ETV Bharat / state

ಅಥಣಿಯಲ್ಲಿ ನಿರಂತರ ಮಳೆ... ಜನರಲ್ಲಿ ಹೆಚ್ಚಿದ ಕೊರೊನಾ ಆತಂಕ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನರಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ.

author img

By

Published : Jul 16, 2020, 5:09 PM IST

heavy rain in athani taluk
ಅಥಣಿಯಲ್ಲಿ ನಿರಂತರ ಮಳೆ...ಜನರಲ್ಲಿ ಹೆಚ್ಚಿದ ಕೊರೊನಾ ಆತಂಕ

ಅಥಣಿ (ಬೆಳಗಾವಿ): ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಜನರಲ್ಲಿ ಕೊರೊನಾ ಆತಂಕ ಶುರುವಾಗಿದೆ.

ಅಥಣಿಯಲ್ಲಿ ನಿರಂತರ ಮಳೆ... ಜನರಲ್ಲಿ ಹೆಚ್ಚಿದ ಕೊರೊನಾ ಆತಂಕ

ಕೊರೊನಾ ವೈರಸ್​ ಹಿನ್ನೆಲೆ ಗ್ರಾಮೀಣ ಭಾಗದ ಜನರು ಮಳೆಯಿಂದಾಗಿ ಶೀತ, ಜ್ವರ ಎಂದು ತಾಲೂಕು ಆಸ್ಪತ್ರೆಗೆ ಹೋದರೆ ಪರೀಕ್ಷೆ ನಡೆಸಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇದಾರಿಂದಾಗಿ ತಾಲೂಕಿನ ಜನರು ಆತಂಕಕ್ಕೀಡಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕಿನ ಸ್ಥಳೀಯರೊಬ್ಬರು, ಮಳೆಗಾಲದಲ್ಲಿ ಗ್ರಾಮೀಣ ಭಾಗದ ಜನರಲ್ಲಿ ಸಣ್ಣಪುಟ್ಟ ರೋಗಗಳು ಕಾಣಿಸಿಕೊಳ್ಳುವುದು ಸಹಜ. ಹೀಗಾಗಿ ಸರ್ಕಾರ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಜನರ ತಪಾಸಣೆಗೆಂದು ಸರ್ಕಾರಿ ವೈದ್ಯರನ್ನ ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ.

ಅಥಣಿ (ಬೆಳಗಾವಿ): ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಜನರಲ್ಲಿ ಕೊರೊನಾ ಆತಂಕ ಶುರುವಾಗಿದೆ.

ಅಥಣಿಯಲ್ಲಿ ನಿರಂತರ ಮಳೆ... ಜನರಲ್ಲಿ ಹೆಚ್ಚಿದ ಕೊರೊನಾ ಆತಂಕ

ಕೊರೊನಾ ವೈರಸ್​ ಹಿನ್ನೆಲೆ ಗ್ರಾಮೀಣ ಭಾಗದ ಜನರು ಮಳೆಯಿಂದಾಗಿ ಶೀತ, ಜ್ವರ ಎಂದು ತಾಲೂಕು ಆಸ್ಪತ್ರೆಗೆ ಹೋದರೆ ಪರೀಕ್ಷೆ ನಡೆಸಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇದಾರಿಂದಾಗಿ ತಾಲೂಕಿನ ಜನರು ಆತಂಕಕ್ಕೀಡಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕಿನ ಸ್ಥಳೀಯರೊಬ್ಬರು, ಮಳೆಗಾಲದಲ್ಲಿ ಗ್ರಾಮೀಣ ಭಾಗದ ಜನರಲ್ಲಿ ಸಣ್ಣಪುಟ್ಟ ರೋಗಗಳು ಕಾಣಿಸಿಕೊಳ್ಳುವುದು ಸಹಜ. ಹೀಗಾಗಿ ಸರ್ಕಾರ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಜನರ ತಪಾಸಣೆಗೆಂದು ಸರ್ಕಾರಿ ವೈದ್ಯರನ್ನ ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.