ETV Bharat / state

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 91,734 ಮನೆಗಳ ನಿರ್ಮಾಣ: ಶಾಸಕ ಮಹೇಶ್ ಕುಮಟಳ್ಳಿ

author img

By

Published : Jul 19, 2020, 12:43 PM IST

ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆ ನಿರ್ಮಾಣ ಯೋಜನೆಯ 83,911 ಕೋಟಿ ರೂ. ವೆಚ್ಚದ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು, ಶೇ 30 ರಷ್ಟು ಕೆಲಸ ಪೂರ್ಣಗೊಂಡಿದೆ. ಇನ್ನೂ 503.11 ಕೊಟಿ ರೂ. ಅನುದಾನ ಬಿಡುಗಡೆ ಆಗಲು ಬಾಕಿಯಿದೆ. ಅದು ಬಿಡುಗಡೆಯಾದರೆ ಕಾಮಗಾರಿ ಮುಂದುವರೆಸಲಾಗುವುದು. ಯೋಜನೆಯಲ್ಲಿ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಲಾಗುವುದು ಎಂದು ಮಂಡಳಿಯ ಅಧ್ಯಕ್ಷ ಮಹೇಶ್​ ಕುಮಟಳ್ಳಿ ತಿಳಿಸಿದ್ದಾರೆ.

Mahesh Kumathalli Prsident Slum Development Board
ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ

ಅಥಣಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಶೀಘ್ರದಲ್ಲಿ 91,734 ಮನೆ ನಿರ್ಮಾಣ ಮಾಡಲಾಗುವುದು ಹಾಗೂ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಲಾಗುವುದು ಎಂದು ನಿಗಮದ ಅಧ್ಯಕ್ಷ ಶಾಸಕ ಮಹೇಶ್​ ಕುಮಟಳ್ಳಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯನಿರತ ಪತ್ರಕರ್ತರೊಂದಿಗಿನ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ಜೂನ್‌ 3 ರಂದು ಅಧಿಕಾರ ವಹಿಸಿಕೊಂಡು ಹಲವು ಬಾರಿ ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡಿದ್ದೇನೆ. ಶೀಘ್ರದಲ್ಲಿ ತಲಾ 5.5 ಲಕ್ಷ ರೂ. ವೆಚ್ಚದ 91,734 ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈ ಯೋಜನೆಗೆ 6,500 ಕೋಟಿ ರೂ ವೆಚ್ಚ ತಗಲುತ್ತದೆ. ಇದರಲ್ಲಿ ಕೇಂದ್ರದಿಂದ 1.5 ಲಕ್ಷ ರೂ. ರಾಜ್ಯದಿಂದ 2 ಲಕ್ಷ ರೂ. ಅನುದಾನ ಪಾಲುದಾರಿಕೆಯಿದೆ. ಒಟ್ಟು 350 ಚದರ್​ ಮೀ. ಮನೆ ನಿರ್ಮಾಣ ಮಾಡುವ ಈ ಯೋಜನೆ ಸುಮಾರು ಎರಡು ವರ್ಷಗಳಿಂದ ಬಾಕಿ ಇದ್ದು, ಇದೀಗ ಮಂತ್ರಿ ಮಂಡಲದ ಅನುಮತಿ ಸಿಕ್ಕಿರುವುದು ಸಂತಸ ತಂದಿದೆ. ಕೇಂದ್ರದಿಂದ ಸುಮಾರು 500 ರಿಂದ 600 ಕೋಟಿ ರೂ. ಅನುದಾನ ಜಮಾ ಆಗಲಿದೆ. ನನ್ನ ಈ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ವಿ. ಸೋಮಣ್ಣ, ಉಪಮುಖ್ಯಮಂತ್ರಿ ಗೊವಿಂದ ಕಾರಜೋಳ, ಸಚಿವರಾದ ರಮೇಶ್​ ಜಾರಕಿಹೊಳಿ, ಕೆ.ಎಸ್ ಈಶ್ವರಪ್ಪ ಎಲ್ಲರೂ ತುಂಬಾ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ

ಈಗಾಗಲೇ 83,911 ಕೋಟಿ ರೂ ವೆಚ್ಚದ ಕಾಮಗಾರಿ ಪ್ರಾರಂಭವಾಗಿದ್ದು, ಶೇ.30 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 503.11 ಕೊಟಿ ರೂ. ಅನುದಾನ ಬಿಡುಗಡೆ ಆಗಲು ಬಾಕಿಯಿದೆ. ಅದು ಬಿಡುಗಡೆಯಾದರೆ ಕಾಮಗಾರಿ ಮುಂದುವರೆಸಲಾಗುವುದು. ಯೋಜನೆಯಲ್ಲಿ ಉತ್ತರ ಕರ್ನಾಟಕ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಅಥಣಿಯಲ್ಲಿ 1,500 ಮನೆ ನಿರ್ಮಾಣ:

