ETV Bharat / state

ಸರಕಾರಿ ಶಾಲೆಗೆ ಮಕ್ಕಳನ್ನು ಸೆಳೆಯಲು ವಿನೂತನ ಕಾರ್ಯಕ್ರಮ!

ಮಕ್ಕಳನ್ನು ಎತ್ತಿನ ಬಂಡಿ ಮೂಲಕ ಸುತ್ತಮುತ್ತಲಿನ ನಗರದಲ್ಲಿ ಮೆರವಣಿಗೆ ಮಾಡಿ, ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಊಟ ಮಾಡಿಸುವುದರ ಜೊತೆಗೆ ಹಲವಾರು ವಿಶೇಷ ಕಾರ್ಯಕ್ರಮ ರೂಪಿಸಿ ಮಕ್ಕಳನ್ನು ಆಕರ್ಷಿಸುತ್ತಿದ್ದಾರೆ.

author img

By

Published : May 29, 2019, 1:58 PM IST

ಸರಕಾರಿ ಶಾಲೆಗೆ ಮಕ್ಕಳನ್ನು ಸೆಳೆಯಲು ವಿನೂತನವಾಗಿ ಕಾರ್ಯಕ್ರಮ

ಚಿಕ್ಕೋಡಿ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರಕಾರಿ ಶಾಲೆಗೆ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ತೀರ ಕಡಿಮೆಯಾಗುತ್ತಿದೆ. ಇಂಥ ಪರಿಸ್ಥಿತಿಯನ್ನು ತಪ್ಪಿಸಲು ತಾಲೂಕಿನ ವಿದ್ಯಾನಗರದ ನಮ್ಮೂರ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ ರೂಪಿಸಿದ್ದಾರೆ.

ಶಾಲೆಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಈಗಾಗಲೇ ಪ್ರವೇಶ ಪಡೆದ ಮಕ್ಕಳನ್ನು ಎತ್ತಿನ ಬಂಡಿ ಮೂಲಕ ಸುತ್ತಮುತ್ತಲಿನ ನಗರದಲ್ಲಿ ಮೆರವಣಿಗೆ ಮಾಡಿ, ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಊಟ ಮಾಡಿಸುವುದರ ಜೊತೆಗೆ ಹಲವಾರು ವಿಶೇಷ ಕಾರ್ಯಕ್ರಮ ರೂಪಿಸಿ ಮಕ್ಕಳನ್ನು ಆಕರ್ಷಿಸುತ್ತಿದ್ದಾರೆ.

ಸರಕಾರಿ ಶಾಲೆಗೆ ಮಕ್ಕಳನ್ನು ಸೆಳೆಯಲು ವಿನೂತನವಾಗಿ ಕಾರ್ಯಕ್ರಮ

ಚಿಕ್ಕೋಡಿಯ ವಿದ್ಯಾನಗರದ ಸರಕಾರಿ ಶಾಲೆಯಲ್ಲಿ 2 ನೇ ತರಗತಿಯಿಂದ 5 ನೇ ತರಗತಿ ವರೆಗೆ ಒಟ್ಟು 40 ವಿದ್ಯಾರ್ಥಿಗಳಿದ್ದು, ಈ ವರ್ಷ 1 ನೇ ತರಗತಿಗೆ 6 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಒಟ್ಟು 10 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆ ಇದೆ ಎಂದು ಇಲ್ಲಿನ ಶಿಕ್ಷಕರು ತಿಳಿಸಿದ್ದಾರೆ.

ಈ ಸರಕಾರಿ ಶಾಲೆಯ 100 ಮೀ ಅಂತರದಲ್ಲಿರುವ ಖಾಸಗಿ ಶಾಲೆ ಮಕ್ಕಳಿಗೆ ಬಸ್ ವ್ಯವಸ್ಥೆ ಕಲ್ಪಿಸಿರುವುದರಿಂದ ನಗರದ ಬಹುತೇಕ ಪಾಲಕರು ಖಾಸಗಿ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಇದರಿಂದ ಸ್ವಲ್ಪ ಮಟ್ಟಿಗೆ ಸರಕಾರಿ ಶಾಲೆಯಲ್ಲಿ ಪ್ರವೇಶಾತಿ ಕಡಿಮೆಯಾಗುತ್ತಿದೆ. ಆದರೂ ಇಲ್ಲಿನ ಶಿಕ್ಷಕರು ಛಲ ಬಿಡದೆ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ವಿನೂತನ ಕಾರ್ಯಕ್ರಮ ನೀಡಿ ಪಾಲಕರು ಹಾಗೂ ಮಕ್ಕಳನ್ನು ಸೆಳೆಯುತ್ತಿದ್ದಾರೆ.

ಚಿಕ್ಕೋಡಿ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರಕಾರಿ ಶಾಲೆಗೆ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ತೀರ ಕಡಿಮೆಯಾಗುತ್ತಿದೆ. ಇಂಥ ಪರಿಸ್ಥಿತಿಯನ್ನು ತಪ್ಪಿಸಲು ತಾಲೂಕಿನ ವಿದ್ಯಾನಗರದ ನಮ್ಮೂರ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ ರೂಪಿಸಿದ್ದಾರೆ.

ಶಾಲೆಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಈಗಾಗಲೇ ಪ್ರವೇಶ ಪಡೆದ ಮಕ್ಕಳನ್ನು ಎತ್ತಿನ ಬಂಡಿ ಮೂಲಕ ಸುತ್ತಮುತ್ತಲಿನ ನಗರದಲ್ಲಿ ಮೆರವಣಿಗೆ ಮಾಡಿ, ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಊಟ ಮಾಡಿಸುವುದರ ಜೊತೆಗೆ ಹಲವಾರು ವಿಶೇಷ ಕಾರ್ಯಕ್ರಮ ರೂಪಿಸಿ ಮಕ್ಕಳನ್ನು ಆಕರ್ಷಿಸುತ್ತಿದ್ದಾರೆ.

