ETV Bharat / state

ಹೊಸ ತಾಲೂಕಾಗಿ ಎರಡು ವರ್ಷ ಕಳೆದರೂ ಸರ್ಕಾರಿ ಕಚೇರಿ ಪ್ರಾರಂಭಿಸಿಲ್ಲ: ಜಯ ಕರ್ನಾಟಕ ಸಂಘಟನೆ ಆಕ್ರೋಶ

ಕಾಗವಾಡ ತಾಲೂಕು ಘೋಷಣೆಯಾಗಿ ಎರಡು ವರ್ಷ ಸಮೀಪಿಸುತ್ತಿದೆ. ಆದರೂ ಇನ್ನು ಹಲವಾರು ಕಚೇರಿಗಳನ್ನ ಪ್ರಾರಂಭಿಸಿಲ್ಲ. ತಾಲೂಕಿಗೆ ಬರುವಂತಹ ಎಲ್ಲ ಕಚೇರಿಗಳು ಆದಷ್ಟು ಬೇಗನೆ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಹೋರಾಟ ಎದುರಿಸಬೇಕಾದೀತು ಎಂದು ಜಯ ಕರ್ನಾಟಕ ಸಂಘಟನೆ ಎಚ್ಚರಿಸಿದೆ.

author img

By

Published : Jun 30, 2019, 3:31 AM IST

ಜಯ ಕರ್ನಾಟಕ ಸಂಘಟನೆ ಆಕ್ರೋಶ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕು ಕೇಂದ್ರವಾಗಿ ಎರಡು ವರ್ಷಗಳೇ ಕಳೆದರೂ ಇನ್ನೂ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಇದರಿಂದ ಕಾಗವಾಡ ತಾಲೂಕಿನ ಸುತ್ತ ಮುತ್ತಲಿನ ಗ್ರಾಮದ ಜನರಿಗೆ ತುಂಬಾ ತೊಂದರೆಗಳಾಗುತ್ತಿವೆ. ಇದ್ಯಾವುದನ್ನು ಗಮನಿಸದ ಸರ್ಕಾರದ ವಿರುದ್ಧ ಜಯ ಕರ್ನಾಟಕ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಹೊಸ ತಾಲೂಕಾಗಿ ಎರಡು ವರ್ಷ ಕಳೆದರೂ ಸರ್ಕಾರಿ ಕಚೇರಿ ಪ್ರಾರಂಭಿಸಿಲ್ಲ: ಜಯ ಕರ್ನಾಟಕ ಸಂಘಟನೆ ಆಕ್ರೋಶ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಚನ್ನಮ್ಮ ವೃತ್ತದಿಂದ ಪ್ರಾರಂಭವಾದ ಪ್ರತಿಭಟನೆ ತಹಶೀಲ್ದಾರ ಕಾರ್ಯಾಲಯದವರೆಗೂ ನಡೆಯಿತು. ನಂತರ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿ ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಮಾತನಾಡಿದರು. ಕಾಗವಾಡ ತಾಲೂಕು ಘೋಷಣೆಯಾಗಿ ಎರಡು ವರ್ಷ ಸಮೀಪಿಸುತ್ತಿದೆ. ಆದರೂ ಸಬ್ ರಿಜಿಸ್ಟರ್, ತಾಲೂಕಾ ಪಂಚಾಯತ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಅಬಕಾರಿ ಇಲಾಖೆ ಇನ್ನು ಹಲವಾರು ಕಚೇರಿಗಳನ್ನ ಪ್ರಾರಂಭಿಸಿಲ್ಲ. ತಾಲೂಕಿಗೆ ಬರುವಂತಹ ಎಲ್ಲ ಕಚೇರಿಗಳು ಆದಷ್ಟು ಬೇಗನೆ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್​ ಪರಿಮಳಾ ದೇಶಪಾಂಡೆ, ಈಗಾಗಲೇ ಕಚೇರಿ ಕಟ್ಟಡಕ್ಕಾಗಿ ಸ್ಥಳ ನಿಗದಿ ಮಾಡಲಾಗಿದೆ. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಈ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದು ತಿಳಿದರು.