ಒಟ್ಟು 91,734 ಮನೆಗಳ ಪೈಕಿ ಅಥಣಿಯಲ್ಲಿ ಸುಮಾರು1,500 ಮನೆ ನಿರ್ಮಾಣ ಮಾಡಲಾಗುವುದು. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಪಟ್ಟಣ ಪಂಚಾಯತ್​ ಮತ್ತು ಪುರಸಭೆಗಳಲ್ಲದ ಬೆಳಗಾವಿ ಗ್ರಾಮೀಣ ಹಾಗೂ ಯಮಕನಮರಡಿ ಕ್ಷೇತ್ರಗಳನ್ನು ಹೊರತುಪಡಿಸಿ, ಇನ್ನುಳಿದ 16 ಕ್ಷೇತ್ರಗಳಲ್ಲಿ ಮಂಡಳಿಯಿಂದ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಅಥಣಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಶೀಘ್ರದಲ್ಲಿ 91,734 ಮನೆ ನಿರ್ಮಾಣ ಮಾಡಲಾಗುವುದು ಹಾಗೂ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಲಾಗುವುದು ಎಂದು ನಿಗಮದ ಅಧ್ಯಕ್ಷ ಶಾಸಕ ಮಹೇಶ್​ ಕುಮಟಳ್ಳಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯನಿರತ ಪತ್ರಕರ್ತರೊಂದಿಗಿನ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ಜೂನ್‌ 3 ರಂದು ಅಧಿಕಾರ ವಹಿಸಿಕೊಂಡು ಹಲವು ಬಾರಿ ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡಿದ್ದೇನೆ. ಶೀಘ್ರದಲ್ಲಿ ತಲಾ 5.5 ಲಕ್ಷ ರೂ. ವೆಚ್ಚದ 91,734 ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈ ಯೋಜನೆಗೆ 6,500 ಕೋಟಿ ರೂ ವೆಚ್ಚ ತಗಲುತ್ತದೆ. ಇದರಲ್ಲಿ ಕೇಂದ್ರದಿಂದ 1.5 ಲಕ್ಷ ರೂ. ರಾಜ್ಯದಿಂದ 2 ಲಕ್ಷ ರೂ. ಅನುದಾನ ಪಾಲುದಾರಿಕೆಯಿದೆ. ಒಟ್ಟು 350 ಚದರ್​ ಮೀ. ಮನೆ ನಿರ್ಮಾಣ ಮಾಡುವ ಈ ಯೋಜನೆ ಸುಮಾರು ಎರಡು ವರ್ಷಗಳಿಂದ ಬಾಕಿ ಇದ್ದು, ಇದೀಗ ಮಂತ್ರಿ ಮಂಡಲದ ಅನುಮತಿ ಸಿಕ್ಕಿರುವುದು ಸಂತಸ ತಂದಿದೆ. ಕೇಂದ್ರದಿಂದ ಸುಮಾರು 500 ರಿಂದ 600 ಕೋಟಿ ರೂ. ಅನುದಾನ ಜಮಾ ಆಗಲಿದೆ. ನನ್ನ ಈ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ವಿ. ಸೋಮಣ್ಣ, ಉಪಮುಖ್ಯಮಂತ್ರಿ ಗೊವಿಂದ ಕಾರಜೋಳ, ಸಚಿವರಾದ ರಮೇಶ್​ ಜಾರಕಿಹೊಳಿ, ಕೆ.ಎಸ್ ಈಶ್ವರಪ್ಪ ಎಲ್ಲರೂ ತುಂಬಾ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ

ಈಗಾಗಲೇ 83,911 ಕೋಟಿ ರೂ ವೆಚ್ಚದ ಕಾಮಗಾರಿ ಪ್ರಾರಂಭವಾಗಿದ್ದು, ಶೇ.30 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ 503.11 ಕೊಟಿ ರೂ. ಅನುದಾನ ಬಿಡುಗಡೆ ಆಗಲು ಬಾಕಿಯಿದೆ. ಅದು ಬಿಡುಗಡೆಯಾದರೆ ಕಾಮಗಾರಿ ಮುಂದುವರೆಸಲಾಗುವುದು. ಯೋಜನೆಯಲ್ಲಿ ಉತ್ತರ ಕರ್ನಾಟಕ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಅಥಣಿಯಲ್ಲಿ 1,500 ಮನೆ ನಿರ್ಮಾಣ:

ಒಟ್ಟು 91,734 ಮನೆಗಳ ಪೈಕಿ ಅಥಣಿಯಲ್ಲಿ ಸುಮಾರು1,500 ಮನೆ ನಿರ್ಮಾಣ ಮಾಡಲಾಗುವುದು. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಪಟ್ಟಣ ಪಂಚಾಯತ್​ ಮತ್ತು ಪುರಸಭೆಗಳಲ್ಲದ ಬೆಳಗಾವಿ ಗ್ರಾಮೀಣ ಹಾಗೂ ಯಮಕನಮರಡಿ ಕ್ಷೇತ್ರಗಳನ್ನು ಹೊರತುಪಡಿಸಿ, ಇನ್ನುಳಿದ 16 ಕ್ಷೇತ್ರಗಳಲ್ಲಿ ಮಂಡಳಿಯಿಂದ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.