಿಲ್ಲವೇ ಕೃಷ್ಣಾ ತೀರದ ಜನರ ವ್ಯಥೆ!

author img

By

Published : May 14, 2019, 5:54 PM IST

ಕೃಷ್ಣಾ ನದಿ ತೀರದಲ್ಲಿ ಬರುವ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಸಾವಿರಾರು ಹಳ್ಳಿಗಳ ಜನರು ನೀರಿಗಾಗಿ ಪ್ರತಿನಿತ್ಯ ಪರದಾಡುವಂತಾಗಿದೆ. ರಾಜ್ಯದಲ್ಲಿನ ಸಮಿಶ್ರ ಸರ್ಕಾರ ಉತ್ತರ ಕರ್ನಾಟಕ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂಬ ಕೂಗು ಈ ಭಾಗದಲ್ಲಿ ಹರದಾಡುತ್ತಿದೆ.

ಕೇಳೋರಿಲ್ಲವೇ ಕೃಷ್ಣಾ ತೀರದ ಜನರ ವ್ಯಥೆ!

ಚಿಕ್ಕೋಡಿ : ಕಳೆದ 2 ತಿಂಗಳಿನಿಂದ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ಬತ್ತಿ ಬರಿದಾಗಿದೆ. ಕೃಷ್ಣಾ ನದಿ ತೀರದಲ್ಲಿ ಬರುವ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಸಾವಿರಾರು ಹಳ್ಳಿಗಳ ಜನರು ನೀರಿಗಾಗಿ ಪ್ರತಿನಿತ್ಯ ಪರದಾಡುವಂತಾಗಿದೆ. ರಾಜ್ಯದಲ್ಲಿನ ಸಮಿಶ್ರ ಸರ್ಕಾರ ಉತ್ತರ ಕರ್ನಾಟಕ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂಬ ಕೂಗು ಈ ಭಾಗದಲ್ಲಿ ಹರದಾಡುತ್ತಿದೆ.

ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಹಾಗೂ ಅಲ್ಲಿನ ಜಲಸಂಪನ್ಮೂಲ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸೊಲ್ಲಾಪುರ ಹಾಗೂ ಜತ್ತ ತಾಲೂಕಿನ ಕೆಲವು ಪ್ರದೇಶಗಳಿಗೆ ಆಲಮಟ್ಟಿ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿದರೆ, ಕೋಯ್ನಾದಿಂದ 2 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಅವರು ಕರ್ನಾಟಕ ಸರ್ಕಾರಕ್ಕೆ ಷರತ್ತು ಹಾಕಿದ್ದರು. ಕರ್ನಾಟಕ ರಾಜ್ಯದ ಸಮಿಶ್ರ ಸರ್ಕಾರದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಅವರು ಬೆಳಗಾವಿ ಭಾಗದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ಕರೆದು ಪರಸ್ಪರ ನೀರು ಬಿಡುಗಡೆ ಬಗ್ಗೆ ಮಾತುಕತೆ ನಡೆಸಿ ಮಹಾರಾಷ್ಟ್ರದ ಷರತ್ತಿಗೆ ಒಪ್ಪಿಗೆ ಸೂಚಿಸಿದ್ದರು. ಅಲ್ಲದೆ ಕೃಷ್ಣಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಸಭೆ ನಡೆಸಿ 1 ವಾರ ಕಳೆದರೂ ಕೃಷ್ಣಾ ನದಿಗೆ ನೀರು ಮಾತ್ರ ಬಂದಿಲ್ಲ. ಇದರಿಂದಾಗಿ ನದಿ ತೀರದ ಜನರು ಪ್ರತಿನಿತ್ಯ ನೀರು ಇಂದು ಬರುತ್ತೆ, ನಾಳೆ ಬರುತ್ತೆ ಎಂಬ ನಿರೀಕ್ಷೆಯಲ್ಲೇ ಕಾಲ ಕಳೆಯುತ್ತಿದ್ದಾರೆ.

ಕೇಳೋರಿಲ್ಲವೇ ಕೃಷ್ಣಾ ತೀರದ ಜನರ ವ್ಯಥೆ!

