ETV Bharat / state

‘ಮಹಾ’ ಮಳೆಗೆ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಪ್ರವಾಹ ಭೀತಿ - Alamatti Reservoir

ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳಗಾವಿಯ ಸುತ್ತಲಿನ ಹವಲು ನದಿಗಳು ತುಂಬಿ ಹರಿಯುತ್ತಿವೆ. ಜಲಾಶಯಗಳು ಈಗಾಗಲೇ ತುಂಬುವ ಹಂತ ತಲುಪಿದ್ದು, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

Krishan river flow ricing in Heavy rain area
ರಾಜ್ಯದಾದ್ಯಂತ ‘ಮಹಾ’ ಮಳೆ: ಕೃಷ್ಣಾ ನದಿ ಒಳಹರಿವು ಹೆಚ್ಚಳ
author img

By

Published : Aug 17, 2020, 12:11 PM IST

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ‌ ನದಿ 4 ಅಡಿ ಹಾಗೂ ದೂಧಗಂಗಾ ನದಿ ನೀರಿನ ಮಟ್ಟ 3 ಅಡಿವರೆಗೆ ಏರಿಕೆಯಾಗಿದೆ‌.

ಕೃಷ್ಣಾ ನದಿಗೆ ಬಿಟ್ಟಿರುವ ನೀರು 1,40,000 ಕ್ಯೂಸೆಕ್‌ಗಿಂತ ಅಧಿಕವಿದೆ ಎಂದು ಚಿಕ್ಕೋಡಿ ತಹಶೀಲ್ದಾರ್​ ಸುಭಾಷ್​​​ ಸಂಪಗಾಂವಿ ಈಟಿವಿ ಭಾರತ್​​​ಗೆ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1,20,000 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 20,416 ಕ್ಯೂಸೆಕ್ ನೀರು ಸೇರಿ ಒಟ್ಟು 1,40,000 ಕ್ಯೂಸೆಕ್​​​ ನೀರು ಕೃಷ್ಣಾಗೆ ಹರಿದು ಬರುತ್ತಿದೆ.

ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ

ಮಹಾರಾಷ್ಟ್ರದ ಕೊಯ್ನಾ-130 ಮಿ.ಮೀ., ನವಜಾ-183 ಮಿ.ಮೀ., ಮಹಾಬಲೇಶ್ವರ-198 ಮಿ.ಮೀ., ವಾರಣಾ-88 ಮಿ.ಮೀ., ಕಾಳಮ್ಮವಾಡಿ -103 ಮಿ.ಮೀ., ರಾಧಾನಗರಿ-141 ಮಿ.ಮೀ., ಪಾಟಗಾಂವ -233 ಮಿ.ಮೀ. ಮಳೆಯಾಗಿರುವುದಾಗಿ ವರದಿಯಾಗಿದೆ.

ಚಿಕ್ಕೋಡಿಯಲ್ಲಿ - 27.1 ಮಿ.ಮೀ., ಅಂಕಲಿ -10.6 ಮಿ.ಮೀ., ನಾಗರಮುನ್ನೋಳಿ 14.6 ಮಿ.ಮೀ. ಹಾಗೂ ಸದಲಗಾ - 17.6 ಮಿ.ಮೀ. ಮಳೆಯಾಗಿದೆ.

ಸದ್ಯ ಕೊಯ್ನಾ ಜಲಾಶಯ ಶೇ. 88ರಷ್ಟು, ವಾರಣಾ ಜಲಾಶಯ ಶೇ. 92, ರಾಧಾನಗರಿ ಜಲಾಶಯ ಶೇ. 100, ಕಣೇರ ಜಲಾಶಯ 93, ಧೂಮ ಜಲಾಶಯ ಶೇ. 85, ಪಾಟಗಾಂವ ಶೇ. 100, ಧೂದಗಂಗಾ ಶೇ. 93ರಷ್ಟು ತುಂಬಿವೆ. ಹಿಪ್ಪರಗಿ ಬ್ಯಾರೇಜ್‌ನಿಂದ 1,19,000 ಹಾಗೂ ಆಲಮಟ್ಟಿ ಜಲಾಶಯದಿಂದ 2,50,000 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ‌ ನದಿ 4 ಅಡಿ ಹಾಗೂ ದೂಧಗಂಗಾ ನದಿ ನೀರಿನ ಮಟ್ಟ 3 ಅಡಿವರೆಗೆ ಏರಿಕೆಯಾಗಿದೆ‌.

ಕೃಷ್ಣಾ ನದಿಗೆ ಬಿಟ್ಟಿರುವ ನೀರು 1,40,000 ಕ್ಯೂಸೆಕ್‌ಗಿಂತ ಅಧಿಕವಿದೆ ಎಂದು ಚಿಕ್ಕೋಡಿ ತಹಶೀಲ್ದಾರ್​ ಸುಭಾಷ್​​​ ಸಂಪಗಾಂವಿ ಈಟಿವಿ ಭಾರತ್​​​ಗೆ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1,20,000 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 20,416 ಕ್ಯೂಸೆಕ್ ನೀರು ಸೇರಿ ಒಟ್ಟು 1,40,000 ಕ್ಯೂಸೆಕ್​​​ ನೀರು ಕೃಷ್ಣಾಗೆ ಹರಿದು ಬರುತ್ತಿದೆ.

ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ

ಮಹಾರಾಷ್ಟ್ರದ ಕೊಯ್ನಾ-130 ಮಿ.ಮೀ., ನವಜಾ-183 ಮಿ.ಮೀ., ಮಹಾಬಲೇಶ್ವರ-198 ಮಿ.ಮೀ., ವಾರಣಾ-88 ಮಿ.ಮೀ., ಕಾಳಮ್ಮವಾಡಿ -103 ಮಿ.ಮೀ., ರಾಧಾನಗರಿ-141 ಮಿ.ಮೀ., ಪಾಟಗಾಂವ -233 ಮಿ.ಮೀ. ಮಳೆಯಾಗಿರುವುದಾಗಿ ವರದಿಯಾಗಿದೆ.

ಚಿಕ್ಕೋಡಿಯಲ್ಲಿ - 27.1 ಮಿ.ಮೀ., ಅಂಕಲಿ -10.6 ಮಿ.ಮೀ., ನಾಗರಮುನ್ನೋಳಿ 14.6 ಮಿ.ಮೀ. ಹಾಗೂ ಸದಲಗಾ - 17.6 ಮಿ.ಮೀ. ಮಳೆಯಾಗಿದೆ.

ಸದ್ಯ ಕೊಯ್ನಾ ಜಲಾಶಯ ಶೇ. 88ರಷ್ಟು, ವಾರಣಾ ಜಲಾಶಯ ಶೇ. 92, ರಾಧಾನಗರಿ ಜಲಾಶಯ ಶೇ. 100, ಕಣೇರ ಜಲಾಶಯ 93, ಧೂಮ ಜಲಾಶಯ ಶೇ. 85, ಪಾಟಗಾಂವ ಶೇ. 100, ಧೂದಗಂಗಾ ಶೇ. 93ರಷ್ಟು ತುಂಬಿವೆ. ಹಿಪ್ಪರಗಿ ಬ್ಯಾರೇಜ್‌ನಿಂದ 1,19,000 ಹಾಗೂ ಆಲಮಟ್ಟಿ ಜಲಾಶಯದಿಂದ 2,50,000 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.