ಬೆಳಗಾವಿ: ಬೆಳಗಾವಿ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಿದ್ದು, ಜ್ಯೋತಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ನಾಯಕನನ್ನು ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಕೊಡದ ಪ್ರಾದೇಶಿಕ ಆಯುಕ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಾಜಿ ಸಚಿವ ಎ.ಬಿ.ಪಾಟೀಲ್, ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್ ನಡುವೆ ಮಾತಿನ ಚಕಮಕಿ ನಡೆದಿದೆ. ನೀವು ಯಾರ್ ಬೇಕಾದ್ರೂ ಆಗಿ, ನಾನು ಒಳಗೆ ಬಿಡಲ್ಲ ಎಂದು ಬಿಸ್ವಾಸ್ ಹೇಳಿದ್ದಕ್ಕೆ ಗಲಾಟೆ ನಡೆದಿದೆ. ನಂತರ ಎ.ಬಿ ಪಾಟೀಲ್ ಅವರನ್ನು ಜಾರಕಿಹೊಳಿ ಹೊರಗೆ ಕರೆದುಕೊಂಡು ಬಂದಿದ್ದಾರೆ.
ಗೇಟ್ನಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದ ಪ್ರಕಾಶ ಹುಕ್ಕೇರಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಶಾಸಕರು, ಕಾರ್ಯಕರ್ತರ ಪ್ರಯತ್ನದ ಫಲವಾಗಿ ಎರಡು ಗೆಲುವು ಸಾಧಿಸಿದ್ದೇವೆ, ಬೆಳಗಾವಿ ಜಿಲ್ಲೆಯಲ್ಲಿ ಯಾವ ಗಾಳಿ ಬೀಸಿದೆ ಅಂತಾ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹುಕ್ಕೇರಿ ಹೇಳಿದ್ದಾರೆ.