ಮಹಾರಾಷ್ಟ್ರದ ಷರತ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದರೂ ಕೃಷ್ಣಾ ನದಿಗೆ ನೀರು ಏಕೆ ಬರುತ್ತಿಲ್ಲ? ಎಂದು ಇಲ್ಲಿನ ಜನರ ಪ್ರಶ್ನೆಯಾಗಿದೆ. ಪ್ರತಿ ವರ್ಷ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕೇಳಿದಾಗಲೆಲ್ಲ ಮಾನವೀಯತೆ ಆಧಾರದ ಮೇಲೆ ನೀರು ಬಿಡುತ್ತಿದ್ದ ಮಹಾರಾಷ್ಟ್ರ ಸರ್ಕಾರ ಈ ಬಾರಿ ರಾಜ್ಯದ ಜನರನ್ನು ಸತಾಯಿಸುತ್ತಿರುವುದು ಎರಡೂ ಸರ್ಕಾರಗಳ ನಡೆ ಬಗ್ಗೆ ಜನರಲ್ಲಿ ಅನುಮಾನ ಮೂಡಿಸಿದೆ. ನೀರಿಗೆ ನೀರು ಕೊಡುವ ಷರತ್ತಿಗೆ ಎರಡೂ ಸರ್ಕಾರಗಳು ಒಪ್ಪಿಕೊಂಡ ನಂತರವಾದರೂ ಕೃಷ್ಣಾ ನದಿಗೆ ಏಕೆ ನೀರು ಬರುತ್ತಿಲ್ಲ ಎಂದು ಉತ್ತರಕರ್ನಾಟಕದ ಜನರು ರಾಜ್ಯ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.

ಮುಖ್ಯಮಂತ್ರಿ ಕುಮಾರಾಸ್ವಾಮಿ ಕೃಷ್ಣಾ ನದಿಗೆ ನೀರು ಹರಿಸಲು ಹೆಚ್ಚಿನ ಕಾಳಜಿ ತೋರುತ್ತಿಲ್ಲ. ಅದೇ ಕಾವೇರಿ ನದಿ ನೀರಿನ ಸಮಸ್ಯೆ ಬಂದಾಗ ರಾಜ್ಯದ ಬುದ್ಧಿ ಜೀವಿಗಳು, ಚಲನಚಿತ್ರ ನಟರು ಬೀದಿಗೆ ಇಳಿದು ಹೋರಾಟ ಮಾಡುತ್ತಾರೆ. ರಾಜ್ಯ ಸರ್ಕಾರ ಹೆಚ್ಚಿನ ಕಾಳಜಿ ತೋರುತ್ತದೆ. ಆ ಕಾಳಜಿಯನ್ನು ಕೃಷ್ಣಾ ನದಿ ವಿಷಯದಲ್ಲಿ ರಾಜ್ಯ ಸರ್ಕಾರ ತೋರುತ್ತಿಲ್ಲ ಎಂದು ಕೃಷ್ಣಾ ನದಿ ತೀರದ ಜನರು ಸಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕೋಡಿ : ಕಳೆದ 2 ತಿಂಗಳಿನಿಂದ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ಬತ್ತಿ ಬರಿದಾಗಿದೆ. ಕೃಷ್ಣಾ ನದಿ ತೀರದಲ್ಲಿ ಬರುವ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಸಾವಿರಾರು ಹಳ್ಳಿಗಳ ಜನರು ನೀರಿಗಾಗಿ ಪ್ರತಿನಿತ್ಯ ಪರದಾಡುವಂತಾಗಿದೆ. ರಾಜ್ಯದಲ್ಲಿನ ಸಮಿಶ್ರ ಸರ್ಕಾರ ಉತ್ತರ ಕರ್ನಾಟಕ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂಬ ಕೂಗು ಈ ಭಾಗದಲ್ಲಿ ಹರದಾಡುತ್ತಿದೆ.

ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಹಾಗೂ ಅಲ್ಲಿನ ಜಲಸಂಪನ್ಮೂಲ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸೊಲ್ಲಾಪುರ ಹಾಗೂ ಜತ್ತ ತಾಲೂಕಿನ ಕೆಲವು ಪ್ರದೇಶಗಳಿಗೆ ಆಲಮಟ್ಟಿ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿದರೆ, ಕೋಯ್ನಾದಿಂದ 2 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಅವರು ಕರ್ನಾಟಕ ಸರ್ಕಾರಕ್ಕೆ ಷರತ್ತು ಹಾಕಿದ್ದರು. ಕರ್ನಾಟಕ ರಾಜ್ಯದ ಸಮಿಶ್ರ ಸರ್ಕಾರದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಅವರು ಬೆಳಗಾವಿ ಭಾಗದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ಕರೆದು ಪರಸ್ಪರ ನೀರು ಬಿಡುಗಡೆ ಬಗ್ಗೆ ಮಾತುಕತೆ ನಡೆಸಿ ಮಹಾರಾಷ್ಟ್ರದ ಷರತ್ತಿಗೆ ಒಪ್ಪಿಗೆ ಸೂಚಿಸಿದ್ದರು. ಅಲ್ಲದೆ ಕೃಷ್ಣಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಸಭೆ ನಡೆಸಿ 1 ವಾರ ಕಳೆದರೂ ಕೃಷ್ಣಾ ನದಿಗೆ ನೀರು ಮಾತ್ರ ಬಂದಿಲ್ಲ. ಇದರಿಂದಾಗಿ ನದಿ ತೀರದ ಜನರು ಪ್ರತಿನಿತ್ಯ ನೀರು ಇಂದು ಬರುತ್ತೆ, ನಾಳೆ ಬರುತ್ತೆ ಎಂಬ ನಿರೀಕ್ಷೆಯಲ್ಲೇ ಕಾಲ ಕಳೆಯುತ್ತಿದ್ದಾರೆ.

ಕೇಳೋರಿಲ್ಲವೇ ಕೃಷ್ಣಾ ತೀರದ ಜನರ ವ್ಯಥೆ!

ಮಹಾರಾಷ್ಟ್ರದ ಷರತ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದರೂ ಕೃಷ್ಣಾ ನದಿಗೆ ನೀರು ಏಕೆ ಬರುತ್ತಿಲ್ಲ? ಎಂದು ಇಲ್ಲಿನ ಜನರ ಪ್ರಶ್ನೆಯಾಗಿದೆ. ಪ್ರತಿ ವರ್ಷ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕೇಳಿದಾಗಲೆಲ್ಲ ಮಾನವೀಯತೆ ಆಧಾರದ ಮೇಲೆ ನೀರು ಬಿಡುತ್ತಿದ್ದ ಮಹಾರಾಷ್ಟ್ರ ಸರ್ಕಾರ ಈ ಬಾರಿ ರಾಜ್ಯದ ಜನರನ್ನು ಸತಾಯಿಸುತ್ತಿರುವುದು ಎರಡೂ ಸರ್ಕಾರಗಳ ನಡೆ ಬಗ್ಗೆ ಜನರಲ್ಲಿ ಅನುಮಾನ ಮೂಡಿಸಿದೆ. ನೀರಿಗೆ ನೀರು ಕೊಡುವ ಷರತ್ತಿಗೆ ಎರಡೂ ಸರ್ಕಾರಗಳು ಒಪ್ಪಿಕೊಂಡ ನಂತರವಾದರೂ ಕೃಷ್ಣಾ ನದಿಗೆ ಏಕೆ ನೀರು ಬರುತ್ತಿಲ್ಲ ಎಂದು ಉತ್ತರಕರ್ನಾಟಕದ ಜನರು ರಾಜ್ಯ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.

ಮುಖ್ಯಮಂತ್ರಿ ಕುಮಾರಾಸ್ವಾಮಿ ಕೃಷ್ಣಾ ನದಿಗೆ ನೀರು ಹರಿಸಲು ಹೆಚ್ಚಿನ ಕಾಳಜಿ ತೋರುತ್ತಿಲ್ಲ. ಅದೇ ಕಾವೇರಿ ನದಿ ನೀರಿನ ಸಮಸ್ಯೆ ಬಂದಾಗ ರಾಜ್ಯದ ಬುದ್ಧಿ ಜೀವಿಗಳು, ಚಲನಚಿತ್ರ ನಟರು ಬೀದಿಗೆ ಇಳಿದು ಹೋರಾಟ ಮಾಡುತ್ತಾರೆ. ರಾಜ್ಯ ಸರ್ಕಾರ ಹೆಚ್ಚಿನ ಕಾಳಜಿ ತೋರುತ್ತದೆ. ಆ ಕಾಳಜಿಯನ್ನು ಕೃಷ್ಣಾ ನದಿ ವಿಷಯದಲ್ಲಿ ರಾಜ್ಯ ಸರ್ಕಾರ ತೋರುತ್ತಿಲ್ಲ ಎಂದು ಕೃಷ್ಣಾ ನದಿ ತೀರದ ಜನರು ಸಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಕರ್ನಾಟಕ ಸರಕಾರ ಉತ್ತರ ಕರ್ನಾಟಕಕ್ಕೆ ಎರಡನೇ ಬಾರಿ ಮಲತಾಯಿ ಧೋರಣೆ ತೊರುತ್ತಿದೆ.
Body:
ಚಿಕ್ಕೋಡಿ :

