ETV Bharat / state

ಎಂಇಎಸ್ ನಿಷೇಧಿಸುವಂತೆ ರಕ್ತದಲ್ಲಿ ಪತ್ರ ಬರೆದ ಕರ್ನಾಟಕ ‌ನವ ನಿರ್ಮಾಣ ಸೇನೆ

ನಾಡದ್ರೋಹಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ, ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಿಗೆ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.

author img

By

Published : Feb 3, 2020, 12:21 PM IST

Updated : Feb 3, 2020, 2:08 PM IST

Karnataka Nava nirmana Sene
ರಕ್ತದಲ್ಲಿ ಪತ್ರ ಬರೆದ ಕರ್ನಾಟಕ ‌ನವ ನಿರ್ಮಾಣ ಸೇನೆ

ಬೆಳಗಾವಿ: ಗಡಿ ಭಾಗದಲ್ಲಿ ಭಾಷಾ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ನಾಡದ್ರೋಹಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ, ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಿಗೆ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.

ಬೆಳಗಾವಿಯ ಜಿಲ್ಲಾ ಪಂಚಾಯಿತಿಗೆ ಆಗಮಿಸಿ, ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ. ಕೆ.ಎಲ್. ಮಂಜುನಾಥ ಅವರನ್ನು ಭೇಟಿ ಮಾಡಿ, ಕನಸೇ ಕಾರ್ಯಕರ್ತರು ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ರಕ್ತದಲ್ಲಿ ಪತ್ರ ಬರೆದ ಕರ್ನಾಟಕ ‌ನವ ನಿರ್ಮಾಣ ಸೇನೆ

ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ ನೇತೃತ್ವದಲ್ಲಿ ರಕ್ತದಲ್ಲಿ ಪತ್ರ ಬರೆಯಲಾಗಿತ್ತು. ಅಲ್ಲದೇ ಈ ಪತ್ರವನ್ನು ಗಡಿ ಸಂರಕ್ಷಣಾ ಆಯೋಗದ ಕಚೇರಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ವರ್ಗಾಯಿಸಬೇಕು. ಶಿವಸೇನೆ ಮತ್ತು ಎಂಇಎಸ್​​​ ನಿಷೇಧಿಸುವಂತೆ ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹ ಮಾಡಲಿದ್ದಾರೆ.

ಬೆಳಗಾವಿ: ಗಡಿ ಭಾಗದಲ್ಲಿ ಭಾಷಾ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ನಾಡದ್ರೋಹಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ, ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಿಗೆ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.

ಬೆಳಗಾವಿಯ ಜಿಲ್ಲಾ ಪಂಚಾಯಿತಿಗೆ ಆಗಮಿಸಿ, ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ. ಕೆ.ಎಲ್. ಮಂಜುನಾಥ ಅವರನ್ನು ಭೇಟಿ ಮಾಡಿ, ಕನಸೇ ಕಾರ್ಯಕರ್ತರು ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ರಕ್ತದಲ್ಲಿ ಪತ್ರ ಬರೆದ ಕರ್ನಾಟಕ ‌ನವ ನಿರ್ಮಾಣ ಸೇನೆ

ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ ನೇತೃತ್ವದಲ್ಲಿ ರಕ್ತದಲ್ಲಿ ಪತ್ರ ಬರೆಯಲಾಗಿತ್ತು. ಅಲ್ಲದೇ ಈ ಪತ್ರವನ್ನು ಗಡಿ ಸಂರಕ್ಷಣಾ ಆಯೋಗದ ಕಚೇರಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ವರ್ಗಾಯಿಸಬೇಕು. ಶಿವಸೇನೆ ಮತ್ತು ಎಂಇಎಸ್​​​ ನಿಷೇಧಿಸುವಂತೆ ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹ ಮಾಡಲಿದ್ದಾರೆ.

Last Updated : Feb 3, 2020, 2:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.