ETV Bharat / state

ಕೃಷ್ಣಾ ನದಿಗೆ ಅಧಿಕ ನೀರು ಬಿಡುಗಡೆ ಸಾಧ್ಯತೆ: ಬೆಳಗಾವಿಯ ಕೆಲ ಗ್ರಾಮಗಳು ಖಾಲಿ ಖಾಲಿ!

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಚಿಕ್ಕೋಡಿ ಉಪ ವಿಭಾಗದ ಕೆಲ ತಾಲೂಕುಗಳಲ್ಲಿನ ನದಿ ತೀರದ ಗ್ರಾಮಸ್ಥರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ.

author img

By

Published : Aug 8, 2019, 9:04 AM IST

Updated : Aug 8, 2019, 1:08 PM IST

chikkodi district ,ಚಿಕ್ಕೋಡಿ

ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಚಿಕ್ಕೋಡಿ ಉಪ ವಿಭಾಗದ ಕೆಲ ತಾಲೂಕಿನಲ್ಲಿರುವ ನದಿ ತೀರದ ಗ್ರಾಮಸ್ಥರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ.

ಗ್ರಾಮಗಳನ್ನು ಖಾಲಿ ಮಾಡುತ್ತಿರುವ ಗ್ರಾಮಸ್ಥರು

ಮಹಾರಾಷ್ಟ್ರ ಭಾಗದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಾಗೇ ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ ಮುಖಾಂತರ ಕೃಷ್ಣಾ ನದಿಗೆ ನೀರು ಬಿಡುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗದ ಕೆಲ ತಾಲೂಕುಗಳ ನದಿ ತೀರದ ಗ್ರಾಮಸ್ಥರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ.

ಜಿಲ್ಲಾಡಳಿತ ಹೈ ಅಲರ್ಟ್​ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಕೆಲವರು ಪರಿಹಾರ ಕೇಂದ್ರದತ್ತ ತೆರಳಿದರೆ, ಇನ್ನು ಕೆಲವರು ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ವಾಹನಗಳಲ್ಲಿ ತಮ್ಮ ದಿನ ಬಳಕೆ ಸಾಮಗ್ರಿಗಳನ್ನು, ದನಕರುಗಳನ್ನು ತೆಗೆದುಕೊಂಡು ಗ್ರಾಮಸ್ಥರು ಊರು ಬಿಡುತ್ತಿದ್ದಾರೆ.

ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಚಿಕ್ಕೋಡಿ ಉಪ ವಿಭಾಗದ ಕೆಲ ತಾಲೂಕಿನಲ್ಲಿರುವ ನದಿ ತೀರದ ಗ್ರಾಮಸ್ಥರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ.

ಗ್ರಾಮಗಳನ್ನು ಖಾಲಿ ಮಾಡುತ್ತಿರುವ ಗ್ರಾಮಸ್ಥರು

ಮಹಾರಾಷ್ಟ್ರ ಭಾಗದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಾಗೇ ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ ಮುಖಾಂತರ ಕೃಷ್ಣಾ ನದಿಗೆ ನೀರು ಬಿಡುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗದ ಕೆಲ ತಾಲೂಕುಗಳ ನದಿ ತೀರದ ಗ್ರಾಮಸ್ಥರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ.

ಜಿಲ್ಲಾಡಳಿತ ಹೈ ಅಲರ್ಟ್​ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಕೆಲವರು ಪರಿಹಾರ ಕೇಂದ್ರದತ್ತ ತೆರಳಿದರೆ, ಇನ್ನು ಕೆಲವರು ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ವಾಹನಗಳಲ್ಲಿ ತಮ್ಮ ದಿನ ಬಳಕೆ ಸಾಮಗ್ರಿಗಳನ್ನು, ದನಕರುಗಳನ್ನು ತೆಗೆದುಕೊಂಡು ಗ್ರಾಮಸ್ಥರು ಊರು ಬಿಡುತ್ತಿದ್ದಾರೆ.

