ETV Bharat / state

ಪೊಲೀಸರಿಂದ ಬೀದಿ ಬದಿ ವ್ಯಾಪಾರಸ್ಥರಿಗೆ ಕಿರುಕುಳ ಆರೋಪ: ಪ್ರತಿಭಟನೆ - ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪ್ರತಿಭಟನೆ

ಕೊರೊನಾ ವೈರಸ್ ಹಿನ್ನೆಲೆ ತರಕಾರಿ, ಹಣ್ಣು ವ್ಯಾಪಾರಸ್ಥರು ಜೀವನ ನಡೆಸುವುದೇ ಕಷ್ಟವಾಗಿರುವಂತಹ ಈ ಸಂದರ್ಭದಲ್ಲಿ ಪೊಲೀಸರು ಅವರ ವ್ಯಾಪಾರಕ್ಕೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಬೀದಿ ಬದಿಯ ವ್ಯಾಪಾರಸ್ಥರು ಆರೋಪಿಸಿದ್ದಾರೆ.

Harassment of street-side traders by police at belgavi
ಪೊಲೀಸರಿಂದ ಬೀದಿ ಬದಿ ವ್ಯಾಪರಸ್ಥರಿಗೆ ಕಿರುಕುಳ ಆರೋಪ
author img

By

Published : Jun 13, 2020, 1:33 AM IST

ಗೋಕಾಕ್​: ತರಕಾರಿ, ಹಣ್ಣು ಮಾರಾಟಗಾರರಿಗೆ ನಗರದ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀದಿ ಬದಿಯ ವ್ಯಾಪಾರಸ್ಥರು ತಾಲೂಕಿನ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಪುರಸಭೆ ಕಚೇರಿಗೆ ಆಗಮಿಸಿದ ಬೀದಿ ಬದಿಯ ವ್ಯಾಪಾರಸ್ಥರು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಎದುರು ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು

ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆ ಬೀದಿ ಬದಿಯ ವ್ಯಾಪಾರಸ್ಥರು ಜೀವನ ನಡೆಸುವುದೇ ಕಷ್ಟವಾಗಿರುವಂತಹ ಈ ಸಂದರ್ಭದಲ್ಲಿ ಪೊಲೀಸರು ಅವರ ವ್ಯಾಪಾರಕ್ಕೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಬೀದಿ ಬದಿಯ ವ್ಯಾಪಾರಸ್ಥರಿಗೆ ತೊಂದರೆ ನೀಡದಂತೆ ಜಿಲ್ಲಾಡಳಿತ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.

ಈ ನಡುವೆ ವ್ಯಾಪಾರಸ್ಥರು ಸಾಮಾಜಿಕ‌ ಅಂತರ ಮರೆತು ಗುಂಪು ಗುಂಪಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಕಂಡುಬಂತು.

ಗೋಕಾಕ್​: ತರಕಾರಿ, ಹಣ್ಣು ಮಾರಾಟಗಾರರಿಗೆ ನಗರದ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀದಿ ಬದಿಯ ವ್ಯಾಪಾರಸ್ಥರು ತಾಲೂಕಿನ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಪುರಸಭೆ ಕಚೇರಿಗೆ ಆಗಮಿಸಿದ ಬೀದಿ ಬದಿಯ ವ್ಯಾಪಾರಸ್ಥರು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಎದುರು ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು

ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆ ಬೀದಿ ಬದಿಯ ವ್ಯಾಪಾರಸ್ಥರು ಜೀವನ ನಡೆಸುವುದೇ ಕಷ್ಟವಾಗಿರುವಂತಹ ಈ ಸಂದರ್ಭದಲ್ಲಿ ಪೊಲೀಸರು ಅವರ ವ್ಯಾಪಾರಕ್ಕೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಬೀದಿ ಬದಿಯ ವ್ಯಾಪಾರಸ್ಥರಿಗೆ ತೊಂದರೆ ನೀಡದಂತೆ ಜಿಲ್ಲಾಡಳಿತ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.

ಈ ನಡುವೆ ವ್ಯಾಪಾರಸ್ಥರು ಸಾಮಾಜಿಕ‌ ಅಂತರ ಮರೆತು ಗುಂಪು ಗುಂಪಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಕಂಡುಬಂತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.