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕು ಕೇಂದ್ರವಾಗಿ ಎರಡು ವರ್ಷಗಳೇ ಕಳೆದರೂ ಇನ್ನೂ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಇದರಿಂದ ಕಾಗವಾಡ ತಾಲೂಕಿನ ಸುತ್ತ ಮುತ್ತಲಿನ ಗ್ರಾಮದ ಜನರಿಗೆ ತುಂಬಾ ತೊಂದರೆಗಳಾಗುತ್ತಿವೆ. ಇದ್ಯಾವುದನ್ನು ಗಮನಿಸದ ಸರ್ಕಾರದ ವಿರುದ್ಧ ಜಯ ಕರ್ನಾಟಕ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಹೊಸ ತಾಲೂಕಾಗಿ ಎರಡು ವರ್ಷ ಕಳೆದರೂ ಸರ್ಕಾರಿ ಕಚೇರಿ ಪ್ರಾರಂಭಿಸಿಲ್ಲ: ಜಯ ಕರ್ನಾಟಕ ಸಂಘಟನೆ ಆಕ್ರೋಶ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಚನ್ನಮ್ಮ ವೃತ್ತದಿಂದ ಪ್ರಾರಂಭವಾದ ಪ್ರತಿಭಟನೆ ತಹಶೀಲ್ದಾರ ಕಾರ್ಯಾಲಯದವರೆಗೂ ನಡೆಯಿತು. ನಂತರ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿ ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಮಾತನಾಡಿದರು. ಕಾಗವಾಡ ತಾಲೂಕು ಘೋಷಣೆಯಾಗಿ ಎರಡು ವರ್ಷ ಸಮೀಪಿಸುತ್ತಿದೆ. ಆದರೂ ಸಬ್ ರಿಜಿಸ್ಟರ್, ತಾಲೂಕಾ ಪಂಚಾಯತ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಅಬಕಾರಿ ಇಲಾಖೆ ಇನ್ನು ಹಲವಾರು ಕಚೇರಿಗಳನ್ನ ಪ್ರಾರಂಭಿಸಿಲ್ಲ. ತಾಲೂಕಿಗೆ ಬರುವಂತಹ ಎಲ್ಲ ಕಚೇರಿಗಳು ಆದಷ್ಟು ಬೇಗನೆ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್​ ಪರಿಮಳಾ ದೇಶಪಾಂಡೆ, ಈಗಾಗಲೇ ಕಚೇರಿ ಕಟ್ಟಡಕ್ಕಾಗಿ ಸ್ಥಳ ನಿಗದಿ ಮಾಡಲಾಗಿದೆ. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಈ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದು ತಿಳಿದರು.

Intro:ಹೊಸ ತಾಲೂಕಾಗಿ ವರ್ಷ ಕಳೆದರೂ ಸರ್ಕಾರಿ ಕಛೇರಿ ಪ್ರಾರಂಭಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜಯ ಕರ್ನಾಟಕ ಸಂಘಟನೆ
Body:
ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಾ ಕೇಂದ್ರವಾಗಿ ಎರಡು ವರ್ಷ ಕಳೆದರೂ ಇನ್ನೂ ಯಾವುದೇ ಕಛೇರಿಗಳು ಪ್ರಾರಂಭವಾಗಿಲ್ಲ. ಇದರಿಂದ ಕಾಗವಾಡ ತಾಲೂಕಿನ ಸುತ್ತ ಮುತ್ತಲಿನ ಗ್ರಾಮದ ಜನರಿಗೆ ತುಂಬಾ ತೊಂದರಗಳಾಗುತ್ತಿವೆ. ಆದರೆ, ಇದಾವುದನ್ನು ಗಮನಿಸದ ಸರಕಾರದ ವಿರುದ್ಧ ಜಯ ಕರ್ನಾಟಕ ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಚನ್ನಮ್ಮ ವೃತ್ತ ದಿಂದ ಪ್ರಾರಂಭವಾದ ಪ್ರತಿಭಟನೆ ತಹಶೀಲ್ದಾರ ಕಾರ್ಯಾಲಯದವರೆಗೂ ನಡೆಯಿತು. ನಂತರ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿ ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಮಾತನಾಡಿ ಕಾಗವಾಡ ತಾಲೂಕಾ ಘೋಷಣೆಯಾಗಿ ಎರಡು ವರ್ಷ ಸಮೀಪಿಸುತ್ತಿದೆ .ಆದರೂ ಸಬ್ ರಿಜಿಸ್ಟರ್, ತಾಲೂಕಾ ಪಂಚಾಯತ್, ಪಿಡಬ್ಲೂಡಿ, ಅರಣ್ಯ ಇಲಾಖೆ,ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಅಬಕಾರಿ ಇಲಾಖೆ ಇನ್ನು ಹಲವಾರು ಕಛೇರಿಗಳನ್ನ ಪ್ರಾರಂಭಿಸಿಲ್ಲ. ತಾಲೂಕಿಗೆ ಬರುವಂತಹ ಎಲ್ಲ ಕಛೇರಿಗಳು ಆದಷ್ಟು ಬೇಗನೆ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಲಾಗುವದು ಎಂದು ಹೇಳಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಪರಿಮಳಾ ದೇಶಪಾಂಡೆ ಈಗಾಗಲೇ ಕಛೇರಿ ಕಟ್ಟಡಕ್ಕಾಗಿ ಸ್ಥಳ ನಿಗದಿ ಮಾಡಲಾಗಿದೆ. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಈ ಸಮಸ್ಯೆಯನ್ನು ನಿವಾರಿಸಲಾಗುದು ಎಂದು ಹೇಳಿದರು



Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.