ಕಳೆದ ಎರಡು ತಿಂಗಳಿನಿಂದ ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಒಡಲು ಬತ್ತಿ ಬರಿದಾಗಿದೆ. ಕೃಷ್ಣಾ ನದಿ ತೀರದಲ್ಲಿ ಬರುವ ಬೆಳಗಾವಿ, ವಿಜಯಪುರ, ಬಾಗಲಕೋಟ, ರಾಯಚೂರು ಜಿಲ್ಲೆಗಳ ಸಾವಿರಾರು ಹಳ್ಳಿಯ ಜನರು ಜಲದಾಹ ತೀರಿಸಿಕೊಳ್ಳಲು ಪ್ರತಿನಿತ್ಯ ಪರದಾಡುವಂತಾಗಿದೆ.

ರಾಜ್ಯದಲ್ಲಿನ ಸಮಿಶ್ರ ಸರಕಾರ ಉತ್ತರಕರ್ನಾಟಕ ಬಗ್ಗೆ ದಿವ್ಯ ನಿರ್ಲಕ್ಷ್ಯ ತೊರುತ್ತಿದೆ ಎಂಬ ಕೂಗು ಈ ಭಾಗದ ಜನರ ಬಾಯಿಂದ ಬಾಯಿಗೆ ಹರದಾಡುತ್ತಿದ್ದು. ಇದೀಗ ಅಂತಹ ಕೂಗು ಮತ್ತೊಮ್ಮೆ ಉತ್ತರ ಕರ್ನಾಟಕದ ಜನರಿಂದ ಕೇಳಿ ಬರುತ್ತಿದೆ.

ಇನ್ನು ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್-ಬಿಜೆಪಿ ಜನಪ್ರತಿನಿಧಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನಾವೀಸ್ ಹಾಗೂ ಅಲ್ಲಿನ ಜಲಸಂಪನ್ಮೂಲ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸೊಲ್ಲಾಪುರ ಹಾಗೂ ಜತ್ತ ತಾಲೂಕಿನ ಕೆಲವು ಪ್ರದೇಶಗಳಿಗೆ ಆಲಮಟ್ಟಿ ಡ್ಯಾನಿಂದ ಎರಡು ಟಿಎಂಸಿ ನೀರು ಹರಿಸಿದರೆ, ಕೋಯ್ನಾದಿಂದ ಎರಡು ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಅವರು ಕರ್ನಾಟಕ ಸರಕಾರಕ್ಕೆ ಷರತ್ತು ಹಾಕಿದ್ದರು.

ಕರ್ನಾಟಕ ರಾಜ್ಯದ ಸಮಿಶ್ರ ಸರಕಾರದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಬೆಳಗಾವಿ ಭಾಗದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ಕರೆದು ಪರಸ್ಪರ ನೀರು ಬಿಡುಗಡೆ ಬಗ್ಗೆ ಮಾತುಕತೆ ನಡೆಸಿ ಮಹಾರಾಷ್ಟ್ರದ ಷರತ್ತಿಗೆ ಒಪ್ಪಿಗೆ ಸೂಚಿಸಿದ್ದರು. ಅಲ್ಲದೆ ಕೃಷ್ಣಾ ನದಿಗೆ ನೀರು ಹರಿಸುವಂತೆ ಅವರು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಸಹ ಮಾಡಿದ್ದರು. ಸಭೆ ನಡೆಸಿ ಒಂದು ವಾರವಾದರೂ ಕೃಷ್ಣಾ ನದಿಗೆ ನೀರು ಮಾತ್ರ ಬಂದಿಲ್ಲ.

