ETV Bharat / state

ಅಥಣಿಯಲ್ಲಿ ಕೊರೊನಾ ಅಬ್ಬರ: ಸಮುದಾಯದ ಆಸ್ಪತ್ರೆಯಲ್ಲಿನ ಬೆಡ್ ಪೂರ್ಣ...!

ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಬೆಡ್ ಭರ್ತಿಯಾಗಿದ್ದು, ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

author img

By

Published : May 3, 2021, 9:44 PM IST

athani
athani

ಅಥಣಿ: ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೊರೊನಾ ಅಬ್ಬರದಿಂದಾಗಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಪರದಾಡುವಂತಾಗಿದೆ. ಸದ್ಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಬೆಡ್​ಗಳು ಪೂರ್ಣ ಪ್ರಮಾಣದಲ್ಲಿ ತುಂಬಿದ್ದರಿಂದ ತಾಲೂಕಿನ ಜನರಿಗೆ ಆತಂಕಕ್ಕೆ ಕಾರಣವಾಗಿದೆ.

ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಹಿತ 50 ಬೆಡ್ ವ್ಯವಸ್ಥೆ ನಿರ್ಮಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಆಸ್ಪತ್ರೆಯಲ್ಲಿ 53 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇದರಿಂದಾಗಿ ಅಥಣಿಯಲ್ಲಿ ಆಕ್ಸಿಜನ್ ಹಾಸಿಗೆಗಳು ಪೂರ್ಣಪ್ರಮಾಣದಲ್ಲಿ ತುಂಬಿರುವುದರಿಂದ ಕೊರೊನಾ ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಕೋವಿಡ್-19ಎರಡನೇ ಅಲೆಯಾಗಿ ಅಥಣಿ ಹಾಗೂ ಕಾಗವಾಡ ತಾಲೂಕಿನಲ್ಲಿ ಒಟ್ಟು 519 ಪ್ರಕರಣಗಳು ದಾಖಲಾಗಿವೆ. 389 ಸಕ್ರಿಯ, 25 ಜನರು ಮರಣ ಹೊಂದಿರುವ ದಾಖಲೆ ಇದೆ. 266 ಅಥಣಿ ತಾಲೂಕಿನ, 122 ಕಾಗವಾಡ ತಾಲೂಕಿನ ಸಕ್ರಿಯ ಪ್ರಕರಣಗಳಾಗಿವೆ.

ತಾಲೂಕು ಆಸ್ಪತ್ರೆಯಲ್ಲಿ ಬೆಡ್ ತುಂಬಿದ್ದರಿಂದ ಪರ್ಯಾಯವಾಗಿ ಅಥಣಿ ಹೊರವಲಯದಲ್ಲಿ ಆಕ್ಸಿಜನ್ ಸಮೇತ ಆಸ್ಪತ್ರೆ ಪ್ರಾರಂಭಕ್ಕೆ ಮೇಲಧಿಕಾರಿಗಳಿಂದ ಸೂಚನೆ ಸಿಕ್ಕಿದೆ, ತುರ್ತಾಗಿ ಆಸ್ಪತ್ರೆ ಪ್ರಾರಂಭ ಮಾಡುತ್ತೇವೆ, ಹಾಗೂ ಸದ್ಯದ ಮಟ್ಟಿಗೆ ರೆಮ್ಡೆಸಿವಿರ್ ಔಷಧ ಕೊರತೆ ಇಲ್ಲ ಎಂದು ಅಥಣಿ ವೈದ್ಯಾಧಿಕಾರಿ ಬಸನಗೌಡ ಕಾಗೆ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

ಅಥಣಿ: ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೊರೊನಾ ಅಬ್ಬರದಿಂದಾಗಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಪರದಾಡುವಂತಾಗಿದೆ. ಸದ್ಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಬೆಡ್​ಗಳು ಪೂರ್ಣ ಪ್ರಮಾಣದಲ್ಲಿ ತುಂಬಿದ್ದರಿಂದ ತಾಲೂಕಿನ ಜನರಿಗೆ ಆತಂಕಕ್ಕೆ ಕಾರಣವಾಗಿದೆ.

ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಹಿತ 50 ಬೆಡ್ ವ್ಯವಸ್ಥೆ ನಿರ್ಮಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಆಸ್ಪತ್ರೆಯಲ್ಲಿ 53 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇದರಿಂದಾಗಿ ಅಥಣಿಯಲ್ಲಿ ಆಕ್ಸಿಜನ್ ಹಾಸಿಗೆಗಳು ಪೂರ್ಣಪ್ರಮಾಣದಲ್ಲಿ ತುಂಬಿರುವುದರಿಂದ ಕೊರೊನಾ ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಕೋವಿಡ್-19ಎರಡನೇ ಅಲೆಯಾಗಿ ಅಥಣಿ ಹಾಗೂ ಕಾಗವಾಡ ತಾಲೂಕಿನಲ್ಲಿ ಒಟ್ಟು 519 ಪ್ರಕರಣಗಳು ದಾಖಲಾಗಿವೆ. 389 ಸಕ್ರಿಯ, 25 ಜನರು ಮರಣ ಹೊಂದಿರುವ ದಾಖಲೆ ಇದೆ. 266 ಅಥಣಿ ತಾಲೂಕಿನ, 122 ಕಾಗವಾಡ ತಾಲೂಕಿನ ಸಕ್ರಿಯ ಪ್ರಕರಣಗಳಾಗಿವೆ.

ತಾಲೂಕು ಆಸ್ಪತ್ರೆಯಲ್ಲಿ ಬೆಡ್ ತುಂಬಿದ್ದರಿಂದ ಪರ್ಯಾಯವಾಗಿ ಅಥಣಿ ಹೊರವಲಯದಲ್ಲಿ ಆಕ್ಸಿಜನ್ ಸಮೇತ ಆಸ್ಪತ್ರೆ ಪ್ರಾರಂಭಕ್ಕೆ ಮೇಲಧಿಕಾರಿಗಳಿಂದ ಸೂಚನೆ ಸಿಕ್ಕಿದೆ, ತುರ್ತಾಗಿ ಆಸ್ಪತ್ರೆ ಪ್ರಾರಂಭ ಮಾಡುತ್ತೇವೆ, ಹಾಗೂ ಸದ್ಯದ ಮಟ್ಟಿಗೆ ರೆಮ್ಡೆಸಿವಿರ್ ಔಷಧ ಕೊರತೆ ಇಲ್ಲ ಎಂದು ಅಥಣಿ ವೈದ್ಯಾಧಿಕಾರಿ ಬಸನಗೌಡ ಕಾಗೆ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.