ಸರಕಾರಿ ಶಾಲೆಗೆ ಮಕ್ಕಳನ್ನು ಸೆಳೆಯಲು ವಿನೂತನವಾಗಿ ಕಾರ್ಯಕ್ರಮ

ಚಿಕ್ಕೋಡಿಯ ವಿದ್ಯಾನಗರದ ಸರಕಾರಿ ಶಾಲೆಯಲ್ಲಿ 2 ನೇ ತರಗತಿಯಿಂದ 5 ನೇ ತರಗತಿ ವರೆಗೆ ಒಟ್ಟು 40 ವಿದ್ಯಾರ್ಥಿಗಳಿದ್ದು, ಈ ವರ್ಷ 1 ನೇ ತರಗತಿಗೆ 6 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಒಟ್ಟು 10 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆ ಇದೆ ಎಂದು ಇಲ್ಲಿನ ಶಿಕ್ಷಕರು ತಿಳಿಸಿದ್ದಾರೆ.

ಈ ಸರಕಾರಿ ಶಾಲೆಯ 100 ಮೀ ಅಂತರದಲ್ಲಿರುವ ಖಾಸಗಿ ಶಾಲೆ ಮಕ್ಕಳಿಗೆ ಬಸ್ ವ್ಯವಸ್ಥೆ ಕಲ್ಪಿಸಿರುವುದರಿಂದ ನಗರದ ಬಹುತೇಕ ಪಾಲಕರು ಖಾಸಗಿ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಇದರಿಂದ ಸ್ವಲ್ಪ ಮಟ್ಟಿಗೆ ಸರಕಾರಿ ಶಾಲೆಯಲ್ಲಿ ಪ್ರವೇಶಾತಿ ಕಡಿಮೆಯಾಗುತ್ತಿದೆ. ಆದರೂ ಇಲ್ಲಿನ ಶಿಕ್ಷಕರು ಛಲ ಬಿಡದೆ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ವಿನೂತನ ಕಾರ್ಯಕ್ರಮ ನೀಡಿ ಪಾಲಕರು ಹಾಗೂ ಮಕ್ಕಳನ್ನು ಸೆಳೆಯುತ್ತಿದ್ದಾರೆ.

Intro:ಸರಕಾರಿ ಶಾಲೆಗೆ ಪ್ರವೇಶ ಪಡೆಯಲು ವಿನೂತನವಾಗಿ ಕಾರ್ಯಕ್ರಮ ಆಯೋಜನೆ
Body:
ಚಿಕ್ಕೋಡಿ :

ಚಿಕ್ಕೋಡಿ ತಾಲೂಕಿನ ವಿದ್ಯಾನಗರದ ನಮ್ಮೂರ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಶಾಲಾ ಮಕ್ಕಳ ಪ್ರವೇಶ ಪಡೆದ ಮಕ್ಕಳನ್ನು ತೆರು ಭಂಡಿ ಮೂಲಕ ಸುತ್ತಮುತ್ತಲಿನ ನಗರದಲ್ಲಿ ಮೆರವಣಿಗೆ ಮಾಡಿ ವಿದ್ಯಾರ್ಥಿಗಳಿಗೆ ಸಿಹಿ ಊಟ ಮಾಡಿಸಿ ಸರಕಾರಿ ಶಾಲೆ ವಿಶೇಷ ಕಾರ್ಯಕ್ರಮ ಮಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಆಕರ್ಷಿಸಿದೆ.

ಚಿಕ್ಕೋಡಿಯ ವಿದ್ಯಾನಗರದ ಸರಕಾರಿ ಶಾಲೆಯಲ್ಲಿ 2 ನೇ ತರಗತಿಯಿಂದ 5 ನೇ ತರಗತಿ ವರೆಗೆ ಒಟ್ಟು 40 ವಿದ್ಯಾರ್ಥಿಗಳಿದ್ದು ಈ ವರ್ಷ 1 ನೇ ತರಗತಿಗೇ 6 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ ಒಟ್ಟು 10 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನೀರಿಕ್ಷೆ ಇದೆ ಎಂದು ಇಲ್ಲಿನ ಶಿಕ್ಷಕರು ಹೇಳುತ್ತಾರೆ.

ಈ ಸರಕಾರಿ ಶಾಲೆ 100 ಮೀ ಅಂತರದಲ್ಲಿ ಖಾಸಗಿ ಶಾಲೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿರುವುದರಿಂದ ನಗರದ ಬಹುತೇಕ ಪಾಲಕರು ಖಾಸಗಿ ಶಾಲೆಗಳ ಕಡೆ ಮುಖ ಮಾಡಿವೆ. ಏಕೆಂದರೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಲ್ಲ ಇದರಿಂದ ಸ್ವಲ್ಪ ಮಟ್ಟಿಗೆ ಸರಕಾರಿ ಶಾಲೆಯಲ್ಲಿ ಪ್ರವೇಶಾತಿ ಕಡಿಮೆಯಾಗುತ್ತಿವೆ. ಆದರೂ ಇಲ್ಲಿನ ಶಿಕ್ಷಕರು ಛಲ ಬಿಡದೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ವಿನೂತನ ಕಾರ್ಯಕ್ರಮ ಮಾಡಿ ಪಾಲಕರನ್ನು ಹಾಗೂ ವಿದ್ಯಾರ್ಥಿಗಳನ್ನು ಇಲ್ಲಿನ ಶಿಕ್ಷಕರು ಸೆಳೆಯುತ್ತಿದ್ದಾರೆ.

Conclusion:ಸಂಜಯ ಕೌಲಗಿ‌
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.