ಇದರಿಂದಾಗಿ ನದಿ ತೀರದ ಜನರು ಪ್ರತಿನಿತ್ಯ ನೀರು ಇಂದು ಬರುತ್ತೆ, ನಾಳೆ ಬರುತ್ತೆ ಎಂಬ ನಿರೀಕ್ಷೆಯಲ್ಲೇ ಜನರು ಕಾಲ ಕಳೆಯುತ್ತಿದ್ದಾರೆ. ಮಹಾರಾಷ್ಟ್ರದ ಷರತ್ತಿಗೆ ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದ್ದರು ಸಹ ಕೃಷ್ಣಾ ನದಿಗೆ ನೀರು ಏಕೆ ಬರುತ್ತಿಲ್ಲ? ಎಂದು ಇಲ್ಲಿನ ಜನರು ಪ್ರಶ್ನೆಯು ಪ್ರಶ್ನೆಯಾಗಿಯೆ ಉಳಿದಿದೆ.

ಪ್ರತಿ ವರ್ಷ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಕೇಳಿದಾಗಲೆಲ್ಲ ಮಾನವೀಯತೆ ಆಧಾರದ ಮೇಲೆ ನೀರು ಬಿಡುತ್ತಿದ್ದ ಮಹಾರಾಷ್ಟ್ರ ಸರಕಾರ ಈ ಬಾರಿ ರಾಜ್ಯದ ಜನರನ್ನು ಸತಾಯಿಸುತ್ತಿರುವುದು  ಎರಡೂ ಸರಕಾರಗಳ ನಡೆ ಬಗ್ಗೆ ಜನರಲ್ಲಿ ಅನುಮಾನ ಮೂಡಿಸಿದೆ. ನೀರಿಗೆ ನೀರು ಕೊಡುವ ಷರತ್ತಿಗೆ ಎರಡೂ ಸರಕಾರಗಳು ಒಪ್ಪಿಕೊಂಡ ನಂತರವಾದರೂ ಕೃಷ್ಣಾ ನದಿಗೆ ಏಕೆ ನೀರು ಬರುತ್ತಿಲ್ಲ ಎಂದು ಉತ್ತರಕರ್ನಾಟಕದ ಜನರು ರಾಜ್ಯ ಸರಕಾರವನ್ನು ಪ್ರಶ್ನಿಸುವಂತಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಾಸ್ವಾಮಿ ಕೃಷ್ಣಾ ನದಿಗೆ ನೀರು ಹರಿಸಲು ಹೆಚ್ಚಿನ ಕಾಳಜಿ ತೋರುತ್ತಿಲ್ಲ. ಅದೇ ಕಾವೇರಿ ನದಿ ನೀರಿನ ಸಮಸ್ಯೆ ಬಂದಾಗ ರಾಜ್ಯದ ಬುದ್ದಿ ಜೀವಿಗಳು, ಚಲನಚಿತ್ರ ನಟರು ಬೀದಿಗೆ ಇಳಿದು ಹೋರಾಟ ಮಾಡುತ್ತಾರೆ. ರಾಜ್ಯ ಸರಕಾರ ಹೆಚ್ಚಿನ ಕಾಳಜಿ ತೋರುತ್ತದೆ. ಆ ಕಾಳಜಿಯನ್ನು ಕೃಷ್ಣಾ ನದಿ ವಿಷಯದಲ್ಲಿ ರಾಜ್ಯ ಸರಕಾರ ತೋರುತ್ತಿಲ್ಲ ಎಂದು ಕೃಷ್ಣಾ ನದಿ ತೀರದ ಜನರು ಸಮಿಶ್ರ ಸರಕಾರದ ವಿರುದ್ದ ಕಿಡಿಕಾಡಿರಿದ್ದಾರೆ. ಅಭಿವೃದ್ದಿಯಲ್ಲಿ ಮಲತಾಯಿ ಧೋರಣೆಯಿಂದಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೇಳುವ ಮೊದಲೇ ರಾಜ್ಯ ಸರಕಾರ ಹಾಗೂ ಜನಪ್ರತಿನಿಧಿಗಳು ಕೃಷ್ಣಾ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲು ಮುಂದಾಗುವರೇ ಎಂದು ಕಾಯ್ದು ನೋಡಬೇಕಾಗಿದೆ. 

