ಬೆಳಗಾವಿ: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ನಗರದ ಬಸವನ ಕುಡಚಿಯ ನವಗ್ರಹ ದೇವಸ್ಥಾನದಲ್ಲಿ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಸಿ ನೆಟ್ಟರು.
ಅಧಿಕಾರಿಯ ಅಭಿಮಾನಿ ಬಳಗದಿಂದ 100 ಸಸಿ ನೆಡುವ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ನವಗ್ರಹ ದೇವಸ್ಥಾನದಲ್ಲಿ ಅಭಿಷೇಕ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಚೆನ್ನಣ್ಣವರ್ ಸೇವೆ ಹೀಗೆಯೇ ಮುಂದುವರಿಯಲಿ. ನ್ಯಾಯದ ಪರ ಕೆಲಸ ಮಾಡಲಿ, ದೇವರು ಅವರಿಗೆ ಒಳ್ಳೆಯ ಆರೋಗ್ಯ ನೀಡಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.