ETV Bharat / state

ಸರ್ಕಾರ ಬಡವರಿಗಾಗಿರಬೇಕು, ಅಂಬಾನಿ-ಅದಾನಿಗೋಸ್ಕರ ಅಲ್ಲ : ಸತೀಶ್​ ಜಾರಕಿಹೊಳಿ‌

author img

By

Published : Apr 4, 2021, 4:58 PM IST

ಒಂದು ಮತವು ಬಹಳ ಬೆಲೆಯುಳ್ಳದ್ದಾಗಿದೆ. ಯಾವುದೇ ಸರ್ಕಾರ ಬೀಳಿಸುವ, ತರುವ ಶಕ್ತಿ ಒಂದು ಮತಕ್ಕಿದೆ. ಜನರ ಕಷ್ಟ ಆಲಿಸುವ ಕೆಲಸ ಸರ್ಕಾರ ಮಾಡಬೇಕು. ಕಳೆದ ನಾಲ್ಕು ತಿಂಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ..

KPCC president Satish Jarakiholi barraged against central government
ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ವಾಗ್ದಾಳಿ

ಬೆಳಗಾವಿ : ಬೆಲೆ ಏರಿಕೆ ತಡೆಯಲು ಕೇಂದ್ರ, ರಾಜ್ಯದಲ್ಲಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು. ದೇಶದಲ್ಲಿ ಅದಾನಿಗಾಗಲಿ, ಅಂಬಾನಿಗಾಗಲಿ ಸರ್ಕಾರ ಇರಬಾರದು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಉಪಚುನಾವಣೆ ಹಿನ್ನೆಲೆ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ರೈತರು, ದಲಿತರು, ಹಿಂದುಳಿದವರು, ಜನರ ಪರ ಸರ್ಕಾರವಿರಬೇಕು. ದೆಹಲಿ ಸರ್ಕಾರ ಕೇವಲ ಎರಡ್ಮೂರು ಜನರಿಗಾಗಿ ನಡೀತಿದೆ. ಇದನ್ನ ತಡೆಯಲು ಈ ಚುನಾವಣೆ ಮೂಲಕ ಸರ್ಕಾರಕ್ಕೆ ಉತ್ತರಿಸಬೇಕು. ಜನವಿರೋಧಿ ನೀತಿ ಅನುಸರಿಸಿದರೆ ಜನ ತಕ್ಕ ಉತ್ತರ ನೀಡ್ತಾರೆ ಎಂಬ ಸಂದೇಶವನ್ನು ಈ ಚುನಾವಣೆ ಮೂಲಕ ಸಾರಬೇಕಿದೆ.

ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ವಾಗ್ದಾಳಿ

ಒಂದು ಮತವು ಬಹಳ ಬೆಲೆಯುಳ್ಳದ್ದಾಗಿದೆ. ಯಾವುದೇ ಸರ್ಕಾರ ಬೀಳಿಸುವ, ತರುವ ಶಕ್ತಿ ಒಂದು ಮತಕ್ಕಿದೆ. ಜನರ ಕಷ್ಟ ಆಲಿಸುವ ಕೆಲಸ ಸರ್ಕಾರ ಮಾಡಬೇಕು. ಕಳೆದ ನಾಲ್ಕು ತಿಂಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ.

ಆದರೆ, ಈವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಸೆಲೆಬ್ರಿಟಿಗಳ ಬರ್ತ್‌ಡೇಗೆ ವಿಷ್ ಮಾಡಲು ಸಮಯ ಇದೆ. ಆದರೆ, ರೈತರಿಗಾಗಿ ಪ್ರಧಾನಿ ಮೋದಿ ಬಳಿ ಸಮಯ ಇಲ್ಲ. ಯಾರು ಕೆಲಸ ಮಾಡುತ್ತಾರೋ ಅವರ ಕೈಗೆ ಅಧಿಕಾರಬೇಕು ಎಂದಿದ್ದಾರೆ.

ಬೆಳಗಾವಿ : ಬೆಲೆ ಏರಿಕೆ ತಡೆಯಲು ಕೇಂದ್ರ, ರಾಜ್ಯದಲ್ಲಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು. ದೇಶದಲ್ಲಿ ಅದಾನಿಗಾಗಲಿ, ಅಂಬಾನಿಗಾಗಲಿ ಸರ್ಕಾರ ಇರಬಾರದು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಉಪಚುನಾವಣೆ ಹಿನ್ನೆಲೆ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ರೈತರು, ದಲಿತರು, ಹಿಂದುಳಿದವರು, ಜನರ ಪರ ಸರ್ಕಾರವಿರಬೇಕು. ದೆಹಲಿ ಸರ್ಕಾರ ಕೇವಲ ಎರಡ್ಮೂರು ಜನರಿಗಾಗಿ ನಡೀತಿದೆ. ಇದನ್ನ ತಡೆಯಲು ಈ ಚುನಾವಣೆ ಮೂಲಕ ಸರ್ಕಾರಕ್ಕೆ ಉತ್ತರಿಸಬೇಕು. ಜನವಿರೋಧಿ ನೀತಿ ಅನುಸರಿಸಿದರೆ ಜನ ತಕ್ಕ ಉತ್ತರ ನೀಡ್ತಾರೆ ಎಂಬ ಸಂದೇಶವನ್ನು ಈ ಚುನಾವಣೆ ಮೂಲಕ ಸಾರಬೇಕಿದೆ.

ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ವಾಗ್ದಾಳಿ

ಒಂದು ಮತವು ಬಹಳ ಬೆಲೆಯುಳ್ಳದ್ದಾಗಿದೆ. ಯಾವುದೇ ಸರ್ಕಾರ ಬೀಳಿಸುವ, ತರುವ ಶಕ್ತಿ ಒಂದು ಮತಕ್ಕಿದೆ. ಜನರ ಕಷ್ಟ ಆಲಿಸುವ ಕೆಲಸ ಸರ್ಕಾರ ಮಾಡಬೇಕು. ಕಳೆದ ನಾಲ್ಕು ತಿಂಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ.

ಆದರೆ, ಈವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಸೆಲೆಬ್ರಿಟಿಗಳ ಬರ್ತ್‌ಡೇಗೆ ವಿಷ್ ಮಾಡಲು ಸಮಯ ಇದೆ. ಆದರೆ, ರೈತರಿಗಾಗಿ ಪ್ರಧಾನಿ ಮೋದಿ ಬಳಿ ಸಮಯ ಇಲ್ಲ. ಯಾರು ಕೆಲಸ ಮಾಡುತ್ತಾರೋ ಅವರ ಕೈಗೆ ಅಧಿಕಾರಬೇಕು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.