ಅದರಂತೆ ಉತ್ತರ ಕರ್ನಾಟಕ ರೈತರ‌ ಮಕ್ಕಳು ಮಾತ್ರ ದುಡಿಯಲು ದಕ್ಷಿಣ ಕರ್ನಾಟಕ ಕಡೆ ಮುಖ ಮಾಡುವಂತಾಗಿದ್ದು 500 ಕ್ಕಿಂತ ಹೆಚ್ಚಿನ ಕಿ.ಮೀ ದೂರ ಹೋಗಿ ಐಟಿ. ಬಿಟಿ ಸಾಪ್ಟ್ ವೇರ್ ಕಂಪನಿಗಳ ಕಡೆ ಮುಖ ಮಾಡುವಂತಾಗಿದ್ದು. ಉತ್ತರ ಕರ್ನಾಟಕ ಭಾಗಕ್ಕೆ ದುಡಿಯಲು ಯಾವುದೇ ಕಂಪನಿಗಳಿಲ್ಲ. ಅದರಂತೆ ಕೂಡಿಯಲು ನೀರಿಲ್ಲ. ಆದರೆ, ಸರಕಾರ ಮಾತ್ರ ಈ ಕಡೆ ಮಾತ್ರ ಗಮನ ಹರಿಸುತ್ತಿಲ್ಲ ಎಂದು ಉಕ ಭಾಗದ ರೈತರು ದೂರುತ್ತಿದ್ದಾರೆ.

ಇನ್ನು ಉತ್ತರಕರ್ನಾಟಕದ ಅಭಿವೃದ್ದಿಯಲ್ಲಿ ರಾಜ್ಯ ಸರಕಾರ  ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಕೂಗಿಗೆ ಈಗ ಮತ್ತಷ್ಟು ಪುಷ್ಟಿ ದೊರೆತಂತಾಗಿದೆ. ಉತ್ತರಕರ್ನಾಟಕದ ಜೀವನದಿ ಕೃಷ್ಣೆಗೆ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಈ ಭಾಗದ ಜನರು ರಾಜ್ಯ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ.

ಕೃಷ್ಣಾ ನದಿ ನೀರಿಗಾಗಿ ಈ ಭಾಗದ ರೈತರು ಕಳೆದ 5 ದಿನದಿಂದ ಅಹೋರಾತ್ರಿ ಧರಣಿ ಸತ್ಯಾಗೃಹ ಮಾಡುತ್ತಿರುವಾಗ ರಾಜ್ಯ ಸರಕಾರ ಹಾಗೂ ಚಲನಚಿತ್ರ ನಟರು ಕೃಷ್ಣಾ ನದಿಗೆ ನೀರು ಬಿಡುಗಡೆ ಬಗ್ಗೆ ಮಾತನಾಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇವಲ ಮಂಡ್ಯ ಹಾಗೂ ಹಾಸನಕ್ಕೆ ಮಾತ್ರ ಮುಖ್ಯಮಂತ್ರಿಯಾಗಿದ್ದಾರೆ. ನೀರಿಲ್ಲದೆ ಉತ್ತರಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ.
ಎಂಬುವುದು ತಿಳಿದರೂ ಕೂಡಾ ಈ ಭಾಗದ ಅನ್ನದಾತನ ಕಷ್ಟಕ್ಕೆ ಸ್ಪಂದಿಸದೆ ಮಲತಾಯಿ ಧೊರಣೆ ಅನುಸರಿಸುತ್ತಿದ್ದಾರೆ. ಎಂದು ರೈತರು ದೂರುತ್ತಿದ್ದಾರೆ.

ವಿಡಿಯೋ :
ನದಿ ಬತ್ತಿರುವ ವಿಡಿಯೋಗಳನ್ನು ಹಾಕಲಾಗಿದೆ ನಿಮ್ಮಗೆ ಯಾವ ವಿಡಿಯೋ ಸೂಕ್ತ ಅವುಗಳನ್ನು ಬಳಕೆ ಮಾಡಿಕೊಳ್ಳಿ
Conclusion:
ಸಂಜಯ ಕೌಲಗಿ‌
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.