ETV Bharat / state

ಸುರೇಶ್​ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜ್ಯಪಾಲ ವಜುಭಾಯ್ ವಾಲಾ

author img

By

Published : Oct 5, 2020, 3:19 PM IST

Updated : Oct 5, 2020, 4:19 PM IST

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ವಜುಭಾಯ್ ವಾಲಾ ಅವರು ಸುರೇಶ್​ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

angadi
angadi

ಬೆಳಗಾವಿ: ಕೋವಿಡ್-19 ಸೋಂಕಿಗೆ ಒಳಗಾಗಿ ಇತ್ತೀಚೆಗಷ್ಟೇ ಚಿಕಿತ್ಸೆ ಫಲಿಸದೆ ಮೃತಪಟ್ಟ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾಗಿದ್ದ ಸುರೇಶ್ ಅಂಗಡಿ ಕುಟುಂಬಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಸಾಂತ್ವನ ಹೇಳಿದರು‌.

ಸುರೇಶ್​ ಅಂಗಡಿ ಕುಟುಂಬ ಭೇಟಿಯಾದ ವಜುಭಾಯ್ ವಾಲಾ

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ವಜುಭಾಯ್ ವಾಲಾ ಅವರು ಸುರೇಶ್​ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

governor vajubhai vala visits suresh angadi family
ಸುರೇಶ್​ ಅಂಗಡಿ ಭಾವಚಿತ್ರಕ್ಕೆ ಪುಷ್ಪನಮನ

ಇಂದು ಬೆಳಗ್ಗೆ 9.20ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಜುಭಾಯ್ ವಾಲಾ ಆಗಮಿಸಿದ್ದರು. ಬಳಿಕ ಸುವರ್ಣ ಸೌಧದಲ್ಲಿ ಆಯೋಜಸಿದ್ದ ರಾಣಿ ಚೆನ್ನಮ್ಮ ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.

governor vajubhai vala visits suresh angadi family
ಸುರೇಶ್​ ಅಂಗಡಿ ಕುಟುಂಬ ಭೇಟಿಯಾದ ವಜುಭಾಯ್ ವಾಲಾ

ಕಾರ್ಯಕ್ರಮ ಮುಗಿದ ಬಳಿಕ ಸುರೇಶ್​ ಅಂಗಡಿ ನಿವಾಸಕ್ಕೆ ಆಗಮಿಸಿದರು. ಸುರೇಶ್​ ಅಂಗಡಿ ತಾಯಿ ಸೋಮವ್ವ, ಪತ್ನಿ ಮಂಗಳಾ ಅಂಗಡಿ, ಪುತ್ರಿ ಸ್ಫೂರ್ತಿ ಹಾಗೂ ಶ್ರದ್ಧಾಗೆ ಸಾಂತ್ವನ ಹೇಳಿದರು.

governor vajubhai vala visits suresh angadi family
ಸುರೇಶ್​ ಅಂಗಡಿ ಭಾವಚಿತ್ರಕ್ಕೆ ಪುಷ್ಪನಮನ

ಸುರೇಶ್​ ಅಂಗಡಿ ಅವರ ಪಕ್ಷ ನಿಷ್ಠೆ ಇತರರಿಗೆ ಮಾದರಿಯಾಗಿತ್ತು. ಅಂಗಡಿ ಅವರ ಕುಟುಂಬದ ಜೊತೆಗೆ ನಾನಿದ್ದೇನೆ. ಸಹಾಯ ಬೇಕಾದ್ರೆ ರಾಜ್ಯಭವನ ಸಂಪರ್ಕಿಸುವಂತೆ ಕುಟುಂಬ ಸದಸ್ಯರನ್ನು ಕೋರಿದರು. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದರು.

governor vajubhai vala visits suresh angadi family
ಸುರೇಶ್​ ಅಂಗಡಿ ಕುಟುಂಬ ಭೇಟಿಯಾದ ವಜುಭಾಯ್ ವಾಲಾ

ಬೆಳಗಾವಿ: ಕೋವಿಡ್-19 ಸೋಂಕಿಗೆ ಒಳಗಾಗಿ ಇತ್ತೀಚೆಗಷ್ಟೇ ಚಿಕಿತ್ಸೆ ಫಲಿಸದೆ ಮೃತಪಟ್ಟ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾಗಿದ್ದ ಸುರೇಶ್ ಅಂಗಡಿ ಕುಟುಂಬಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಸಾಂತ್ವನ ಹೇಳಿದರು‌.

ಸುರೇಶ್​ ಅಂಗಡಿ ಕುಟುಂಬ ಭೇಟಿಯಾದ ವಜುಭಾಯ್ ವಾಲಾ

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ವಜುಭಾಯ್ ವಾಲಾ ಅವರು ಸುರೇಶ್​ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

governor vajubhai vala visits suresh angadi family
ಸುರೇಶ್​ ಅಂಗಡಿ ಭಾವಚಿತ್ರಕ್ಕೆ ಪುಷ್ಪನಮನ

ಇಂದು ಬೆಳಗ್ಗೆ 9.20ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಜುಭಾಯ್ ವಾಲಾ ಆಗಮಿಸಿದ್ದರು. ಬಳಿಕ ಸುವರ್ಣ ಸೌಧದಲ್ಲಿ ಆಯೋಜಸಿದ್ದ ರಾಣಿ ಚೆನ್ನಮ್ಮ ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.

governor vajubhai vala visits suresh angadi family
ಸುರೇಶ್​ ಅಂಗಡಿ ಕುಟುಂಬ ಭೇಟಿಯಾದ ವಜುಭಾಯ್ ವಾಲಾ

ಕಾರ್ಯಕ್ರಮ ಮುಗಿದ ಬಳಿಕ ಸುರೇಶ್​ ಅಂಗಡಿ ನಿವಾಸಕ್ಕೆ ಆಗಮಿಸಿದರು. ಸುರೇಶ್​ ಅಂಗಡಿ ತಾಯಿ ಸೋಮವ್ವ, ಪತ್ನಿ ಮಂಗಳಾ ಅಂಗಡಿ, ಪುತ್ರಿ ಸ್ಫೂರ್ತಿ ಹಾಗೂ ಶ್ರದ್ಧಾಗೆ ಸಾಂತ್ವನ ಹೇಳಿದರು.

governor vajubhai vala visits suresh angadi family
ಸುರೇಶ್​ ಅಂಗಡಿ ಭಾವಚಿತ್ರಕ್ಕೆ ಪುಷ್ಪನಮನ

ಸುರೇಶ್​ ಅಂಗಡಿ ಅವರ ಪಕ್ಷ ನಿಷ್ಠೆ ಇತರರಿಗೆ ಮಾದರಿಯಾಗಿತ್ತು. ಅಂಗಡಿ ಅವರ ಕುಟುಂಬದ ಜೊತೆಗೆ ನಾನಿದ್ದೇನೆ. ಸಹಾಯ ಬೇಕಾದ್ರೆ ರಾಜ್ಯಭವನ ಸಂಪರ್ಕಿಸುವಂತೆ ಕುಟುಂಬ ಸದಸ್ಯರನ್ನು ಕೋರಿದರು. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದರು.

governor vajubhai vala visits suresh angadi family
ಸುರೇಶ್​ ಅಂಗಡಿ ಕುಟುಂಬ ಭೇಟಿಯಾದ ವಜುಭಾಯ್ ವಾಲಾ
Last Updated : Oct 5, 2020, 4:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.