ETV Bharat / state

ಒಮಿಕ್ರೋನ್ ರೂಪಾಂತರಿ ಕೋವಿಡ್ ಆತಂಕ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ‌ ಹೈ ಅಲರ್ಟ್

author img

By

Published : Nov 27, 2021, 5:00 PM IST

Updated : Nov 27, 2021, 5:10 PM IST

ಕೊರೊನಾ ಹೊಸ ರೂಪಾಂತರಿ ಒಮಿಕ್ರೋನ್ ವೈರಸ್​​ ಹರಡುವ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ನಿಗಾ ವಹಿಸಲಾಗಿದೆ.

High alert on Karnataka-Maharashtra border
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ‌ ಹೈ ಅಲರ್ಟ್

ಬೆಳಗಾವಿ/ಬೆಂಗಳೂರು: ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್​​​ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ‌ ಹೈ ಅಲರ್ಟ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್​ನಲ್ಲಿ‌ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ ಹಿಂದಿರುಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದೆರಡು ವರ್ಷಗಳಿಂದ ಕೊರೊನಾದಿಂದ ಇಡೀ ದೇಶ ನಲುಗಿದ್ದು, ರೂಪಾಂತರಿ ವೈರಸ್​​ ರಾಜ್ಯಕ್ಕೆ ಬರದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ನಿಗಾ:

ಒಮಿಕ್ರಾನ್ ವೈರಸ್ ಕಾಣಿಸಿಕೊಂಡ ಸಂಬಂಧ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೇಶ-ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ವಿದೇಶದಿಂದ ಬರುವ ಪ್ರಯಾಣಿಕರನ್ನು ಆರೋಗ್ಯ ಸಿಬ್ಬಂದಿ ಸ್ಕ್ರೀನಿಂಗ್ ಮಾಡುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರ ಹೊಸ ಗೈಡ್​​​ಲೈನ್ಸ್​​ ಜಾರಿಗೊಳಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಇಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್​ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.. ಅತ್ಯಾಚಾರವೆಸಗಿ ಕೊಲೆ ಶಂಕೆ..

ಬೆಳಗಾವಿ/ಬೆಂಗಳೂರು: ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್​​​ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ‌ ಹೈ ಅಲರ್ಟ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್​ನಲ್ಲಿ‌ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ ಹಿಂದಿರುಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದೆರಡು ವರ್ಷಗಳಿಂದ ಕೊರೊನಾದಿಂದ ಇಡೀ ದೇಶ ನಲುಗಿದ್ದು, ರೂಪಾಂತರಿ ವೈರಸ್​​ ರಾಜ್ಯಕ್ಕೆ ಬರದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ನಿಗಾ:

ಒಮಿಕ್ರಾನ್ ವೈರಸ್ ಕಾಣಿಸಿಕೊಂಡ ಸಂಬಂಧ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೇಶ-ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ವಿದೇಶದಿಂದ ಬರುವ ಪ್ರಯಾಣಿಕರನ್ನು ಆರೋಗ್ಯ ಸಿಬ್ಬಂದಿ ಸ್ಕ್ರೀನಿಂಗ್ ಮಾಡುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರ ಹೊಸ ಗೈಡ್​​​ಲೈನ್ಸ್​​ ಜಾರಿಗೊಳಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಇಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್​ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.. ಅತ್ಯಾಚಾರವೆಸಗಿ ಕೊಲೆ ಶಂಕೆ..

Last Updated : Nov 27, 2021, 5:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.