Intro:ನದಿ ತೀರದ ಗ್ರಾಮಗಳೆಲ್ಲವು ಖಾಲಿ ಖಾಲಿ : ಜಿಲ್ಲಾಡಳಿತ ಹೈ ಅಲರ್ಟ ಘೋಷಣೆ
Body:
ಚಿಕ್ಕೋಡಿ :

ನಾಳೆ ಇನ್ನು ಹೆಚ್ವಿನ ಪ್ರಮಾಣದಲ್ಲಿ ನೀರು ಬರುವ ಸಾಧ್ಯತೆ ಹಿನ್ನಲೆಯಲ್ಲಿ ಇಡೀ ಗ್ರಾಮಕ್ಕೆ ಗ್ರಾಮವನ್ನೆ ಖಾಲಿ ಮಾಡುತ್ತಿರುವ ಚಿಕ್ಕೋಡಿ ಉಪವಿಭಾಗದ ಕೆಲ ತಾಲೂಕಿನ ನದಿ ತೀರದ ಗ್ರಾಮಸ್ಥರು

ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿರುವ ಗ್ರಾಮಸ್ಥರು. ಕೆಲವರು ಗಂಜಿ ಕೇಂದ್ರದತ್ತ ತೆರಳಿದರೆ ಇನ್ನು ಕೆಲವರು ಸಂಭದಿಕರ ಮನೆಗೆ ತೆರಳುತ್ತಿದ್ದಾರೆ, ಜಿಲ್ಲಾಡಳಿತ ಹೈ ಅಲರ್ಟ ಘೋಷಣೆ ಹಿನ್ನಲೆ ಗ್ರಾಮ ಖಾಲಿ ಮಾಡುತ್ತಿರುವ ಜನರು ತೀವ್ರ ಸಂಕಷ್ಟ ಅನುಭವಿಸುವ ಪ್ರಸಂಗ ನದಿ ತೀರದ ಗ್ರಾಮಸ್ಥರಿಗೆ ಬಂದೊದಗಿದೆ.

ಸುಮಾರು ನೂರಕ್ಕೂ ಹೆಚ್ಚು ವಾಹನಗಳನ್ನು ಪ್ರತಿಯೊಂದು ಗ್ರಾಮದಲ್ಲೂ ನೋಡಬಹುದು. ತಮ್ಮ ದಿನ ಬಳಕೆ ಸಾಮಗ್ರಿಗಳನ್ನು ದನಕರುಗಳನ್ನು ತೆಗೆದುಕೊಂಡು ಗ್ರಾಮಸ್ಥರು ಊರು ಬಿಡುತ್ತಿದ್ದಾರೆ. ಗಾಡಿ ಬಾಡಿಗೆ ಮಾಡಿಕೊಂಡು ತಮ್ಮ ಸಂಭಂಧಿಕರ ಮನೆಗೆ ಇಲ್ಲವೇ ಗಂಜಿ ಕೇಂದ್ರದತ್ತ ಹೊರಟ ನದಿ ತೀರದ ಗ್ರಾಮಸ್ಥರು.

ಇನ್ನೇನು‌ ಮತ್ತೇ ನಾಳೆ ಕೊಯ್ನಾ ಜಲಾಶಯದಿಂದ ನೀರು ಬಿಡುವ ಸಾಧ್ಯತೆ ಇದ್ದು ಮತ್ತೆ ಸಂಪರ್ಕ ಸೇತುವೆಗಳು ಮುಳುಗಡೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಗ್ರಾಮಗಳನ್ನು ಖಾಲಿ‌ಮಾಡುತ್ತಿರುವ ನದಿ ತೀರದ ಗ್ರಾಮಸ್ಥರು. ಅವರ ಕಷ್ಟ ಕಾರ್ಪಣ್ಯ ನೋಡಿಯಾದರು ಮಳೆರಾಯ ಮಳೆ ನಿಲ್ಲಿಸಲಿ ಎನ್ನುವುದು ಜನರ ಬೇಡಿಕೆಯಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
Last Updated : Aug 8, 2019, 1:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.